ಮೈಸೂರು

ಮೈಸೂರು ಕುಡಿವ ನೀರು, ಒಳಚರಂಡಿ ವ್ಯವಸ್ಥೆಗೆ 800 ಕೋಟಿ ರೂ. : ಸಚಿವ ಬೈರತಿ ಸುರೇಶ್

ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ 750 ರಿಂದ 800 ಕೋಟಿ ರೂಪಾಯಿ ಮೀಸಲಿಡಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಜಿ.ಟಿ.ದೇವೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮೈಸೂರು ನಗರದ ವಿವಿಧ ಬಡಾವಣೆಗಳಲ್ಲಿ ಮಳೆನೀರು ಚರಂಡಿ ನಿರ್ಮಾಣ ಮಾಡಲಾಗಿದೆ. ಆದರೆ, ಕೆಲವು ಕಡೆ ಸಂಪರ್ಕ ಕಲ್ಪಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಈ ಕಾಮಗಾರಿ ಕೈಗೊಳ್ಳಲು 27 ಕೋಟಿ ವಿಶೇಷ ಅನುದಾನಕ್ಕಾಗಿ ಮೈಸೂರು ಮಹಾನಗರ ಪಾಲಿಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ, ಆರ್ಥಿಕ ಇಲಾಖೆ ಈ ಪ್ರಸ್ತಾವನೆಯನ್ನು ತಿರಸ್ಕರಿಸಿತ್ತು ಎಂದು ವಿವರಣೆ ನೀಡಿದರು.

ಇತ್ತೀಚೆಗೆ ಮಂಡಿಸಲಾದ ಬಜೆಟ್ ನಲ್ಲಿ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆಗಾಗಿ 1500 ಕೋಟಿ ರೂಪಾಯಿಗಳನ್ನು ಮೀಸಲಿಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದನ್ನು ಪುರಸ್ಕರಿಸಿರುವ ಮುಖ್ಯಮಂತ್ರಿಗಳು ಸುಮಾರು 750 ರಿಂದ 800 ಕೋಟಿ ರೂಪಾಯಿಗಳನ್ನು ಈ ಉದ್ದೇಶಕ್ಕಾಗಿ ಮೀಸಲಿಡಲಾಗುತ್ತಿದೆ ಎಂದು ಸಚಿವರು ಸದನಕ್ಕೆ ತಿಳಿಸಿದರು.

ಎಂಡಿಎದಿಂದ 300 ಕೋಟಿ
ಮೈಸೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಗೆಂದು ಮೈಸೂರು ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗಿದೆ. ಇದಕ್ಕೆ 200 ಕೋಟಿ ರೂಪಾಯಿಗಳನ್ನೂ ನೀಡಲಾಗಿದೆ. ಇದೇ ವೇಳೆ, ನಗರದ ರಸ್ತೆಗಳಿಗೆ ವೈಟ್ ಟಾಪಿಂಗ್ ಯೋಜನೆಗಳಿಗಾಗಿ 300 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು.

ಸಿಎ ನಿವೇಶನಗಳ ಮಾರಾಟ
ವಿವಿಧ ಬಡಾವಣೆಗಳಲ್ಲಿ ಇರುವ ಸಿಎ ನಿವೇಶನಗಳನ್ನು ಮಾರಾಟ ಮಾಡುವಂತೆ ಜಿ.ಟಿ.ದೇವೇಗೌಡ ಅವರು ನೀಡಿದ ಸಲಹೆಗೆ ಸ್ಪಂದಿಸಿದ ಸಚಿವ ಬೈರತಿ ಸುರೇಶ್ ಅವರು, ಸಿಎ ನಿವೇಶನಗಳನ್ನು ಮಾರಾಟ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಇದರಿಂದ ಸುಮಾರು 4 ರಿಂದ 5 ಸಾವಿರ ಕೋಟಿ ರೂಪಾಯಿ ಆದಾಯವನ್ನು ನಿರೀಕ್ಷಿಸಲಾಗಿದೆ. ಈ ಹಣವನ್ನು ಮೈಸೂರು ಮತ್ತು ಹೊಸ ಬಡಾವಣೆಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಬಳಸಲು ರೂಪುರೇಶೆ ರೂಪಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

29 mins ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

6 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

12 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

12 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

12 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

12 hours ago