ಮೈಸೂರು: 2023ರ ಏಪ್ರಿಲ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ್ದ ವೇಳೆ ಇಲ್ಲಿನ ಖಾಸಗಿ ಹೋಟೆಲ್ ರ್ಯಾಡಿಸನ್ ಬ್ಲ್ಯೂ ನಲ್ಲಿ ಆಥಿತ್ಯ ನೀಡಿದ್ದಕ್ಕಾಗಿ ವೆಚ್ಚವಾಗಿ 80.6 ಲಕ್ಷ ಬಾಕಿ ಹಣ ಪಾವತಿಸಬೇಕು. ಇಲ್ಲವಾದಲ್ಲಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಹೊಟೆಲ್ ತಿಳಿಸಿದೆ.
ಈ ಸಂಬಂಧ ಹೋಟೆಲ್ ಹಣಕಾಸು ವಿಭಾಗದ ಪ್ರಧಾನ ವ್ಯವಸ್ಥಾಪಕರು ಮೇ.21ರಂದು ಅರಣ್ಯ ಇಲಾಖೆಗೆ ಪತ್ರ ಬರೆದಿದ್ದು, ʼಬಾಕಿಯಿರುವ ಮೊತ್ತವನ್ನು ಜೂನ್.1 ಒಳಗಾಗಿ ಆವತಿಸಬೇಕು. ಇಲ್ಲವಾದಲ್ಲಿ ಕಾನೂನಾತ್ಮಕ ಹೋರಾಟ ಮಾಡಲಾಗುವುದು ಎಂದು ತಿಳಿಸಿದೆ.
ಚಾಮರಾಜನಗರ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ 50 ವರ್ಷ ತುಂಬಿದ ಸಂಭ್ರಮದಲ್ಲಿ ಮೈಸೂರಿಗೆ ಪ್ರಧಾನಿ ಮೋದಿ 2023 ರ ಏಪ್ರಿಲ್ 9ರಿಂದ 11 ವರೆಗೆ ಆಗಮಿಸಿದ್ದ ವೇಳೆ ಈ ಬಾಕಿ ಬಿಲ್ ಪಾವತಿ ಉಳಿದಿದೆ. ಇನ್ನು ಈ ಕಾರ್ಯಕ್ರಮಕೆ ಅಂದಾಜು ಮೊತ್ತವನ್ನಾಗಿ 3 ಕೋಟಿ ರೂ ಎನ್ನಲಾಗಿತ್ತು. ಆದರೆ ಅದು 6.3 ಕೋಟಿಗೆ ತಲುಪಿತು.
ಉಳಿದ 3.3ಕೋಟಿ ರೂಗಳ ಬಾಕಿ ಮೊತ್ತದಲ್ಲಿ ರ್ಯಾಡಿಸನ್ ಬ್ಲ್ಯೂನ 80.6 ಲಕ್ಷ ಮೊತ್ತವನ್ನು ಅರಣ್ಯ ಇಲಾಖೆ ಬಾಕಿ ಉಳಿಸಿಕೊಂಡಿದ್ದು, ಅದನ್ನು ಜೂನ್. 1ರ ಒಳಗಾಗಿ ಪಾವತಿಸುವಂತೆ ಹೋಟೆಲ್ ಪತ್ರದಲ್ಲಿ ತಿಳಿಸಿದೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…