ಮೈಸೂರು

ಬಾಲಕ ಮತ್ತು ಕಾರಂತಜ್ಜ

ಪ್ರಸನ್ನ ಸಂತೇಕಡೂರು
pksgoldenhelix@gmail.com

ಬಹಳಷ್ಟು ಸಲ ಲೇಖಕನ ಬರಹ ಮತ್ತು ಬದುಕು ಒಂದರ ಪ್ರತಿಬಿಂಬ ಇನ್ನೊಂದು ಅನ್ನುವಷ್ಟರ ಮಟ್ಟಿಗೆ ಬೇರ್ಪಡಿಸಲಾಗದಷ್ಟು ಸಯಾಮಿ ಅವಳಿಗಳ ರೀತಿ ಇರುವುದನ್ನ ಕಾಣಬಹುದು ಅಥವಾ ಗಂಡಭೇರುಂಡ ಪಕ್ಷಿಯ ರೀತಿ ಎರಡು ತಲೆ ಒಂದೇ ದೇಹವಾಗಿರಬಹುದು. ಇದು ಲೇಖಕನ ಸೃಜನಶೀಲ ಮತ್ತು ಕಲ್ಪನಾ ಶಕ್ತಿಯ ಮೇಲೂ ಕೆಲವೊಮ್ಮೆ ಅವಲಂಬಿತವಾಗಿ ಬರಹ ಮತ್ತು ಬದುಕು ಬೇರೆಯೇ ಆಗಿ ರೂಪುಗೊಳ್ಳಬಹುದು. ಸುಮಾರು ವರ್ಷಗಳ ಹಿಂದೆ ಡಾ. ಶಿವರಾಮ ಕಾರಂತರು ನಮ್ಮ ಶಾಲೆಗೆ ಬಂದಿದ್ದರು. ಅವರ ಜೊತೆ ಒಂದು ಫೋಟೋ ತೆಗೆಸಿಕೊಳ್ಳಬೇಕೆಂಬ ಆಸೆ ನನಗೆ ತುಂಬಾ ಇತ್ತು. ಅದು ಸಾಧ್ಯವಾಗಲಿಲ್ಲ. ಆಮೇಲೆ ಶಿವಮೊಗ್ಗದ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಓದುತ್ತಿರುವಾಗ ನಮಗೆ ಅವರ ‘ಅರಸಿಕರಲ್ಲ’ ಕಾದಂಬರಿ ಪಠ್ಯದಲ್ಲಿತ್ತು. ನಾನು ಆ ಕಾದಂಬರಿ ಬಿಟ್ಟು ‘ಅಪೂರ್ವ ಪಶ್ಚಿಮ’ ಎಂಬ ಅವರ ಇನ್ನೊಂದು ಕಾದಂಬರಿ ಓದುತ್ತ ಅದರ ಶೀರ್ಷಿಕೆಗೆ ಸೋತು ಹೋದೆ.

