ಮೈಸೂರು

ಮೈಸೂರು ಜಿಲ್ಲೆಯಲ್ಲಿ 57 ಸಾವಿರ ಫಸ್ಟ್‌ ಟೈಂ ವೋಟರ್ಸ್

ಮೈಸೂರು : ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಇದೇ ಮೊದಲ ಬಾರಿಗೆ 57 ಸಾವಿರ ಯುವ ಮತದಾರರು ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಸಜ್ಜಾಗಿದ್ದಾರೆ. ಮೇ 10ರಂದು ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದ್ದು, ಜಿಲ್ಲಾಡಳಿತ ಸಕಲ ತಯಾರಿ ನಡೆಸುತ್ತಿದೆ. ಮತಪ್ರಮಾಣ ಹೆಚ್ಚು ಮಾಡಲು ಸ್ವೀಪ್‌ ಸಮಿತಿ ಜಿಲ್ಲಾದ್ಯಂತ ಸಕ್ರಿಯವಾಗಿ ಕೆಲಸ ಮಾಡುತ್ತಿದೆ.

ಜಿಲ್ಲೆಯಲ್ಲಿ 26,38,487 ಮತದಾರರಿದ್ದು, ಇದರಲ್ಲಿ 18ರಿಂದ 19 ವರ್ಷದೊಳಗಿನ 57,048 ಯುವ ಮತದಾರರು ಮೊದಲ ಬಾರಿಗೆ ಮತದಾನ ಮಾಡುವ ಉತ್ಸಾಹದಲ್ಲಿದ್ದಾರೆ. ಯುವ ಮತದಾನವನ್ನು ಉತ್ತೇಜಿಸುವ ಸಲುವಾಗಿ ಮೈಸೂರು ಜಿಲ್ಲೆಯ 11 ಕ್ಷೇತ್ರಗಳಲ್ಲೂ ತಲಾ ಒಂದೊಂದು ಯುವಮತಗಟ್ಟೆ ಸ್ಥಾಪನೆ ಮಾಡಲಾಗುತ್ತಿದೆ. ಯುವ ಅಧಿಕಾರಿಗಳನ್ನೇ ಇಲ್ಲಿಗೆ ನಿಯೋಜನೆ ಮಾಡಿರುವುದು ವಿಶೇಷ.

ದೇಶಕ್ಕೆ ಯುವಜನರೆ ಆಸ್ತಿ. ಯುವಶಕ್ತಿ ದೇಶದ ಸಂಪತ್ತು ಕೂಡ. ಮತದಾನ ಪ್ರಕ್ರಿಯೆಯಲ್ಲಿ ಯುವಜನತೆ ಹೆಚ್ಚು ಭಾಗವಹಿಸಬೇಕು ಎಂಬ ಕಾರಣಕ್ಕೆ ಈ ಬಾರಿ ಕಾಲೇಜು ಸೇರಿದಂತೆ ಹಲವೆಡೆ ಮತಜಾಗೃತಿ ಮಾಡಲಾಗಿದೆ. 57 ಸಾವಿರ ಯುವ ಮತದಾರರು ಮೊದಲ ಬಾರಿಗೆ ಮತ ಚಲಾಯಿಸುತ್ತಿರುವುದು ಖುಷಿ ತಂದಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

ಎಲ್ಲೆಲ್ಲಿ ಎಷ್ಟೆಷ್ಟು ಯುವ ಮತದಾರರು : ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಅತಿಹೆಚ್ಚು ಸಂಖ್ಯೆ ಯುವ ಮತದಾರರಿದ್ದಾರೆ. 7,644 ಮಂದಿ ಮೊದಲ ಬಾರಿಗೆ ಮತಚಲಾಯಿಸಲು ಸಿದ್ಧರಾಗಿದ್ದಾರೆ. ಅಂತೆಯೇ ಹುಣಸೂರು ಕ್ಷೇತ್ರದಲ್ಲಿ 6,473,ಕೆ.ಆರ್‌.ನಗರ ಕ್ಷೇತ್ರದಲ್ಲಿ 6043, ಪಿರಿಯಾಪಟ್ಟಣ ಕ್ಷೇತ್ರದಲ್ಲಿ 5,243, ಎನ್‌.ಆರ್‌.ಕ್ಷೇತ್ರದಲ್ಲಿ 5,919, ವರುಣ ಕ್ಷೇತ್ರದಲ್ಲಿ 5,022, ಎಚ್‌.ಡಿ.ಕೋಟೆ ಕ್ಷೇತ್ರದಲ್ಲಿ4,925, ತಿ.ನರಸೀಪುರ ಕ್ಷೇತ್ರದಲ್ಲಿ 4,118, ನಂಜನಗೂಡು ಕ್ಷೇತ್ರದಲ್ಲಿ 4,027, ಕೆ.ಆರ್‌.ಕ್ಷೇತ್ರದಲ್ಲಿ 3,704, ಚಾಮರಾಜ ಕ್ಷೇತ್ರದಲ್ಲಿ 3,860 ಯುವ ಮತದಾರರಿದ್ದಾರೆ.

lokesh

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

7 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

7 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

8 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

9 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

14 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

14 hours ago