ಮೈಸೂರು

ರೈತರ ಸೋಲಾರ್‌ ನೀರಾವರಿ ಪಂಪ್‌ಸೆಟ್‌ಗೆ ಶೇ.80 ಸಬ್ಸಿಡಿ

– ಕುಸುಮ್‌-ಬಿ ಯೋಜನೆ ಲಾಭ ಪಡೆಯಲು ಸೆಸ್ಕ್‌ ಮನವಿ
– ಹಗಲು ವೇಳೆಯಲ್ಲಿ ನೀರಾವರಿ ಸೌಕರ್ಯಕ್ಕೆ ಅನುಕೂಲ

ಮೈಸೂರು: ಹಗಲು ವೇಳೆಯಲ್ಲಿ ನೀರಾವರಿಗೆ ವಿದ್ಯುತ್‌ ಸೌಕರ್ಯವನ್ನು ಒದಗಿಸುವ ಮಹತ್ವಾಕಾಂಕ್ಷಿ ಪಿ.ಎಂ. ಕುಸುಮ್-ಬಿ ಯೋಜನೆಯಡಿ ಸೋಲಾರ್ ಪಂಪ್‌-ಸೆಟ್‌ ಪಡೆದುಕೊಳ್ಳಲು ಕೃಷಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸೌರಶಕ್ತಿ ಬಳಕೆ ಹೆಚ್ಚಿಸಲು ಹಲವು ಕ್ರಮಗಳನ್ನು ಕೈಗೊಂಡಿರುವ ಕರ್ನಾಟಕ ಸರ್ಕಾರವು ರೈತರು ಸೋಲಾರ್ ಪಂಪ್‌ಸೆಟ್ ಅಳವಡಿಕೆ ಮಾಡಿಕೊಳ್ಳಲು ‘ಕುಸುಮ್ ಬಿ’ ಯೋಜನೆ ಅನುಷ್ಠಾನಗೊಳಿಸಿದೆ. ಈ ಯೋಜನೆಯಡಿ ರೈತರು ಸಬ್ಸಿಡಿ ದರದಲ್ಲಿ ಸೋಲಾರ್ ಪಂಪ್‌ಸೆಟ್ ಅಳವಡಿಕೆ ಮಾಡಿಕೊಳ್ಳಬಹುದು. ಇದರಿಂದಾಗಿ ಸಾಂಪ್ರದಾಯಿಕ ವಿದ್ಯುತ್ ಮೇಲಿನ ಅವಲಂಬನೆ ಕಡಿಮೆಯಾಗಲಿದೆ.

ಕುಸುಮ್-ಬಿ ಯೋಜನೆ ಅಡಿಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆಯನ್ನು ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಲು ರೂಪಿಸಲಾಗಿದೆ. ಆ ಮೂಲಕ ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸಲು, ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ *ಶೇ.80ರಷ್ಟು ಸಹಾಯಧನ* ನೀಡಲಾಗುತ್ತಿದೆ. ಕುಸುಮ್-ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್‌ಸೆಟ್ ಅಳವಡಿಸಲು ಒತ್ತು ನೀಡಲಾಗಿದೆ. ಈ ಯೋಜನೆ ಅಡಿಯಲ್ಲಿ *ರಾಜ್ಯ ಸರ್ಕಾರ ಶೇ.50, ಕೇಂದ್ರ ಸರ್ಕಾರ ಶೇ.30* ಮತ್ತು ಫಲಾನುಭವಿಗಳು ಶೇ.20 ಮೊತ್ತವನ್ನು ಪಾವತಿಸಬೇಕಿದೆ.

ಇದನ್ನು ಓದಿ: ಬಹಳ ವರ್ಷಗಳ ಕನಸು ಈಡೇರಿಸಿದ ಸರ್ಕಾರ : ಶಾಸಕ ಜಿಟಿಡಿ

* ರಾಜ್ಯದಲ್ಲಿ MNRE ಮತ್ತು KREDL ಸಹಯೋಗದೊಂದಿಗೆ ರೈತರ ಜಮೀನಿನ ಕೊಳವೆ/ತೆರೆದ ಬಾವಿಗಳಿಗೆ ಸೋಲಾರ್‌ ಪಂಪ್‌-ಸೆಟ್‌ಗಳನ್ನು ಅಳವಡಿಸಲು ರೈತರಿಂದ ಅರ್ಜಿಗಳನ್ನು ಆನ್‌ಲೈನ್‌ ಮೂಲಕವಾಗಿ www.souramitra.com ವೆಬ್‌ಸೈಟ್‌ನಲ್ಲಿ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.

* ಸದರಿ ಪೋರ್ಟಲ್‌ ಮೂಲಕ ಸೋಲಾರ್‌ ಪಂಪ್‌-ಸೆಟ್‌ಗಳ ಅಳವಡಿಕೆಗಾಗಿ ರೈತರು www.souramitra.com ಪೋರ್ಟಲ್‌ನಲ್ಲಿ ಅರ್ಜಿ ನೋಂದಾಯಿಸಿ, ವೆಂಡರ್‌/ಏಜೆನ್ಸಿಯನ್ನು ಆಯ್ಕೆ ಮಾಡಿಕೊಂಡು, ಶೇ.20 ಹಣವನ್ನು ಪಾವತಿಸಬೇಕಿದೆ.

* ರೈತರಿಗೆ ತಿಳಿಸುವುದೇನೆಂದರೆ, ಪಿಎಂ ಕುಸುಮ್‌-ಬಿ ಯೋಜನೆಗೆ ಸಂಬಂಧಿಸಿದಂತೆ, www.kreld.karnataka.gov.in ವೆಬ್‌ಸೈಟ್‌ನಲ್ಲಿ ಹೊರಡಿಸಿದ ಪ್ರಕಟಣೆ/ಮಾಹಿತಿಗಳನ್ನು ಮಾತ್ರ ಪರಿಗಣಿಸಲು ಕೋರಲಾಗಿದೆ. ಸೌರ ಪಂಪ್‌ ಸೆಟ್‌ ನೋಂದಣಿ ಹಾಗೂ ಪಾವತಿಗೆ ಸಂಬಂಧಿಸಿದಂತೆ www.souramitra.com ನಲ್ಲಿ ಹಾಗೂ KREDLನ ಸಹಾಯವಾಣಿ 080-22202100/8095132100 ಮುಖಾಂತರ ಅಥವಾ ಹತ್ತಿರದ ಚಾವಿಸನಿನಿ ಕಚೇರಿ/ಅಧಿಕಾರಿಗಳನ್ನು ಸಂಪರ್ಕಿಸಬಹುದು. ಸದರಿ ನೋಂದಣಿ ಪ್ರಕ್ರಿಯೆಯಲ್ಲಿ ಸ್ವೀಕೃತವಾಗುವ OTPಗಳನ್ನು ಯಾರೊಂದಿಗೂ ಹಂಚಿಕೊಳ್ಳದೆ ತಾವೇ ನೋಂದಾಯಿಸಿಕೊಳ್ಳಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ) ದೂರವಾಣಿ ಸಂಖ್ಯೆ *9449598669* ಸಂಪರ್ಕಿಸಬಹುದಾಗಿದೆ.

ಆಂದೋಲನ ಡೆಸ್ಕ್

Recent Posts

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

8 hours ago

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…

8 hours ago

ಬೆಟ್ಟದಪುರ | ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶ ; ಬಾಲಕ ಸಾವು

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…

9 hours ago

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

11 hours ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

12 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

14 hours ago