ಮೈಸೂರು

ಮೈಸೂರು ಜಿಲ್ಲೆಯಲ್ಲಿ 57 ಸಾವಿರ ಫಸ್ಟ್‌ ಟೈಂ ವೋಟರ್ಸ್

ಮೈಸೂರು : ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಇದೇ ಮೊದಲ ಬಾರಿಗೆ 57 ಸಾವಿರ ಯುವ ಮತದಾರರು ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಸಜ್ಜಾಗಿದ್ದಾರೆ. ಮೇ 10ರಂದು ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದ್ದು, ಜಿಲ್ಲಾಡಳಿತ ಸಕಲ ತಯಾರಿ ನಡೆಸುತ್ತಿದೆ. ಮತಪ್ರಮಾಣ ಹೆಚ್ಚು ಮಾಡಲು ಸ್ವೀಪ್‌ ಸಮಿತಿ ಜಿಲ್ಲಾದ್ಯಂತ ಸಕ್ರಿಯವಾಗಿ ಕೆಲಸ ಮಾಡುತ್ತಿದೆ.

ಜಿಲ್ಲೆಯಲ್ಲಿ 26,38,487 ಮತದಾರರಿದ್ದು, ಇದರಲ್ಲಿ 18ರಿಂದ 19 ವರ್ಷದೊಳಗಿನ 57,048 ಯುವ ಮತದಾರರು ಮೊದಲ ಬಾರಿಗೆ ಮತದಾನ ಮಾಡುವ ಉತ್ಸಾಹದಲ್ಲಿದ್ದಾರೆ. ಯುವ ಮತದಾನವನ್ನು ಉತ್ತೇಜಿಸುವ ಸಲುವಾಗಿ ಮೈಸೂರು ಜಿಲ್ಲೆಯ 11 ಕ್ಷೇತ್ರಗಳಲ್ಲೂ ತಲಾ ಒಂದೊಂದು ಯುವಮತಗಟ್ಟೆ ಸ್ಥಾಪನೆ ಮಾಡಲಾಗುತ್ತಿದೆ. ಯುವ ಅಧಿಕಾರಿಗಳನ್ನೇ ಇಲ್ಲಿಗೆ ನಿಯೋಜನೆ ಮಾಡಿರುವುದು ವಿಶೇಷ.

ದೇಶಕ್ಕೆ ಯುವಜನರೆ ಆಸ್ತಿ. ಯುವಶಕ್ತಿ ದೇಶದ ಸಂಪತ್ತು ಕೂಡ. ಮತದಾನ ಪ್ರಕ್ರಿಯೆಯಲ್ಲಿ ಯುವಜನತೆ ಹೆಚ್ಚು ಭಾಗವಹಿಸಬೇಕು ಎಂಬ ಕಾರಣಕ್ಕೆ ಈ ಬಾರಿ ಕಾಲೇಜು ಸೇರಿದಂತೆ ಹಲವೆಡೆ ಮತಜಾಗೃತಿ ಮಾಡಲಾಗಿದೆ. 57 ಸಾವಿರ ಯುವ ಮತದಾರರು ಮೊದಲ ಬಾರಿಗೆ ಮತ ಚಲಾಯಿಸುತ್ತಿರುವುದು ಖುಷಿ ತಂದಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

ಎಲ್ಲೆಲ್ಲಿ ಎಷ್ಟೆಷ್ಟು ಯುವ ಮತದಾರರು : ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಅತಿಹೆಚ್ಚು ಸಂಖ್ಯೆ ಯುವ ಮತದಾರರಿದ್ದಾರೆ. 7,644 ಮಂದಿ ಮೊದಲ ಬಾರಿಗೆ ಮತಚಲಾಯಿಸಲು ಸಿದ್ಧರಾಗಿದ್ದಾರೆ. ಅಂತೆಯೇ ಹುಣಸೂರು ಕ್ಷೇತ್ರದಲ್ಲಿ 6,473,ಕೆ.ಆರ್‌.ನಗರ ಕ್ಷೇತ್ರದಲ್ಲಿ 6043, ಪಿರಿಯಾಪಟ್ಟಣ ಕ್ಷೇತ್ರದಲ್ಲಿ 5,243, ಎನ್‌.ಆರ್‌.ಕ್ಷೇತ್ರದಲ್ಲಿ 5,919, ವರುಣ ಕ್ಷೇತ್ರದಲ್ಲಿ 5,022, ಎಚ್‌.ಡಿ.ಕೋಟೆ ಕ್ಷೇತ್ರದಲ್ಲಿ4,925, ತಿ.ನರಸೀಪುರ ಕ್ಷೇತ್ರದಲ್ಲಿ 4,118, ನಂಜನಗೂಡು ಕ್ಷೇತ್ರದಲ್ಲಿ 4,027, ಕೆ.ಆರ್‌.ಕ್ಷೇತ್ರದಲ್ಲಿ 3,704, ಚಾಮರಾಜ ಕ್ಷೇತ್ರದಲ್ಲಿ 3,860 ಯುವ ಮತದಾರರಿದ್ದಾರೆ.

lokesh

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

2 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

2 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

2 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

2 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

3 hours ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

3 hours ago