ಮೈಸೂರು: ಮೈಸೂರು ಮೆಡಿಕಲ್ ಕಾಲೇಜಿನಿಂದ ೯೫ನೇ ಪದವಿ ಪ್ರದಾನ ಸವಾರಂಭವನ್ನು ಏ.೧೪ರಂದು ಬೆಳಿಗ್ಗೆ ೧೦ ಗಂಟೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಡಾ.ಎಸ್.ಚಂದ್ರಶೇಖರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಎಂಸಿ ಅಲ್ಯೂಮ್ನಿ ಅಸೋಸಿಯೇಶನ್ ಸಹಯೋಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ೧೫೧ ಪದವಿದರರಿಗೆ ಪದವಿ ಪ್ರದಾನ ಮಾಡಲಾಗುವುದು, ಈ ಬಾರಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿರುವ ಎಂಟು ಮಂದಿಗೆ ಚಿನ್ನದ ಪದಕ ಮತ್ತು ವಿಷಯವಾರು ವಿಭಾಗದಲ್ಲಿ ೧೪ ಮಂದಿಗೆ ನಗದು ಬಹುವಾನ ನೀಡಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಇಂಡಿಯನ್ ಸ್ಪೇಸ್ ರಿಸರ್ಚ್ ಸಂಸ್ಥೆಯ ಮಾಜಿ ಅಧ್ಯಕ್ಷ ಎ.ಎಸ್.ಕಿರಣ್ ಕುವಾರ್, ಮೈಸೂರು ಮೆಡಿಕಲ್ ಕಾಲೇಜಿನ ನಿರ್ದೇಶಕರು ಮತ್ತು ಡೀನ್ ಡಾ.ಕೆ.ಆರ್.ದಾಕ್ಷಾಯಿಣಿ, ಎಂಎಂಸಿ ಅಲ್ಯೂಮ್ನಿಅಸೋಸಿಯೇಶನ್ ಅಧ್ಯಕ್ಷ ಡಾ.ಎಚ್.ಎನ್.ದಿನೇಶ್, ಕಾರ್ಯದರ್ಶಿ ಡಾ.ಶಶಿಧರ್, ಮೈಸೂರು ಮೆಡಿಕಲ್ ಕಾಲೇಜಿನ ಶಿಕ್ಷಕರ ಸಂಘದ ಅಧ್ಯಕ್ಷ ಡಾ.ಬಸವಣ್ಣ, ವಿದ್ಯಾರ್ಥಿ ಕ್ಷೇವಾಭಿವೃದ್ಧಿ ಅಧಿಕಾರಿ ಡಾ.ಎಸ್.ಚಂದ್ರಶೇಖರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಸಂಘದ ಪದಾಧಿಕಾರಿಗಳಾದ ಡಾ.ಪಿ.ಎಲ್.ಬಸವಣ್ಣ, ಡಾ.ಅರ್ಜುನ್, ಡಾ.ಸುಮಂತ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್ಸ್ಟೆಬಲ್ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…
ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ…
ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…