ಮೈಸೂರು

ಸೆಸ್ಕ್ ಪ್ರಧಾನ ಕಚೇರಿಯಲ್ಲಿ 78ನೇ ಸ್ವಾತಂತ್ರ್ಯ ದಿನದ ಸಂಭ್ರಮ

ಮೈಸೂರು: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮೈಸೂರಿನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಶೀಲಾ ಅವರು ಗುರುವಾರ ಧ್ವಜಾರೋಹಣವನ್ನು ನೆರವೇರಿಸಿದರು.

ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷರೂ ಆಗಿರುವ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರು, ಸೆಸ್ಕ್‌ ಅಧಿಕಾರಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿ, ಗುಣಮಟ್ಟದ ವಿದ್ಯುತ್‌ ಪೂರೈಕೆಗಾಗಿ ಶ್ರಮಿಸಿದ ಸಿಬ್ಬಂದಿಗೆ ಪ್ರಶಂಸಾ ಪತ್ರ ವಿತರಿಸಿದರು.

ಪ್ರಶಂಸಾ ಪತ್ರ ವಿತರಣೆ: ಮಡಿಕೇರಿ ಹಾಗೂ ಸಕಲೇಶಪುರ ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಹಾನಿಗೊಳಗಾಗಿದ್ದ ವಿದ್ಯುತ್‌ ಕಂಬಗಳು ಹಾಗೂ ಪರಿವರ್ತಕಗಳು, ವಿದ್ಯುತ್‌ ಮಾರ್ಗಗಳನ್ನು ಬದಲಾಯಿಸಿ ವಿದ್ಯುತ್‌ ಪೂರೈಕೆ ಸುಗಮಗೊಳಿಸಿದ್ದ 500ಕ್ಕೂ ಹೆಚ್ಚು ಸಿಬ್ಬಂದಿಗೆ ಪ್ರಶಂಸಾ ಪತ್ರ ಹಾಗೂ ಉಡುಗೊರೆಯನ್ನು ನೀಡುವ ಮೂಲಕ ಪ್ರೋತ್ಸಾಹಿಸಲಾಯಿತು.

ಸೆಸ್ಕ್‌ ವ್ಯಾಪ್ತಿಯಲ್ಲಿ ಭಾರೀ ಮಳೆಯಿಂದಾಗಿ ಉಂಟಾಗಿದ್ದ ಪ್ರವಾಹ ಪರಿಸ್ಥಿತಿ ಸಂದರ್ಭದಲ್ಲಿ ಮಡಿಕೇರಿ ಹಾಗೂ ಸಕಲೇಶಪುರ ವ್ಯಾಪ್ತಿಯಲ್ಲಿ ಸಾಕಷ್ಟು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದವು. ಈ ಹಿನ್ನೆಲೆಯ ಕೂಡಲೇ ಕಾರ್ಯಪ್ರವೃತ್ತರಾದ ಸೆಸ್ಕ್ ಹಿರಿಯ ಅಧಿಕಾರಿಗಳು ದುರಸ್ತಿ ಕಾರ್ಯಕ್ಕೆ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಿ ಪರಿಸ್ಥಿತಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದರು.

ವಿದ್ಯುತ್ ಸೋರಿಕೆ ತಡೆ ಯಶಸ್ವಿ: ಮಡಿಕೇರಿ ಹಾಗೂ ಸುತ್ತಮುತ್ತಲೂ ಉಂಟಾಗುತ್ತಿದ್ದ ವಿದ್ಯುತ್ ಸೋರಿಕೆ ತಡೆಯುವಲ್ಲಿ ಯಶಸ್ವಿಯಾದ ಅಧಿಕಾರಿ ಮತ್ತು ಸಿಬ್ಬಂದಿ ತಂಡಕ್ಕೂ ಪ್ರಶಂಸಾ ಪತ್ರವನ್ನು ನೀಡಲಾಯಿತು. ವಿದ್ಯುತ್ ಸೋರಿಕೆ ತಡೆಗಾಗಿ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಶೀಲಾ ಅವರು ಹಾಗೂ ಸೆಸ್ಕ್ ತಾಂತ್ರಿಕ ವಿಭಾಗದ ನಿರ್ದೇಶಕರಾದ ಮುನಿಗೋಪಾಲ್ ರಾಜ್ ಅವರು, ತಂಡವನ್ನು ನಿಯೋಜಿಸಿ 30 ದಿನಗಳೊಳಗೆ ಕೆಲಸ ಪೂರ್ಣಗೊಳಿಸುವ ಗುರಿ ನೀಡಿದ್ದರು. ಈ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸುವಲ್ಲಿ ಯಶಸ್ವಿಯಾದ ತಂಡವನ್ನು ಅಭಿನಂದಿಸಿ, ಮೆಚ್ಚುಗೆ ಪತ್ರ ನೀಡಲಾಯಿತು.

ಇದಲ್ಲದೇ ರೈತರ ಐಪಿ ಸೆಟ್‌ಗಳ ಆರ್‌ಆರ್‌ ನಂಬರ್‌ಗೆ ಆಧಾರ್ ಜೋಡಣೆ ಮಾಡುವ ಕಾರ್ಯದಲ್ಲಿ ರಾಜ್ಯದ ಇತರೆ ವಿದ್ಯುತ್ ಸರಬರಾಜು ನಿಗಮಗಳಿಗಿಂತಲೂ ಉತ್ತಮವಾಗಿ ಕೆಲಸ ಮಾಡಿರುವ ಸೆಸ್ಕ್ ಸಿಬ್ಬಂದಿಗೂ ಪ್ರಶಂಸಾ ಪತ್ರವನ್ನು ವಿತರಿಸಲಾಯಿತು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

22 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

22 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

22 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

22 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

22 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

22 hours ago