ಕೆಲವೊಮ್ಮೆ ಶಿವಮೊಗ್ಗದ ಗೋಪಾಳ, ಅನುಪಿನಕಟ್ಟೆಯ ಕೆರೆಯ ಹತ್ತಿರ ಕುಳಿತು ಪಶ್ಚಿಮದಲ್ಲಿ ಸೂರ್ಯ ಮುಳುಗುವುದನ್ನ ನೋಡುತ್ತ ಪಾಶ್ಚಾತ್ಯ ದೇಶಗಳು ಅದೆಷ್ಟೂ ಅಪೂರ್ವವಾಗಿರಬಹುದು ಎಂದು ಯೋಚಿಸುತ್ತಿದ್ದೆ. ಇನ್ನು ಕೆಲವೊಮ್ಮೆ ಶಿವಮೊಗ್ಗದ ಗುಡ್ಡೆ ಮರಡಿಯ ಮೇಲೆ ಕುಳಿತು ಶಾಂತವಾಗಿ ಹರಿಯುವ ತುಂಗಾ ನದಿಯನ್ನ ನೋಡುತ್ತ ಪಾಶ್ಚಾತ್ಯ ದೇಶಗಳ ಸೌಂದರ್ಯವನ್ನ ಕಲ್ಪಿಸಿಕೊಳ್ಳುತ್ತಿದ್ದೆ. ಅಲ್ಲಿ ನದಿಯ ತಿರುವಿನಲ್ಲಿ ಹಾರುವ ಬೆಳ್ಳಕ್ಕಿಗಳ ಸಾಲು ರಾಷ್ಟ್ರಕವಿ ಕುವೆಂಪುರವರ ‘ದೇವರು ರುಜು ಮಾಡಿದನು’ ಕವಿತೆಯನ್ನು ಜ್ಞಾಪಕಕ್ಕೆ ತರುತಿತ್ತು. ಕೆಲವು ಸಲ ನಮ್ಮ ಸಂತೇಕಡೂರಿನ ಕೆರೆಯ ಹತ್ತಿರ ಇರುವ ಹಳೆಯ ಈಶ್ವರನ ಗುಡಿಯ ಹಿಂದೆ ಅಡಿಕೆ ಮರಗಳ ಸಂದಿಯಲ್ಲಿ ಮುಳುಗುವ ಕೆಂಪಾದ ಸೂರ್ಯನ ಕಿರಣಗಳನ್ನು ನೋಡುತ್ತ ಅಮೇರಿಕಾದ ಬಗ್ಗೆ ಯೋಚಿಸುತ್ತಿದ್ದೆ.
ಮುಂದೆ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎಸ್ಸಿ, ಪಿಎಚ್.ಡಿ. ಮುಗಿಸಿಕೊಂಡು ಉನ್ನತ ಸಂಶೋಧನೆಗೆ ಅಮೆರಿಕಾಗೆ ಹೋದಾಗ ಅಲ್ಲಿ ವರ್ಜಿನೀಯಾ ಸಂಸ್ಥಾನದ ರಿಚ್ಮಂಡ್ ನಗರದಲ್ಲಿ ಸಹೋದ್ಯೋಗಿ ಆಗಿ ಸಿಕ್ಕವನೇ ನನ್ನ ಕಾದಂಬರಿಯ ಕಥಾನಾಯಕ ‘ಸು’. ಇಲ್ಲಿ ‘ಸು’ ನನ್ನ ಬದುಕಿನಲ್ಲಿ ಬಂದು ಹೋದವನು. ಅದೇ ರಿಚ್ಮಂಡ್ ನಗರದ ಮಾನ್ಯುಮೆಂಟ್ ರಸ್ತೆಯಲ್ಲಿ ಕಾರಿನಲ್ಲಿ ಹೋಗುವಾಗ ಅರ್ಥರ್ ಆಶ್ ಎಂಬ ಜಗದ್ವಿಖ್ಯಾತ ಟೆನಿಸ್ ಆಟಗಾರನ ಪ್ರತಿಮೆ ನನ್ನ ಅಸ್ಥಿಪಂಜರದ ಬಾಲಕ ಕತೆಗೆ ಪ್ರೇರಣೆಯಾಯಿತು. ಟೆಕ್ಸಾಸ್ ಸಂಸ್ಥಾನದ ಡಲ್ಲಾಸ್ ನಗರದಲ್ಲಿ ಒಂದು ವರ್ಷ ಇದ್ದೆ. ಅಲ್ಲಿ ನನ್ನ ಅಪಾರ್ಟ್ಮೆಂಟ್ ಸಂಕೀರ್ಣದಲ್ಲಿದ್ದ ಇನ್ನೊಬ್ಬ ಪರಿಚಿತ ವ್ಯಕ್ತಿ ನನ್ನ ಒಲವೇ ಜೀವನ ಸಾಕ್ಷಾತ್ಕಾರ ಕತೆಯ ನಾಯಕನಾದ. ಅದಕ್ಕೆ ಉತ್ತರ ಕ್ಯಾಲಿಫೋರ್ನಿಯಾ ಸ್ವರ್ಣಸೇತು ಕನ್ನಡ ಬಳಗದ ಕಥಾಸ್ಪರ್ಧೆಯಲ್ಲಿ ಮೊದಲ ಬಹುಮಾನ ಕೂಡ ಬಂತು.
ನಾನು ಅಮೆರಿಕಾದಿಂದ ವಾಪಸು ಮೈಸೂರಿಗೆ ಬಂದ ಮೇಲೆ ಬಾಲ್ಯದಲ್ಲಿ ಕಾರಂತರ ಜೊತೆ ಫೋಟೋ ತೆಗೆಸಿಕೊಳ್ಳಲಾಗದ ವಿಷಯ ನನ್ನನ್ನು ತುಂಬಾ ಕಾಡುತಿತ್ತು. ಅದೇ ಸಮಯದಲ್ಲಿ ನನ್ನ ಬಾಲ್ಯದ ಗೆಳತಿಯೊಬ್ಬಳು ಕಾರಂತರು ನಮ್ಮ ಶಾಲೆಗೆ ಬಂದಾಗ ತೆಗೆಸಿಕೊಂಡಿದ್ದ ಆ ಫೋಟೋವನ್ನು ಕಳಿಸದಳು. ಆ ಫೋಟೋದಲ್ಲಿ ಅವಳನ್ನು ಸೇರಿ ನನ್ನ ಕೆಲವು ಸಹಪಾಠಿಗಳು, ಶಿಕ್ಷಕಿಯರು ಇದ್ದರು. ನಾನಿಲ್ಲದ ಆ ಫೋಟೋವನ್ನ ನೋಡುತ್ತ ‘ಬಾಲಕ ಮತ್ತು ಕಾರಂತಜ್ಜ’ ಕತೆ ಬರೆದು ಫೇಸ್ಬುಕ್ ಗೋಡೆಗೆ ಹಾಕಿದೆ. ತಕ್ಷಣವೇ ಆ ಕತೆಯನ್ನ ಓದಿ ಹಲವಾರು ಜನ ಕರೆ ಮಾಡಲು ಆರಂಭಿಸಿದರು. ಆ ಬಾಲಕ ಯಾರು? ಎಂದು ಕೇಳಲು ಶುರು ಮಾಡಿದರು. ಚಾಮರಾಜನಗರದ ಸಹೃದಯ ಸಮಾಜಮುಖಿ ಹಿರಿಯರಾದ ವೆಂಕಟರಾಜು ಕೃಷ್ಣಮೂರ್ತಿಯವರು ಈ ಕತೆಯನ್ನ ಚಲನಚಿತ್ರ ಮಾಡಿಸಿದರೆ ತುಂಬಾ ಒಳ್ಳೆಯದಾಗುತ್ತದೆ ಎಂದು ತಿಳಿಸಿ ತಮ್ಮ ರಂಗವಾಹಿನಿ ಪತ್ರಿಕೆಯಲ್ಲಿ ಅದನ್ನ ಪ್ರಕಟಿಸಿದರು. ಈಗ ಆ ಬಾಲಕ ಬೆಳೆದು ದೊಡ್ಡವನಾಗಿದ್ದಾನೆ. ಕಾರಂತಜ್ಜ ಮಣ್ಣಿಗೆ ಮರಳಿದ್ದಾರೆ. ಇಲ್ಲಿ ಬರಹ ಮತ್ತು ಬದುಕು ಬೇರೆಯಲ್ಲ ಎಂಬುದು ತಿಳಿಯುತ್ತದೆ.

