ಮೈಸೂರು

ಮೈಸೂರು ಜಿಲ್ಲೆಯಲ್ಲಿ 57 ಸಾವಿರ ಫಸ್ಟ್‌ ಟೈಂ ವೋಟರ್ಸ್

ಮೈಸೂರು : ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಇದೇ ಮೊದಲ ಬಾರಿಗೆ 57 ಸಾವಿರ ಯುವ ಮತದಾರರು ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಸಜ್ಜಾಗಿದ್ದಾರೆ. ಮೇ 10ರಂದು ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದ್ದು, ಜಿಲ್ಲಾಡಳಿತ ಸಕಲ ತಯಾರಿ ನಡೆಸುತ್ತಿದೆ. ಮತಪ್ರಮಾಣ ಹೆಚ್ಚು ಮಾಡಲು ಸ್ವೀಪ್‌ ಸಮಿತಿ ಜಿಲ್ಲಾದ್ಯಂತ ಸಕ್ರಿಯವಾಗಿ ಕೆಲಸ ಮಾಡುತ್ತಿದೆ.

ಜಿಲ್ಲೆಯಲ್ಲಿ 26,38,487 ಮತದಾರರಿದ್ದು, ಇದರಲ್ಲಿ 18ರಿಂದ 19 ವರ್ಷದೊಳಗಿನ 57,048 ಯುವ ಮತದಾರರು ಮೊದಲ ಬಾರಿಗೆ ಮತದಾನ ಮಾಡುವ ಉತ್ಸಾಹದಲ್ಲಿದ್ದಾರೆ. ಯುವ ಮತದಾನವನ್ನು ಉತ್ತೇಜಿಸುವ ಸಲುವಾಗಿ ಮೈಸೂರು ಜಿಲ್ಲೆಯ 11 ಕ್ಷೇತ್ರಗಳಲ್ಲೂ ತಲಾ ಒಂದೊಂದು ಯುವಮತಗಟ್ಟೆ ಸ್ಥಾಪನೆ ಮಾಡಲಾಗುತ್ತಿದೆ. ಯುವ ಅಧಿಕಾರಿಗಳನ್ನೇ ಇಲ್ಲಿಗೆ ನಿಯೋಜನೆ ಮಾಡಿರುವುದು ವಿಶೇಷ.

ದೇಶಕ್ಕೆ ಯುವಜನರೆ ಆಸ್ತಿ. ಯುವಶಕ್ತಿ ದೇಶದ ಸಂಪತ್ತು ಕೂಡ. ಮತದಾನ ಪ್ರಕ್ರಿಯೆಯಲ್ಲಿ ಯುವಜನತೆ ಹೆಚ್ಚು ಭಾಗವಹಿಸಬೇಕು ಎಂಬ ಕಾರಣಕ್ಕೆ ಈ ಬಾರಿ ಕಾಲೇಜು ಸೇರಿದಂತೆ ಹಲವೆಡೆ ಮತಜಾಗೃತಿ ಮಾಡಲಾಗಿದೆ. 57 ಸಾವಿರ ಯುವ ಮತದಾರರು ಮೊದಲ ಬಾರಿಗೆ ಮತ ಚಲಾಯಿಸುತ್ತಿರುವುದು ಖುಷಿ ತಂದಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

ಎಲ್ಲೆಲ್ಲಿ ಎಷ್ಟೆಷ್ಟು ಯುವ ಮತದಾರರು : ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಅತಿಹೆಚ್ಚು ಸಂಖ್ಯೆ ಯುವ ಮತದಾರರಿದ್ದಾರೆ. 7,644 ಮಂದಿ ಮೊದಲ ಬಾರಿಗೆ ಮತಚಲಾಯಿಸಲು ಸಿದ್ಧರಾಗಿದ್ದಾರೆ. ಅಂತೆಯೇ ಹುಣಸೂರು ಕ್ಷೇತ್ರದಲ್ಲಿ 6,473,ಕೆ.ಆರ್‌.ನಗರ ಕ್ಷೇತ್ರದಲ್ಲಿ 6043, ಪಿರಿಯಾಪಟ್ಟಣ ಕ್ಷೇತ್ರದಲ್ಲಿ 5,243, ಎನ್‌.ಆರ್‌.ಕ್ಷೇತ್ರದಲ್ಲಿ 5,919, ವರುಣ ಕ್ಷೇತ್ರದಲ್ಲಿ 5,022, ಎಚ್‌.ಡಿ.ಕೋಟೆ ಕ್ಷೇತ್ರದಲ್ಲಿ4,925, ತಿ.ನರಸೀಪುರ ಕ್ಷೇತ್ರದಲ್ಲಿ 4,118, ನಂಜನಗೂಡು ಕ್ಷೇತ್ರದಲ್ಲಿ 4,027, ಕೆ.ಆರ್‌.ಕ್ಷೇತ್ರದಲ್ಲಿ 3,704, ಚಾಮರಾಜ ಕ್ಷೇತ್ರದಲ್ಲಿ 3,860 ಯುವ ಮತದಾರರಿದ್ದಾರೆ.

lokesh

Recent Posts

ಮಹದೇಶ್ವರ ಬೆಟ್ಟ| ಭಕ್ತರಿಗೆ ಗುಣಮಟ್ಟದ ಪ್ರಸಾದ ವಿತರಿಸಬೇಕು: ಎ.ಈ.ರಘು ಖಡಕ್‌ ಸೂಚನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದಾಸೋಹ ಭವನಕ್ಕೆ ಬರುವ…

25 mins ago

ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ: ಕೆ.ಎನ್‌.ರಾಜಣ್ಣ

ಬೆಂಗಳೂರು: ಮುಂದಿನ ಸಲ ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ…

2 hours ago

ರಾಜ್ಯ ರಾಜಕಾರಣಕ್ಕೆ ವಾಪಸ್‌ ಆಗುವ ಚಿಂತನೆ ಇಲ್ಲ: ವಿ.ಸೋಮಣ್ಣ

ಬೆಂಗಳೂರು: ನಾನು ರಾಜ್ಯ ರಾಜಕಾರಣಕ್ಕೆ ಬರುವ ಯೋಚನೆ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…

2 hours ago

ಮೈಸೂರು ಮುಡಾ ಹಗರಣ: ಹೊಸ ಬಾಂಬ್‌ ಸಿಡಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ರಾಜ್ಯ ಮುಖ್ಯ…

3 hours ago

ಗುಂಡಾಲ್‌ ಜಲಾಶಯದಲ್ಲಿ ಹುಲಿ ಶವ ಪತ್ತೆ ಪ್ರಕರಣ: ಸ್ಕೂಟರ್‌ ಕ್ಲಚ್‌ ವೈರ್‌ ಉರುಳಿಗೆ ವ್ಯಾಘ್ರ ಬಲಿ?

ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…

3 hours ago

ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್‌ಗೆ ಭೇಟಿ: ನೆತನ್ಯಾಹು ಘೋಷಣೆ

ಟೆಲ್‌ ಅವಿವ್:‌ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್‌ಗೆ ಪ್ರಯಾಣಿಸಲಿದ್ದಾರೆ ಎಂದು…

3 hours ago