ಮೈಸೂರು

ಮೈಸೂರು ಜಿಲ್ಲೆಯಲ್ಲಿ 57 ಸಾವಿರ ಫಸ್ಟ್‌ ಟೈಂ ವೋಟರ್ಸ್

ಮೈಸೂರು : ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಇದೇ ಮೊದಲ ಬಾರಿಗೆ 57 ಸಾವಿರ ಯುವ ಮತದಾರರು ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಸಜ್ಜಾಗಿದ್ದಾರೆ. ಮೇ 10ರಂದು ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದ್ದು, ಜಿಲ್ಲಾಡಳಿತ ಸಕಲ ತಯಾರಿ ನಡೆಸುತ್ತಿದೆ. ಮತಪ್ರಮಾಣ ಹೆಚ್ಚು ಮಾಡಲು ಸ್ವೀಪ್‌ ಸಮಿತಿ ಜಿಲ್ಲಾದ್ಯಂತ ಸಕ್ರಿಯವಾಗಿ ಕೆಲಸ ಮಾಡುತ್ತಿದೆ.

ಜಿಲ್ಲೆಯಲ್ಲಿ 26,38,487 ಮತದಾರರಿದ್ದು, ಇದರಲ್ಲಿ 18ರಿಂದ 19 ವರ್ಷದೊಳಗಿನ 57,048 ಯುವ ಮತದಾರರು ಮೊದಲ ಬಾರಿಗೆ ಮತದಾನ ಮಾಡುವ ಉತ್ಸಾಹದಲ್ಲಿದ್ದಾರೆ. ಯುವ ಮತದಾನವನ್ನು ಉತ್ತೇಜಿಸುವ ಸಲುವಾಗಿ ಮೈಸೂರು ಜಿಲ್ಲೆಯ 11 ಕ್ಷೇತ್ರಗಳಲ್ಲೂ ತಲಾ ಒಂದೊಂದು ಯುವಮತಗಟ್ಟೆ ಸ್ಥಾಪನೆ ಮಾಡಲಾಗುತ್ತಿದೆ. ಯುವ ಅಧಿಕಾರಿಗಳನ್ನೇ ಇಲ್ಲಿಗೆ ನಿಯೋಜನೆ ಮಾಡಿರುವುದು ವಿಶೇಷ.

ದೇಶಕ್ಕೆ ಯುವಜನರೆ ಆಸ್ತಿ. ಯುವಶಕ್ತಿ ದೇಶದ ಸಂಪತ್ತು ಕೂಡ. ಮತದಾನ ಪ್ರಕ್ರಿಯೆಯಲ್ಲಿ ಯುವಜನತೆ ಹೆಚ್ಚು ಭಾಗವಹಿಸಬೇಕು ಎಂಬ ಕಾರಣಕ್ಕೆ ಈ ಬಾರಿ ಕಾಲೇಜು ಸೇರಿದಂತೆ ಹಲವೆಡೆ ಮತಜಾಗೃತಿ ಮಾಡಲಾಗಿದೆ. 57 ಸಾವಿರ ಯುವ ಮತದಾರರು ಮೊದಲ ಬಾರಿಗೆ ಮತ ಚಲಾಯಿಸುತ್ತಿರುವುದು ಖುಷಿ ತಂದಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

ಎಲ್ಲೆಲ್ಲಿ ಎಷ್ಟೆಷ್ಟು ಯುವ ಮತದಾರರು : ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಅತಿಹೆಚ್ಚು ಸಂಖ್ಯೆ ಯುವ ಮತದಾರರಿದ್ದಾರೆ. 7,644 ಮಂದಿ ಮೊದಲ ಬಾರಿಗೆ ಮತಚಲಾಯಿಸಲು ಸಿದ್ಧರಾಗಿದ್ದಾರೆ. ಅಂತೆಯೇ ಹುಣಸೂರು ಕ್ಷೇತ್ರದಲ್ಲಿ 6,473,ಕೆ.ಆರ್‌.ನಗರ ಕ್ಷೇತ್ರದಲ್ಲಿ 6043, ಪಿರಿಯಾಪಟ್ಟಣ ಕ್ಷೇತ್ರದಲ್ಲಿ 5,243, ಎನ್‌.ಆರ್‌.ಕ್ಷೇತ್ರದಲ್ಲಿ 5,919, ವರುಣ ಕ್ಷೇತ್ರದಲ್ಲಿ 5,022, ಎಚ್‌.ಡಿ.ಕೋಟೆ ಕ್ಷೇತ್ರದಲ್ಲಿ4,925, ತಿ.ನರಸೀಪುರ ಕ್ಷೇತ್ರದಲ್ಲಿ 4,118, ನಂಜನಗೂಡು ಕ್ಷೇತ್ರದಲ್ಲಿ 4,027, ಕೆ.ಆರ್‌.ಕ್ಷೇತ್ರದಲ್ಲಿ 3,704, ಚಾಮರಾಜ ಕ್ಷೇತ್ರದಲ್ಲಿ 3,860 ಯುವ ಮತದಾರರಿದ್ದಾರೆ.

lokesh

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

34 mins ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

9 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

9 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

9 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

12 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

12 hours ago