– ಕುಸುಮ್-ಬಿ ಯೋಜನೆ ಲಾಭ ಪಡೆಯಲು ಸೆಸ್ಕ್ ಮನವಿ
– ಹಗಲು ವೇಳೆಯಲ್ಲಿ ನೀರಾವರಿ ಸೌಕರ್ಯಕ್ಕೆ ಅನುಕೂಲ
ಮೈಸೂರು: ಹಗಲು ವೇಳೆಯಲ್ಲಿ ನೀರಾವರಿಗೆ ವಿದ್ಯುತ್ ಸೌಕರ್ಯವನ್ನು ಒದಗಿಸುವ ಮಹತ್ವಾಕಾಂಕ್ಷಿ ಪಿ.ಎಂ. ಕುಸುಮ್-ಬಿ ಯೋಜನೆಯಡಿ ಸೋಲಾರ್ ಪಂಪ್-ಸೆಟ್ ಪಡೆದುಕೊಳ್ಳಲು ಕೃಷಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸೌರಶಕ್ತಿ ಬಳಕೆ ಹೆಚ್ಚಿಸಲು ಹಲವು ಕ್ರಮಗಳನ್ನು ಕೈಗೊಂಡಿರುವ ಕರ್ನಾಟಕ ಸರ್ಕಾರವು ರೈತರು ಸೋಲಾರ್ ಪಂಪ್ಸೆಟ್ ಅಳವಡಿಕೆ ಮಾಡಿಕೊಳ್ಳಲು ‘ಕುಸುಮ್ ಬಿ’ ಯೋಜನೆ ಅನುಷ್ಠಾನಗೊಳಿಸಿದೆ. ಈ ಯೋಜನೆಯಡಿ ರೈತರು ಸಬ್ಸಿಡಿ ದರದಲ್ಲಿ ಸೋಲಾರ್ ಪಂಪ್ಸೆಟ್ ಅಳವಡಿಕೆ ಮಾಡಿಕೊಳ್ಳಬಹುದು. ಇದರಿಂದಾಗಿ ಸಾಂಪ್ರದಾಯಿಕ ವಿದ್ಯುತ್ ಮೇಲಿನ ಅವಲಂಬನೆ ಕಡಿಮೆಯಾಗಲಿದೆ.
ಕುಸುಮ್-ಬಿ ಯೋಜನೆ ಅಡಿಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆಯನ್ನು ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಲು ರೂಪಿಸಲಾಗಿದೆ. ಆ ಮೂಲಕ ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸಲು, ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ *ಶೇ.80ರಷ್ಟು ಸಹಾಯಧನ* ನೀಡಲಾಗುತ್ತಿದೆ. ಕುಸುಮ್-ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಒತ್ತು ನೀಡಲಾಗಿದೆ. ಈ ಯೋಜನೆ ಅಡಿಯಲ್ಲಿ *ರಾಜ್ಯ ಸರ್ಕಾರ ಶೇ.50, ಕೇಂದ್ರ ಸರ್ಕಾರ ಶೇ.30* ಮತ್ತು ಫಲಾನುಭವಿಗಳು ಶೇ.20 ಮೊತ್ತವನ್ನು ಪಾವತಿಸಬೇಕಿದೆ.
ಇದನ್ನು ಓದಿ: ಬಹಳ ವರ್ಷಗಳ ಕನಸು ಈಡೇರಿಸಿದ ಸರ್ಕಾರ : ಶಾಸಕ ಜಿಟಿಡಿ
* ರಾಜ್ಯದಲ್ಲಿ MNRE ಮತ್ತು KREDL ಸಹಯೋಗದೊಂದಿಗೆ ರೈತರ ಜಮೀನಿನ ಕೊಳವೆ/ತೆರೆದ ಬಾವಿಗಳಿಗೆ ಸೋಲಾರ್ ಪಂಪ್-ಸೆಟ್ಗಳನ್ನು ಅಳವಡಿಸಲು ರೈತರಿಂದ ಅರ್ಜಿಗಳನ್ನು ಆನ್ಲೈನ್ ಮೂಲಕವಾಗಿ www.souramitra.com ವೆಬ್ಸೈಟ್ನಲ್ಲಿ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.
* ಸದರಿ ಪೋರ್ಟಲ್ ಮೂಲಕ ಸೋಲಾರ್ ಪಂಪ್-ಸೆಟ್ಗಳ ಅಳವಡಿಕೆಗಾಗಿ ರೈತರು www.souramitra.com ಪೋರ್ಟಲ್ನಲ್ಲಿ ಅರ್ಜಿ ನೋಂದಾಯಿಸಿ, ವೆಂಡರ್/ಏಜೆನ್ಸಿಯನ್ನು ಆಯ್ಕೆ ಮಾಡಿಕೊಂಡು, ಶೇ.20 ಹಣವನ್ನು ಪಾವತಿಸಬೇಕಿದೆ.
* ರೈತರಿಗೆ ತಿಳಿಸುವುದೇನೆಂದರೆ, ಪಿಎಂ ಕುಸುಮ್-ಬಿ ಯೋಜನೆಗೆ ಸಂಬಂಧಿಸಿದಂತೆ, www.kreld.karnataka.gov.in ವೆಬ್ಸೈಟ್ನಲ್ಲಿ ಹೊರಡಿಸಿದ ಪ್ರಕಟಣೆ/ಮಾಹಿತಿಗಳನ್ನು ಮಾತ್ರ ಪರಿಗಣಿಸಲು ಕೋರಲಾಗಿದೆ. ಸೌರ ಪಂಪ್ ಸೆಟ್ ನೋಂದಣಿ ಹಾಗೂ ಪಾವತಿಗೆ ಸಂಬಂಧಿಸಿದಂತೆ www.souramitra.com ನಲ್ಲಿ ಹಾಗೂ KREDLನ ಸಹಾಯವಾಣಿ 080-22202100/8095132100 ಮುಖಾಂತರ ಅಥವಾ ಹತ್ತಿರದ ಚಾವಿಸನಿನಿ ಕಚೇರಿ/ಅಧಿಕಾರಿಗಳನ್ನು ಸಂಪರ್ಕಿಸಬಹುದು. ಸದರಿ ನೋಂದಣಿ ಪ್ರಕ್ರಿಯೆಯಲ್ಲಿ ಸ್ವೀಕೃತವಾಗುವ OTPಗಳನ್ನು ಯಾರೊಂದಿಗೂ ಹಂಚಿಕೊಳ್ಳದೆ ತಾವೇ ನೋಂದಾಯಿಸಿಕೊಳ್ಳಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ) ದೂರವಾಣಿ ಸಂಖ್ಯೆ *9449598669* ಸಂಪರ್ಕಿಸಬಹುದಾಗಿದೆ.
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್ಗಳಷ್ಟು…
ಮಂಡ್ಯ: ಲ್ಯಾಬ್ ಟು ಲ್ಯಾಂಡ್ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…
ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…
ಮಂಡ್ಯ: ಸಿಎಂ ಸಿದ್ದರಾಮಯ್ಯ ರೈತರ ಬಗ್ಗೆ ಹಾಗೂ ಸಾಮಾನ್ಯರ ಬಗ್ಗೆ ಅತೀ ಹೆಚ್ಚಿನ ಕಾಳಜಿ ಇಟ್ಟುಕೊಂಡಿದ್ದಾರೆ ಎಂದು ಕೃಷಿ ಹಾಗೂ…