ಮೈಸೂರು

ಅದ್ದೂರಿಯಾಗಿ 78 ನೇ ಸ್ವಾತಂತ್ರೋತ್ಸವ ದಿನಾಚರಣೆ : ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

ಮೈಸೂರು : ಅದ್ದೂರಿಯಾಗಿ 78 ನೇ ಸ್ವಾತಂತ್ರೋತ್ಸವ ದಿನಾಚರಣೆ ಯನ್ನು ನಗರದ ಬನ್ನಿಮಂಟಪ ಪಂಜಿನ ಕವಾಯತು ಮೈದಾನದಲ್ಲಿ ಆಚರಣೆ ಮಾಡಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್. ಸಿ ಮಹದೇವಪ್ಪ ಅವರು ಧ್ವಜಾರೋಹಣ ನೆರವೇರಿಸಿದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. ತೆರೆದ ವಾಹನದಲ್ಲಿ ಪೆರೇಡ್ ತಂಡಗಳ ಪರಿವೀಕ್ಷಣೆ ನಡೆಸಿದರು.

ಪೆರೇಡ್ ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಪೆರೇಡ್ ನಲ್ಲಿ ಪೊಲೀಸ್ ಇಲಾಖೆಯ ಪುರುಷ ಹಾಗೂ ಮಹಿಳಾ ತಂಡಗಳು, ಗೃಹ ರಕ್ಷಕ ದಳ, ಅಗ್ನಿ ಶಾಮಕ ದಳ, ಅಬಕಾರಿ ದಳ, ಎನ್ ಎಸ್ ಎಸ್, ಎನ್ ಸಿ ಸಿ ತಂಡಗಳು, ವಿಶೇಷ ಚೇತನ ಮಕ್ಕಳ ತಂಡ ಹಾಗೂ ಶಾಲಾ ಕಾಲೇಜು ತಂಡಗಳು ಭಾಗವಹಿಸಿದ್ದವು. ಈ ವೇಳೆ ಉಸ್ತವಾರಿ ಸಚಿವರು 78 ಸ್ವಾತಂತ್ರೋತ್ಸವ ದಿನಾಚರಣೆಯ ಶುಭ ಸಂದೇಶವನ್ನು ನೀಡಿದರು.

ಗುಡ್ ಶಫರ್ಡ್ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳಿಂದ ವಿವಿಧತೆಯಲ್ಲಿ ಏಕತೆ ದೇಶಭಕ್ತಿ ಗೀತೆ, ನಿರ್ಮಲ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲಾ ಮಕ್ಕಳಿಂದ ದೇಶ ಭಕ್ತಿ ಗೀತೆಗೆ ಸಮೂಹ ನೃತ್ಯ ಹಾಗೂ ಸಂತ ಫಿಲೋಮಿನಾ ಪ್ರೌಢ ಶಾಲಾ ಮಕ್ಕಳಿಂದ ದೇಶ ಪ್ರೇಮಿ ಭಗತ್ ಸಿಂಗ್ ಅವರ ಮರಣ ದಂಡನೆಯ ನೃತ್ಯ ರೂಪಕವನ್ನು ಪ್ರದರ್ಶನವನ್ನು ಪ್ರಸ್ತುತಪಡಿಸಿದರು.

ಸಮಾರಂಭದಲ್ಲಿ ಶಾಸಕರಾದ ತನ್ವೀರ್ ಸೇಠ್, ಮೂಡಾ ಅಧ್ಯಕ್ಷರಾದ ಕೆ ಮರಿಗೌಡ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್, ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ, ದಕ್ಷಿಣ ವಲಯ ಐ ಜಿ ಪಿ ಬೋರಲಿಂಗಯ್ಯ, ನಗರ ಪೊಲೀಸ್ ಆಯುಕ್ತ ರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜ್ ಅವರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

16 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

16 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

16 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

16 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

16 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

16 hours ago