ಮೈಸೂರು

ರೈತರ ಸೋಲಾರ್‌ ನೀರಾವರಿ ಪಂಪ್‌ಸೆಟ್‌ಗೆ ಶೇ.80 ಸಬ್ಸಿಡಿ

– ಕುಸುಮ್‌-ಬಿ ಯೋಜನೆ ಲಾಭ ಪಡೆಯಲು ಸೆಸ್ಕ್‌ ಮನವಿ
– ಹಗಲು ವೇಳೆಯಲ್ಲಿ ನೀರಾವರಿ ಸೌಕರ್ಯಕ್ಕೆ ಅನುಕೂಲ

ಮೈಸೂರು: ಹಗಲು ವೇಳೆಯಲ್ಲಿ ನೀರಾವರಿಗೆ ವಿದ್ಯುತ್‌ ಸೌಕರ್ಯವನ್ನು ಒದಗಿಸುವ ಮಹತ್ವಾಕಾಂಕ್ಷಿ ಪಿ.ಎಂ. ಕುಸುಮ್-ಬಿ ಯೋಜನೆಯಡಿ ಸೋಲಾರ್ ಪಂಪ್‌-ಸೆಟ್‌ ಪಡೆದುಕೊಳ್ಳಲು ಕೃಷಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸೌರಶಕ್ತಿ ಬಳಕೆ ಹೆಚ್ಚಿಸಲು ಹಲವು ಕ್ರಮಗಳನ್ನು ಕೈಗೊಂಡಿರುವ ಕರ್ನಾಟಕ ಸರ್ಕಾರವು ರೈತರು ಸೋಲಾರ್ ಪಂಪ್‌ಸೆಟ್ ಅಳವಡಿಕೆ ಮಾಡಿಕೊಳ್ಳಲು ‘ಕುಸುಮ್ ಬಿ’ ಯೋಜನೆ ಅನುಷ್ಠಾನಗೊಳಿಸಿದೆ. ಈ ಯೋಜನೆಯಡಿ ರೈತರು ಸಬ್ಸಿಡಿ ದರದಲ್ಲಿ ಸೋಲಾರ್ ಪಂಪ್‌ಸೆಟ್ ಅಳವಡಿಕೆ ಮಾಡಿಕೊಳ್ಳಬಹುದು. ಇದರಿಂದಾಗಿ ಸಾಂಪ್ರದಾಯಿಕ ವಿದ್ಯುತ್ ಮೇಲಿನ ಅವಲಂಬನೆ ಕಡಿಮೆಯಾಗಲಿದೆ.

ಕುಸುಮ್-ಬಿ ಯೋಜನೆ ಅಡಿಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆಯನ್ನು ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಲು ರೂಪಿಸಲಾಗಿದೆ. ಆ ಮೂಲಕ ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸಲು, ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ *ಶೇ.80ರಷ್ಟು ಸಹಾಯಧನ* ನೀಡಲಾಗುತ್ತಿದೆ. ಕುಸುಮ್-ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್‌ಸೆಟ್ ಅಳವಡಿಸಲು ಒತ್ತು ನೀಡಲಾಗಿದೆ. ಈ ಯೋಜನೆ ಅಡಿಯಲ್ಲಿ *ರಾಜ್ಯ ಸರ್ಕಾರ ಶೇ.50, ಕೇಂದ್ರ ಸರ್ಕಾರ ಶೇ.30* ಮತ್ತು ಫಲಾನುಭವಿಗಳು ಶೇ.20 ಮೊತ್ತವನ್ನು ಪಾವತಿಸಬೇಕಿದೆ.

ಇದನ್ನು ಓದಿ: ಬಹಳ ವರ್ಷಗಳ ಕನಸು ಈಡೇರಿಸಿದ ಸರ್ಕಾರ : ಶಾಸಕ ಜಿಟಿಡಿ

* ರಾಜ್ಯದಲ್ಲಿ MNRE ಮತ್ತು KREDL ಸಹಯೋಗದೊಂದಿಗೆ ರೈತರ ಜಮೀನಿನ ಕೊಳವೆ/ತೆರೆದ ಬಾವಿಗಳಿಗೆ ಸೋಲಾರ್‌ ಪಂಪ್‌-ಸೆಟ್‌ಗಳನ್ನು ಅಳವಡಿಸಲು ರೈತರಿಂದ ಅರ್ಜಿಗಳನ್ನು ಆನ್‌ಲೈನ್‌ ಮೂಲಕವಾಗಿ www.souramitra.com ವೆಬ್‌ಸೈಟ್‌ನಲ್ಲಿ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.

* ಸದರಿ ಪೋರ್ಟಲ್‌ ಮೂಲಕ ಸೋಲಾರ್‌ ಪಂಪ್‌-ಸೆಟ್‌ಗಳ ಅಳವಡಿಕೆಗಾಗಿ ರೈತರು www.souramitra.com ಪೋರ್ಟಲ್‌ನಲ್ಲಿ ಅರ್ಜಿ ನೋಂದಾಯಿಸಿ, ವೆಂಡರ್‌/ಏಜೆನ್ಸಿಯನ್ನು ಆಯ್ಕೆ ಮಾಡಿಕೊಂಡು, ಶೇ.20 ಹಣವನ್ನು ಪಾವತಿಸಬೇಕಿದೆ.

* ರೈತರಿಗೆ ತಿಳಿಸುವುದೇನೆಂದರೆ, ಪಿಎಂ ಕುಸುಮ್‌-ಬಿ ಯೋಜನೆಗೆ ಸಂಬಂಧಿಸಿದಂತೆ, www.kreld.karnataka.gov.in ವೆಬ್‌ಸೈಟ್‌ನಲ್ಲಿ ಹೊರಡಿಸಿದ ಪ್ರಕಟಣೆ/ಮಾಹಿತಿಗಳನ್ನು ಮಾತ್ರ ಪರಿಗಣಿಸಲು ಕೋರಲಾಗಿದೆ. ಸೌರ ಪಂಪ್‌ ಸೆಟ್‌ ನೋಂದಣಿ ಹಾಗೂ ಪಾವತಿಗೆ ಸಂಬಂಧಿಸಿದಂತೆ www.souramitra.com ನಲ್ಲಿ ಹಾಗೂ KREDLನ ಸಹಾಯವಾಣಿ 080-22202100/8095132100 ಮುಖಾಂತರ ಅಥವಾ ಹತ್ತಿರದ ಚಾವಿಸನಿನಿ ಕಚೇರಿ/ಅಧಿಕಾರಿಗಳನ್ನು ಸಂಪರ್ಕಿಸಬಹುದು. ಸದರಿ ನೋಂದಣಿ ಪ್ರಕ್ರಿಯೆಯಲ್ಲಿ ಸ್ವೀಕೃತವಾಗುವ OTPಗಳನ್ನು ಯಾರೊಂದಿಗೂ ಹಂಚಿಕೊಳ್ಳದೆ ತಾವೇ ನೋಂದಾಯಿಸಿಕೊಳ್ಳಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ) ದೂರವಾಣಿ ಸಂಖ್ಯೆ *9449598669* ಸಂಪರ್ಕಿಸಬಹುದಾಗಿದೆ.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

22 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

22 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

22 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

22 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

22 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

22 hours ago