– ಕುಸುಮ್-ಬಿ ಯೋಜನೆ ಲಾಭ ಪಡೆಯಲು ಸೆಸ್ಕ್ ಮನವಿ
– ಹಗಲು ವೇಳೆಯಲ್ಲಿ ನೀರಾವರಿ ಸೌಕರ್ಯಕ್ಕೆ ಅನುಕೂಲ
ಮೈಸೂರು: ಹಗಲು ವೇಳೆಯಲ್ಲಿ ನೀರಾವರಿಗೆ ವಿದ್ಯುತ್ ಸೌಕರ್ಯವನ್ನು ಒದಗಿಸುವ ಮಹತ್ವಾಕಾಂಕ್ಷಿ ಪಿ.ಎಂ. ಕುಸುಮ್-ಬಿ ಯೋಜನೆಯಡಿ ಸೋಲಾರ್ ಪಂಪ್-ಸೆಟ್ ಪಡೆದುಕೊಳ್ಳಲು ಕೃಷಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸೌರಶಕ್ತಿ ಬಳಕೆ ಹೆಚ್ಚಿಸಲು ಹಲವು ಕ್ರಮಗಳನ್ನು ಕೈಗೊಂಡಿರುವ ಕರ್ನಾಟಕ ಸರ್ಕಾರವು ರೈತರು ಸೋಲಾರ್ ಪಂಪ್ಸೆಟ್ ಅಳವಡಿಕೆ ಮಾಡಿಕೊಳ್ಳಲು ‘ಕುಸುಮ್ ಬಿ’ ಯೋಜನೆ ಅನುಷ್ಠಾನಗೊಳಿಸಿದೆ. ಈ ಯೋಜನೆಯಡಿ ರೈತರು ಸಬ್ಸಿಡಿ ದರದಲ್ಲಿ ಸೋಲಾರ್ ಪಂಪ್ಸೆಟ್ ಅಳವಡಿಕೆ ಮಾಡಿಕೊಳ್ಳಬಹುದು. ಇದರಿಂದಾಗಿ ಸಾಂಪ್ರದಾಯಿಕ ವಿದ್ಯುತ್ ಮೇಲಿನ ಅವಲಂಬನೆ ಕಡಿಮೆಯಾಗಲಿದೆ.
ಕುಸುಮ್-ಬಿ ಯೋಜನೆ ಅಡಿಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆಯನ್ನು ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಲು ರೂಪಿಸಲಾಗಿದೆ. ಆ ಮೂಲಕ ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸಲು, ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ *ಶೇ.80ರಷ್ಟು ಸಹಾಯಧನ* ನೀಡಲಾಗುತ್ತಿದೆ. ಕುಸುಮ್-ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಒತ್ತು ನೀಡಲಾಗಿದೆ. ಈ ಯೋಜನೆ ಅಡಿಯಲ್ಲಿ *ರಾಜ್ಯ ಸರ್ಕಾರ ಶೇ.50, ಕೇಂದ್ರ ಸರ್ಕಾರ ಶೇ.30* ಮತ್ತು ಫಲಾನುಭವಿಗಳು ಶೇ.20 ಮೊತ್ತವನ್ನು ಪಾವತಿಸಬೇಕಿದೆ.
ಇದನ್ನು ಓದಿ: ಬಹಳ ವರ್ಷಗಳ ಕನಸು ಈಡೇರಿಸಿದ ಸರ್ಕಾರ : ಶಾಸಕ ಜಿಟಿಡಿ
* ರಾಜ್ಯದಲ್ಲಿ MNRE ಮತ್ತು KREDL ಸಹಯೋಗದೊಂದಿಗೆ ರೈತರ ಜಮೀನಿನ ಕೊಳವೆ/ತೆರೆದ ಬಾವಿಗಳಿಗೆ ಸೋಲಾರ್ ಪಂಪ್-ಸೆಟ್ಗಳನ್ನು ಅಳವಡಿಸಲು ರೈತರಿಂದ ಅರ್ಜಿಗಳನ್ನು ಆನ್ಲೈನ್ ಮೂಲಕವಾಗಿ www.souramitra.com ವೆಬ್ಸೈಟ್ನಲ್ಲಿ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.
* ಸದರಿ ಪೋರ್ಟಲ್ ಮೂಲಕ ಸೋಲಾರ್ ಪಂಪ್-ಸೆಟ್ಗಳ ಅಳವಡಿಕೆಗಾಗಿ ರೈತರು www.souramitra.com ಪೋರ್ಟಲ್ನಲ್ಲಿ ಅರ್ಜಿ ನೋಂದಾಯಿಸಿ, ವೆಂಡರ್/ಏಜೆನ್ಸಿಯನ್ನು ಆಯ್ಕೆ ಮಾಡಿಕೊಂಡು, ಶೇ.20 ಹಣವನ್ನು ಪಾವತಿಸಬೇಕಿದೆ.
* ರೈತರಿಗೆ ತಿಳಿಸುವುದೇನೆಂದರೆ, ಪಿಎಂ ಕುಸುಮ್-ಬಿ ಯೋಜನೆಗೆ ಸಂಬಂಧಿಸಿದಂತೆ, www.kreld.karnataka.gov.in ವೆಬ್ಸೈಟ್ನಲ್ಲಿ ಹೊರಡಿಸಿದ ಪ್ರಕಟಣೆ/ಮಾಹಿತಿಗಳನ್ನು ಮಾತ್ರ ಪರಿಗಣಿಸಲು ಕೋರಲಾಗಿದೆ. ಸೌರ ಪಂಪ್ ಸೆಟ್ ನೋಂದಣಿ ಹಾಗೂ ಪಾವತಿಗೆ ಸಂಬಂಧಿಸಿದಂತೆ www.souramitra.com ನಲ್ಲಿ ಹಾಗೂ KREDLನ ಸಹಾಯವಾಣಿ 080-22202100/8095132100 ಮುಖಾಂತರ ಅಥವಾ ಹತ್ತಿರದ ಚಾವಿಸನಿನಿ ಕಚೇರಿ/ಅಧಿಕಾರಿಗಳನ್ನು ಸಂಪರ್ಕಿಸಬಹುದು. ಸದರಿ ನೋಂದಣಿ ಪ್ರಕ್ರಿಯೆಯಲ್ಲಿ ಸ್ವೀಕೃತವಾಗುವ OTPಗಳನ್ನು ಯಾರೊಂದಿಗೂ ಹಂಚಿಕೊಳ್ಳದೆ ತಾವೇ ನೋಂದಾಯಿಸಿಕೊಳ್ಳಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ) ದೂರವಾಣಿ ಸಂಖ್ಯೆ *9449598669* ಸಂಪರ್ಕಿಸಬಹುದಾಗಿದೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…