ಮೈಸೂರು

ಚಾಲಕನ ನಿರ್ಲಕ್ಷ್ಯದಿಂದ ರಸ್ತೆಗೆ ಬಿದ್ದ ಮಗು: ಪ್ರಾಣಪಾಯದಿಂದ ಪಾರು

ಮೈಸೂರು: ಚಾಲಕ ಹಾಗೂ ಕಂಡಕ್ಟರ್‌ ಅವರ ನಿರ್ಲಕ್ಷ್ಯದಿಂದಾಗಿ ಚಲಿಸುತ್ತಿದ್ದ ಬಸ್‌ನಿಂದ ಒಂದು ಮಗು, ಇಬ್ಬರು ಮಹಿಳೆಯರು ಸೇರಿದಂತೆ ಮೂವರು ರಸ್ತೆಗೆ ಬಿದ್ದಿರುವ ಘಟನೆ ನಗರದ ರಾಮಸ್ವಾಮಿಯ ವೃತ್ತದಲ್ಲಿ ನಡೆದಿದೆ.

ಸಂಜೆ ಸುಮಾರು ೩:೩೦ರ ಸಮಯದಲ್ಲಿ ಸಿಬಿಎಸ್‌ನಿಂದ ಹೊರಟ ಬಸ್‌ ರಾಮಸ್ವಾಮಿ ವೃತ್ತದ ಮಾರ್ಗವಾಗಿ ಗದ್ದಿಗೆ ತೆರಳುತ್ತಿತ್ತು. ಬಸ್ಸಿನಲ್ಲಿ ಸುಮಾರು ಮೂರು ವರ್ಷದ ಮಗು ಸೇರಿದಂತೆ ಇಬ್ಬರು ಮಹಿಳೆಯರು ತೆರೆದ ಡೋರ್‌ ಮೂಲಕ ರಸ್ತೆಗೆ ಬಿದ್ದಿದ್ದಾರೆ. ಬಿದ್ದ ಮಗು ಸ್ಥಳದಲ್ಲೇ ಪ್ರಜ್ಞೆ ತಪ್ಪಿದೆ. ಬಸ್ಸಿನ ವೇಗ ಕಡಿಮೆ ಇದ್ದಿದ್ದರಿಂದ ಎಲ್ಲರು ಪ್ರಾಣಪಾಯದಿಂದ ಪಾರಾಗಿದ್ದಾರೆ.

ಈ ಘಟನೆ ಕಂಡಕ್ಟರ್ ಮತ್ತು ಡ್ರೈವರ್ ನಿರ್ಲಕ್ಷದಿಂದ ಸಂಭವಿಸಿದೆ ಎಂದು ಪ್ರಯಾಣಿಕರು ದೂರಿದ್ದಾರೆ. ತೆರಳುವ ಮುಂಚೆ ಬಸ್ಸಿನ ಬಾಗಿಲುಗಳನ್ನು ಮುಚ್ಚದೆ ಪ್ರಯಾಣಕ್ಕೆ ಮುಂದಾದ ಕಾರಣ ಹಾಗೂ ಮಿತಿಗೆ ಮೀರಿ ಹೆಚ್ಚಿನ ಪ್ರಯಾಣಿಕರನ್ನು ಕರೆದೊಯ್ದರಿಂದ ಈ ಅನಾಹುತ ಸಂಭವಿಸಿದೆ ಎಂದು ಬಸ್ಸಿನಲ್ಲಿದ್ದವರು ದೂರಿದ್ದಾರೆ.

ಸಾರಿಗೆ ಸಿಬ್ಬಂದಿಗಳು ಬಿದ್ದ ವ್ಯಕ್ತಿಗಳನ್ನು ಆಸ್ಪತ್ರೆಗೆ ಕರೆದೊಯ್ಯದೆ ಸ್ಥಳದಿಂದ ಬಿಟ್ಟು ಪಾರಾಗಲು ಯತ್ನಿಸಿದಾಗ ವಿದ್ಯಾರ್ಥಿಗಳು ಅವರನ್ನು ತಡೆಗಟ್ಟಿ ಸಂಚಾರ ಪೊಲೀಸರಿಗೆ ವಿಚಾರವನ್ನು ತಿಳಿಸಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ಮಾಹಿತಿ ಪಡೆದು, ಮಧ್ಯಸ್ಥಿಕೆ ವಹಿಸಿ ಪ್ರಕರಣವನ್ನು ತಿಳಿ ಹಾಯಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅಸಂವಿಧಾನಿಕ ಪದ ಬಳಸಿದ ಸಿ.ಟಿ.ರವಿ?

ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್‌ ಶಾ ಅವರು ಡಾ.ಬಿ.ಆರ್‌. ಅಂಬೇಡ್ಕರ್‌ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…

10 mins ago

ಅಮಿತ್ ಶಾ ಹೇಳಿಕೆ ಖಂಡಿಸಿ ವಿಧಾನಸಭೆಯಲ್ಲೂ ಪ್ರತಿಭಟನೆ

ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…

40 mins ago

ಅಕ್ರಮ ವಾಸಿಗಳ ಪತ್ತೆಗೆ ಸರ್ಕಾರದಿಂದ ಹೊಸ ಕ್ರಮ: ಸಚಿವ ಜಿ.ಪರಮೇಶ್ವರ್‌ ಮಾಹಿತಿ

ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…

1 hour ago

ಮಂಡ್ಯ ನುಡಿಜಾತ್ರೆಗೆ ಬರುವವರಿಗೆ ಭರ್ಜರಿ ಭೋಜನ ವ್ಯವಸ್ಥೆ

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು,…

1 hour ago

ಅಂಬೇಡ್ಕರ್‌ ಕುರಿತು ಅಮಿತ್‌ ಶಾ ವಿವಾದಾತ್ಮಕ ಹೇಳಿಕೆ: ದೇಶಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ

ನವದೆಹಲಿ: ಬಾಬಾಸಾಹೇಬ್‌ ಅಂಬೇಡ್ಕರ್‌ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.…

2 hours ago

ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸ್‌ ಹಿಂಪಡೆದ ರಾಜ್ಯ ಸರ್ಕಾರ

ತುಮಕೂರು: 70 ಲಕ್ಷ ಕರೆಂಟ್‌ ಬಿಲ್‌ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸನ್ನು ಸರ್ಕಾರ ಹಿಂಪಡೆದಿದೆ. ಸರ್ಕಾರಿ ನೀರಾವರಿ ಯೋಜನೆಗೆ…

2 hours ago