ಮೈಸೂರು

ನೀರಿನ ಘಟಕಕ್ಕೆ ಗುದ್ದಿದ ಬೊಲೆರೋ ವಾಹನ : ತಪ್ಪಿದ ಅನಾಹುತ ; ಘಟಕ ಜಖಂ

ನಂಜನಗೂಡು : ಕೋಳಿಗಳನ್ನು ತುಂಬಿಕೊಂಡು ಬರುತ್ತಿದ್ದ ಬೊಲೆರೋ ಪಿಕಪ್ ವಾಹನ ಒಂದು ಶುದ್ಧ ನೀರಿನ ಘಟಕಕ್ಕೆ ಗುದ್ದಿದ್ದು, ಅದೃಷ್ಟವಶಾತ್‌ ಯಾವುದೇ ಅಹಿತಕರ ಘಟನೆ ನಡೆದಿಲ್ಲ.

ತಾಲೂಕಿನ ಹೆಡತಲೆ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಕೋಳಿ ಫಾರಂ ಒಂದರಿಂದ ಸುತ್ತಮುತ್ತಲಿನ ಗ್ರಾಮಗಳ ಅಂಗಡಿಗಳಿಗೆ ಕೋಳಿಗಳನ್ನು ಸರಬರಾಜು ಮಾಡುತ್ತಿದ್ದ ವಾಹನವೆಂದು ತಿಳಿದು ಬಂದಿದೆ.

ಇದನ್ನೂ ಓದಿ:-ಬಿಗ್‌ಬಾಸ್‌ಗೆ ಅನುಮತಿ ; ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

ಗುರುವಾರ ಬೆಳಿಗ್ಗೆ ೭ಕ್ಕೆ ಹೆಡತಲೆ ಗ್ರಾಮಡ ಕೋಳಿ ಅಂಗಡಿಗೆ ಕೋಳಿಗಳನ್ನು ಸರಬರಾಜು ಮಾಡಲು ಬಂದಿದ್ದ ಸಂದರ್ಭದಲ್ಲಿ ಅತಿಯಾದ ವೇಗದ ಚಾಲನೆಯಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ನಿರ್ಮಾಣ ಮಾಡಿದ್ದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಗುದ್ದಿದೆ. ಪರಿಣಾಮ ಘಟಕ ಜಕಂ ಗೊಂಡಿದ್ದು ಲಕ್ಷಾಂತರ ನಷ್ಟ ಉಂಟಾಗಿದೆ ಎನ್ನಲಾಗಿದೆ. ಜೊತೆಗೆ ಸ್ಥಳದಲ್ಲಿ ಯಾರು ಇಲ್ಲದ ಹಿನ್ನೆಲೆ ಯಾವುದೇ ಅವಘಡ ಸಂಭವಿಸಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೊಡ್ಡ ಕವಲಂದೆ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

1 hour ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

2 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

3 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

4 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

7 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

7 hours ago