ಮೈಸೂರು: 2023ರ ಏಪ್ರಿಲ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ್ದ ವೇಳೆ ಇಲ್ಲಿನ ಖಾಸಗಿ ಹೋಟೆಲ್ ರ್ಯಾಡಿಸನ್ ಬ್ಲ್ಯೂ ನಲ್ಲಿ ಆಥಿತ್ಯ ನೀಡಿದ್ದಕ್ಕಾಗಿ ವೆಚ್ಚವಾಗಿ 80.6 ಲಕ್ಷ ಬಾಕಿ ಹಣ ಪಾವತಿಸಬೇಕು. ಇಲ್ಲವಾದಲ್ಲಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಹೊಟೆಲ್ ತಿಳಿಸಿದೆ.
ಈ ಸಂಬಂಧ ಹೋಟೆಲ್ ಹಣಕಾಸು ವಿಭಾಗದ ಪ್ರಧಾನ ವ್ಯವಸ್ಥಾಪಕರು ಮೇ.21ರಂದು ಅರಣ್ಯ ಇಲಾಖೆಗೆ ಪತ್ರ ಬರೆದಿದ್ದು, ʼಬಾಕಿಯಿರುವ ಮೊತ್ತವನ್ನು ಜೂನ್.1 ಒಳಗಾಗಿ ಆವತಿಸಬೇಕು. ಇಲ್ಲವಾದಲ್ಲಿ ಕಾನೂನಾತ್ಮಕ ಹೋರಾಟ ಮಾಡಲಾಗುವುದು ಎಂದು ತಿಳಿಸಿದೆ.
ಚಾಮರಾಜನಗರ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ 50 ವರ್ಷ ತುಂಬಿದ ಸಂಭ್ರಮದಲ್ಲಿ ಮೈಸೂರಿಗೆ ಪ್ರಧಾನಿ ಮೋದಿ 2023 ರ ಏಪ್ರಿಲ್ 9ರಿಂದ 11 ವರೆಗೆ ಆಗಮಿಸಿದ್ದ ವೇಳೆ ಈ ಬಾಕಿ ಬಿಲ್ ಪಾವತಿ ಉಳಿದಿದೆ. ಇನ್ನು ಈ ಕಾರ್ಯಕ್ರಮಕೆ ಅಂದಾಜು ಮೊತ್ತವನ್ನಾಗಿ 3 ಕೋಟಿ ರೂ ಎನ್ನಲಾಗಿತ್ತು. ಆದರೆ ಅದು 6.3 ಕೋಟಿಗೆ ತಲುಪಿತು.
ಉಳಿದ 3.3ಕೋಟಿ ರೂಗಳ ಬಾಕಿ ಮೊತ್ತದಲ್ಲಿ ರ್ಯಾಡಿಸನ್ ಬ್ಲ್ಯೂನ 80.6 ಲಕ್ಷ ಮೊತ್ತವನ್ನು ಅರಣ್ಯ ಇಲಾಖೆ ಬಾಕಿ ಉಳಿಸಿಕೊಂಡಿದ್ದು, ಅದನ್ನು ಜೂನ್. 1ರ ಒಳಗಾಗಿ ಪಾವತಿಸುವಂತೆ ಹೋಟೆಲ್ ಪತ್ರದಲ್ಲಿ ತಿಳಿಸಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…