ಮೈಸೂರು

ಸೆಸ್ಕ್ ಪ್ರಧಾನ ಕಚೇರಿಯಲ್ಲಿ 78ನೇ ಸ್ವಾತಂತ್ರ್ಯ ದಿನದ ಸಂಭ್ರಮ

ಮೈಸೂರು: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮೈಸೂರಿನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಶೀಲಾ ಅವರು ಗುರುವಾರ ಧ್ವಜಾರೋಹಣವನ್ನು ನೆರವೇರಿಸಿದರು.

ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷರೂ ಆಗಿರುವ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರು, ಸೆಸ್ಕ್‌ ಅಧಿಕಾರಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿ, ಗುಣಮಟ್ಟದ ವಿದ್ಯುತ್‌ ಪೂರೈಕೆಗಾಗಿ ಶ್ರಮಿಸಿದ ಸಿಬ್ಬಂದಿಗೆ ಪ್ರಶಂಸಾ ಪತ್ರ ವಿತರಿಸಿದರು.

ಪ್ರಶಂಸಾ ಪತ್ರ ವಿತರಣೆ: ಮಡಿಕೇರಿ ಹಾಗೂ ಸಕಲೇಶಪುರ ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಹಾನಿಗೊಳಗಾಗಿದ್ದ ವಿದ್ಯುತ್‌ ಕಂಬಗಳು ಹಾಗೂ ಪರಿವರ್ತಕಗಳು, ವಿದ್ಯುತ್‌ ಮಾರ್ಗಗಳನ್ನು ಬದಲಾಯಿಸಿ ವಿದ್ಯುತ್‌ ಪೂರೈಕೆ ಸುಗಮಗೊಳಿಸಿದ್ದ 500ಕ್ಕೂ ಹೆಚ್ಚು ಸಿಬ್ಬಂದಿಗೆ ಪ್ರಶಂಸಾ ಪತ್ರ ಹಾಗೂ ಉಡುಗೊರೆಯನ್ನು ನೀಡುವ ಮೂಲಕ ಪ್ರೋತ್ಸಾಹಿಸಲಾಯಿತು.

ಸೆಸ್ಕ್‌ ವ್ಯಾಪ್ತಿಯಲ್ಲಿ ಭಾರೀ ಮಳೆಯಿಂದಾಗಿ ಉಂಟಾಗಿದ್ದ ಪ್ರವಾಹ ಪರಿಸ್ಥಿತಿ ಸಂದರ್ಭದಲ್ಲಿ ಮಡಿಕೇರಿ ಹಾಗೂ ಸಕಲೇಶಪುರ ವ್ಯಾಪ್ತಿಯಲ್ಲಿ ಸಾಕಷ್ಟು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದವು. ಈ ಹಿನ್ನೆಲೆಯ ಕೂಡಲೇ ಕಾರ್ಯಪ್ರವೃತ್ತರಾದ ಸೆಸ್ಕ್ ಹಿರಿಯ ಅಧಿಕಾರಿಗಳು ದುರಸ್ತಿ ಕಾರ್ಯಕ್ಕೆ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಿ ಪರಿಸ್ಥಿತಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದರು.

ವಿದ್ಯುತ್ ಸೋರಿಕೆ ತಡೆ ಯಶಸ್ವಿ: ಮಡಿಕೇರಿ ಹಾಗೂ ಸುತ್ತಮುತ್ತಲೂ ಉಂಟಾಗುತ್ತಿದ್ದ ವಿದ್ಯುತ್ ಸೋರಿಕೆ ತಡೆಯುವಲ್ಲಿ ಯಶಸ್ವಿಯಾದ ಅಧಿಕಾರಿ ಮತ್ತು ಸಿಬ್ಬಂದಿ ತಂಡಕ್ಕೂ ಪ್ರಶಂಸಾ ಪತ್ರವನ್ನು ನೀಡಲಾಯಿತು. ವಿದ್ಯುತ್ ಸೋರಿಕೆ ತಡೆಗಾಗಿ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಶೀಲಾ ಅವರು ಹಾಗೂ ಸೆಸ್ಕ್ ತಾಂತ್ರಿಕ ವಿಭಾಗದ ನಿರ್ದೇಶಕರಾದ ಮುನಿಗೋಪಾಲ್ ರಾಜ್ ಅವರು, ತಂಡವನ್ನು ನಿಯೋಜಿಸಿ 30 ದಿನಗಳೊಳಗೆ ಕೆಲಸ ಪೂರ್ಣಗೊಳಿಸುವ ಗುರಿ ನೀಡಿದ್ದರು. ಈ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸುವಲ್ಲಿ ಯಶಸ್ವಿಯಾದ ತಂಡವನ್ನು ಅಭಿನಂದಿಸಿ, ಮೆಚ್ಚುಗೆ ಪತ್ರ ನೀಡಲಾಯಿತು.

ಇದಲ್ಲದೇ ರೈತರ ಐಪಿ ಸೆಟ್‌ಗಳ ಆರ್‌ಆರ್‌ ನಂಬರ್‌ಗೆ ಆಧಾರ್ ಜೋಡಣೆ ಮಾಡುವ ಕಾರ್ಯದಲ್ಲಿ ರಾಜ್ಯದ ಇತರೆ ವಿದ್ಯುತ್ ಸರಬರಾಜು ನಿಗಮಗಳಿಗಿಂತಲೂ ಉತ್ತಮವಾಗಿ ಕೆಲಸ ಮಾಡಿರುವ ಸೆಸ್ಕ್ ಸಿಬ್ಬಂದಿಗೂ ಪ್ರಶಂಸಾ ಪತ್ರವನ್ನು ವಿತರಿಸಲಾಯಿತು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

2 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

2 hours ago

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…

6 hours ago

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

6 hours ago

ಓದುಗರ ಪತ್ರ: ಕಾಲಾವಕಾಶ ನೀಡಬೇಕು

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…

6 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಿಜೆಪಿ ಷಡ್ಯಂತ್ರದಿಂದ ಹಲವು ಪಕ್ಷಗಳು ಒಡಕಿನತ್ತ?

ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…

6 hours ago