andolanait

Recent Posts

ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್‌ ಮತ್ತು ಸಿಪಿಎಂ…

19 mins ago

ಸಭೆ ನಡೆಸುತ್ತಿರುವಾಗಲೇ ತೀವ್ರ ಅಸ್ವಸ್ಥ ; ಡಿಸಿಎಂ ಪವನ್‌ ಕಲ್ಯಾಣ್‌ಗೆ ದಿಢೀರ್‌ ಶಸ್ತ್ರ ಚಿಕಿತ್ಸೆ,

ಹೈದರಾಬಾದ್ : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಅವರಿಗೆ ಹೈದರಾಬಾದ್‌ನಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ…

48 mins ago

ಸರ್ವಾಧಿಕಾರಿ ಬಿಜೆಪಿಯೇ ಮಹಿಳಾ ವಿರೋಧಿ : ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ

ಬೆಂಗಳೂರು : ಮಹಿಳಾ ಮೀಸಲಾತಿ ಪರಿಕಲ್ಪನೆ ಕಾಂಗ್ರೆಸ್‌ನ ಕೂಸು. ಮಸೂದೆಗೆ ಸೋಲಾಗಲಿದೆ ಎಂದು ಗೊತ್ತಿದ್ದರೂ ಸರ್ವಾಧಿಕಾರಿಯಂತೆ ಯಾವುದೇ ಚರ್ಚೆ ಮಾಡದೆ,…

1 hour ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ ಪ್ರಕರಣ : ಎಸ್‌.ಪಿ.ಮಲ್ಲಿಕಾರ್ಜುನ ಹೇಳಿದ್ದೇನು?

ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ…

2 hours ago

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

ರೋಮ್‌ : ಇಟಲಿಯ ಬರ್ಗಾಮೊ ಪ್ರಾಂತ್ಯದ ಕೊವೊದಲ್ಲಿ ಇಬ್ಬರು ಭಾರತೀಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೊವೊ ನಿವಾಸಿ ರಾಗಿಂದರ್ ಸಿಂಗ್…

2 hours ago

ಮೈಸೂರು | ಪಬ್‌ನಲ್ಲಿ ಗಲಾಟೆ ; ಓರ್ವ ಯುವಕನ ಕೊಲೆ

ಮೈಸೂರು : ಪಬ್‌ನಲ್ಲಿ ನಡೆದ ಗಲಾಟೆ ಪರಿಣಾಮ ಓರ್ವ ಯುವಕ ಕೊಲೆಯಾಗಿರುವ ಘಟನೆ ಮೈಸೂರಿನ ವಿಜಯನಗರದ ಎರಡನೇ ಹಂತದ ರೆಸ್ಟೋರೆಂಟ್‌ನಲ್ಲಿ…

2 hours ago