ಮೈಸೂರು

ರೈತರ ಸೋಲಾರ್‌ ನೀರಾವರಿ ಪಂಪ್‌ಸೆಟ್‌ಗೆ ಶೇ.80 ಸಬ್ಸಿಡಿ

– ಕುಸುಮ್‌-ಬಿ ಯೋಜನೆ ಲಾಭ ಪಡೆಯಲು ಸೆಸ್ಕ್‌ ಮನವಿ
– ಹಗಲು ವೇಳೆಯಲ್ಲಿ ನೀರಾವರಿ ಸೌಕರ್ಯಕ್ಕೆ ಅನುಕೂಲ

ಮೈಸೂರು: ಹಗಲು ವೇಳೆಯಲ್ಲಿ ನೀರಾವರಿಗೆ ವಿದ್ಯುತ್‌ ಸೌಕರ್ಯವನ್ನು ಒದಗಿಸುವ ಮಹತ್ವಾಕಾಂಕ್ಷಿ ಪಿ.ಎಂ. ಕುಸುಮ್-ಬಿ ಯೋಜನೆಯಡಿ ಸೋಲಾರ್ ಪಂಪ್‌-ಸೆಟ್‌ ಪಡೆದುಕೊಳ್ಳಲು ಕೃಷಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸೌರಶಕ್ತಿ ಬಳಕೆ ಹೆಚ್ಚಿಸಲು ಹಲವು ಕ್ರಮಗಳನ್ನು ಕೈಗೊಂಡಿರುವ ಕರ್ನಾಟಕ ಸರ್ಕಾರವು ರೈತರು ಸೋಲಾರ್ ಪಂಪ್‌ಸೆಟ್ ಅಳವಡಿಕೆ ಮಾಡಿಕೊಳ್ಳಲು ‘ಕುಸುಮ್ ಬಿ’ ಯೋಜನೆ ಅನುಷ್ಠಾನಗೊಳಿಸಿದೆ. ಈ ಯೋಜನೆಯಡಿ ರೈತರು ಸಬ್ಸಿಡಿ ದರದಲ್ಲಿ ಸೋಲಾರ್ ಪಂಪ್‌ಸೆಟ್ ಅಳವಡಿಕೆ ಮಾಡಿಕೊಳ್ಳಬಹುದು. ಇದರಿಂದಾಗಿ ಸಾಂಪ್ರದಾಯಿಕ ವಿದ್ಯುತ್ ಮೇಲಿನ ಅವಲಂಬನೆ ಕಡಿಮೆಯಾಗಲಿದೆ.

ಕುಸುಮ್-ಬಿ ಯೋಜನೆ ಅಡಿಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆಯನ್ನು ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಲು ರೂಪಿಸಲಾಗಿದೆ. ಆ ಮೂಲಕ ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸಲು, ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ *ಶೇ.80ರಷ್ಟು ಸಹಾಯಧನ* ನೀಡಲಾಗುತ್ತಿದೆ. ಕುಸುಮ್-ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್‌ಸೆಟ್ ಅಳವಡಿಸಲು ಒತ್ತು ನೀಡಲಾಗಿದೆ. ಈ ಯೋಜನೆ ಅಡಿಯಲ್ಲಿ *ರಾಜ್ಯ ಸರ್ಕಾರ ಶೇ.50, ಕೇಂದ್ರ ಸರ್ಕಾರ ಶೇ.30* ಮತ್ತು ಫಲಾನುಭವಿಗಳು ಶೇ.20 ಮೊತ್ತವನ್ನು ಪಾವತಿಸಬೇಕಿದೆ.

ಇದನ್ನು ಓದಿ: ಬಹಳ ವರ್ಷಗಳ ಕನಸು ಈಡೇರಿಸಿದ ಸರ್ಕಾರ : ಶಾಸಕ ಜಿಟಿಡಿ

* ರಾಜ್ಯದಲ್ಲಿ MNRE ಮತ್ತು KREDL ಸಹಯೋಗದೊಂದಿಗೆ ರೈತರ ಜಮೀನಿನ ಕೊಳವೆ/ತೆರೆದ ಬಾವಿಗಳಿಗೆ ಸೋಲಾರ್‌ ಪಂಪ್‌-ಸೆಟ್‌ಗಳನ್ನು ಅಳವಡಿಸಲು ರೈತರಿಂದ ಅರ್ಜಿಗಳನ್ನು ಆನ್‌ಲೈನ್‌ ಮೂಲಕವಾಗಿ www.souramitra.com ವೆಬ್‌ಸೈಟ್‌ನಲ್ಲಿ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.

* ಸದರಿ ಪೋರ್ಟಲ್‌ ಮೂಲಕ ಸೋಲಾರ್‌ ಪಂಪ್‌-ಸೆಟ್‌ಗಳ ಅಳವಡಿಕೆಗಾಗಿ ರೈತರು www.souramitra.com ಪೋರ್ಟಲ್‌ನಲ್ಲಿ ಅರ್ಜಿ ನೋಂದಾಯಿಸಿ, ವೆಂಡರ್‌/ಏಜೆನ್ಸಿಯನ್ನು ಆಯ್ಕೆ ಮಾಡಿಕೊಂಡು, ಶೇ.20 ಹಣವನ್ನು ಪಾವತಿಸಬೇಕಿದೆ.

* ರೈತರಿಗೆ ತಿಳಿಸುವುದೇನೆಂದರೆ, ಪಿಎಂ ಕುಸುಮ್‌-ಬಿ ಯೋಜನೆಗೆ ಸಂಬಂಧಿಸಿದಂತೆ, www.kreld.karnataka.gov.in ವೆಬ್‌ಸೈಟ್‌ನಲ್ಲಿ ಹೊರಡಿಸಿದ ಪ್ರಕಟಣೆ/ಮಾಹಿತಿಗಳನ್ನು ಮಾತ್ರ ಪರಿಗಣಿಸಲು ಕೋರಲಾಗಿದೆ. ಸೌರ ಪಂಪ್‌ ಸೆಟ್‌ ನೋಂದಣಿ ಹಾಗೂ ಪಾವತಿಗೆ ಸಂಬಂಧಿಸಿದಂತೆ www.souramitra.com ನಲ್ಲಿ ಹಾಗೂ KREDLನ ಸಹಾಯವಾಣಿ 080-22202100/8095132100 ಮುಖಾಂತರ ಅಥವಾ ಹತ್ತಿರದ ಚಾವಿಸನಿನಿ ಕಚೇರಿ/ಅಧಿಕಾರಿಗಳನ್ನು ಸಂಪರ್ಕಿಸಬಹುದು. ಸದರಿ ನೋಂದಣಿ ಪ್ರಕ್ರಿಯೆಯಲ್ಲಿ ಸ್ವೀಕೃತವಾಗುವ OTPಗಳನ್ನು ಯಾರೊಂದಿಗೂ ಹಂಚಿಕೊಳ್ಳದೆ ತಾವೇ ನೋಂದಾಯಿಸಿಕೊಳ್ಳಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ) ದೂರವಾಣಿ ಸಂಖ್ಯೆ *9449598669* ಸಂಪರ್ಕಿಸಬಹುದಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

8 mins ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

10 mins ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

12 mins ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

13 mins ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

16 mins ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

22 mins ago