ಮೈಸೂರು: ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ಸ್ಥಳೀಯ ಠಾಣಾ ವ್ಯಾಪ್ತಿಯ 23 ಸ್ಥಳಗಳಲ್ಲಿ 50 ಕೃತಕ ಬುದ್ದಿಮತ್ತೆ (ಎಐ) ಕ್ಯಾಮರಾಗಳನ್ನು ಅಳವಡಿಸಲಾಗಿದೆ.
ಈ ಎಐ ಕ್ಯಾಮರಾಗಳು ಇದೇ ಜುಲೈ. 7ರಿಂದ ತನ್ನ ಕಾರ್ಯನಿರ್ವಹಿಸಲಿದೆ ಎಂದು ಮಾಹಿತಿ ನೀಡಿದೆ.
ಇನ್ಮುಂದೆ ಟ್ರಾಫಿಕ್ ಉಲ್ಲಂಘನೆ ಮಾಡುವವರು ಅಧಿಕೃತ ವೆಬ್ಸೈಟ್ ಮೂಲಕ ದಂಡದ ಮೊತ್ತವನ್ನು ಸ್ಥಳೀಯ ಠಾಣೆಯಲ್ಲಿ ಪಾವತಿಸಬೇಕು ಎಂದು ಇಲಾಖೆ ತಿಳಿಸಿದೆ.
ಜಿಲ್ಲಾ ವ್ಯಾಪ್ತಿಯಲ್ಲಿ ಪ್ರತಿನಿತ್ಯ ಒಂದೆರೆಡು ರಸ್ತೆ ಅಪಘಾತಗಳಿಂದ ಸಾವು ನೋವುಗಳಾಗುತ್ತಿವೆ. ಇವುಗಳನ್ನು ನಿಯಂತ್ರಿಸಲು ಕ್ಯಾಮರಾಗಳನ್ನು ಅಳವಡಿಸಲಾಗಿದೆ. ನಿಯಮ ಉಲ್ಲಂಘಿಸಿ ಚಾಲನೆ ಮಾಡುವವರನ್ನು ಕ್ಯಾಮರಾ ಮೂಲಕ ಸೆರೆಹಿಡಿದು ದಂಡ ವಿಧಿಸಲಾಗುವುದು. ಅಥವಾ http://payfine.mchallan.com:7271 ವೆಬ್ಸೈಟ್ ಮೂಲಕ ಅಥವಾ ಸ್ಥಳೀಯ ಠಾಣೆಗಳಿಗೆ ತೆರಳಿ ದಂಡ ಪಾವತಿಸಬಹುದು ಎಂದು ಪೊಲೀಸ್ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…