Kabini reservoir
ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು ಹೆಚ್ಚಳ ಮಾಡಲಾಗಿದೆ.
ಜಲಾಶಯಕ್ಕೆ 18,000 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 9000 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಜಲಾಶಯಕ್ಕೆ ಮತ್ತಷ್ಟು ಒಳಹರಿವು ಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸದ್ಯಕ್ಕೆ 9000 ಕ್ಯೂಸೆಕ್ಸ್ ನೀರನ್ನು ಹೊರಗೆ ಬಿಡಲಾಗುತ್ತಿದೆ.
ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 80.50 ಅಡಿಗಳಾಗಿದೆ. ರಾಜ್ಯದಲ್ಲಿಯೇ ಮೊದಲು ಭರ್ತಿ ಆಗುವ ಏಕೈಕ ಜಲಾಶಯ ಇದಾಗಿದ್ದು, ವರ್ಷದಲ್ಲಿ ಎರಡು ಬಾರಿ ಭರ್ತಿಯಾಗಲಿದೆ.
ಇನ್ನು ಜಲಾಶಯದಿಂದ ಹೆಚ್ಚಿನ ನೀರನ್ನು ಹೊರಬಿಡಲಾಗಿರುವ ಹಿನ್ನೆಲೆಯಲ್ಲಿ ಕಪಿಲಾ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ.
ಜಲಾಶಯದಿಂದ ಇನ್ನೂ ಹೆಚ್ಚಿನ ನೀರನ್ನು ಬಿಡುಗಡೆ ಮಾಡುವ ಸಾಧ್ಯತೆಯಿದ್ದು, ಜನರು ಮುನ್ನೆಚ್ಚರಿಕೆ ವಹಿಸಿ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…