ಮೈಸೂರು: ಚಾಲಕ ಹಾಗೂ ಕಂಡಕ್ಟರ್ ಅವರ ನಿರ್ಲಕ್ಷ್ಯದಿಂದಾಗಿ ಚಲಿಸುತ್ತಿದ್ದ ಬಸ್ನಿಂದ ಒಂದು ಮಗು, ಇಬ್ಬರು ಮಹಿಳೆಯರು ಸೇರಿದಂತೆ ಮೂವರು ರಸ್ತೆಗೆ ಬಿದ್ದಿರುವ ಘಟನೆ ನಗರದ ರಾಮಸ್ವಾಮಿಯ ವೃತ್ತದಲ್ಲಿ ನಡೆದಿದೆ.
ಸಂಜೆ ಸುಮಾರು ೩:೩೦ರ ಸಮಯದಲ್ಲಿ ಸಿಬಿಎಸ್ನಿಂದ ಹೊರಟ ಬಸ್ ರಾಮಸ್ವಾಮಿ ವೃತ್ತದ ಮಾರ್ಗವಾಗಿ ಗದ್ದಿಗೆ ತೆರಳುತ್ತಿತ್ತು. ಬಸ್ಸಿನಲ್ಲಿ ಸುಮಾರು ಮೂರು ವರ್ಷದ ಮಗು ಸೇರಿದಂತೆ ಇಬ್ಬರು ಮಹಿಳೆಯರು ತೆರೆದ ಡೋರ್ ಮೂಲಕ ರಸ್ತೆಗೆ ಬಿದ್ದಿದ್ದಾರೆ. ಬಿದ್ದ ಮಗು ಸ್ಥಳದಲ್ಲೇ ಪ್ರಜ್ಞೆ ತಪ್ಪಿದೆ. ಬಸ್ಸಿನ ವೇಗ ಕಡಿಮೆ ಇದ್ದಿದ್ದರಿಂದ ಎಲ್ಲರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಈ ಘಟನೆ ಕಂಡಕ್ಟರ್ ಮತ್ತು ಡ್ರೈವರ್ ನಿರ್ಲಕ್ಷದಿಂದ ಸಂಭವಿಸಿದೆ ಎಂದು ಪ್ರಯಾಣಿಕರು ದೂರಿದ್ದಾರೆ. ತೆರಳುವ ಮುಂಚೆ ಬಸ್ಸಿನ ಬಾಗಿಲುಗಳನ್ನು ಮುಚ್ಚದೆ ಪ್ರಯಾಣಕ್ಕೆ ಮುಂದಾದ ಕಾರಣ ಹಾಗೂ ಮಿತಿಗೆ ಮೀರಿ ಹೆಚ್ಚಿನ ಪ್ರಯಾಣಿಕರನ್ನು ಕರೆದೊಯ್ದರಿಂದ ಈ ಅನಾಹುತ ಸಂಭವಿಸಿದೆ ಎಂದು ಬಸ್ಸಿನಲ್ಲಿದ್ದವರು ದೂರಿದ್ದಾರೆ.
ಸಾರಿಗೆ ಸಿಬ್ಬಂದಿಗಳು ಬಿದ್ದ ವ್ಯಕ್ತಿಗಳನ್ನು ಆಸ್ಪತ್ರೆಗೆ ಕರೆದೊಯ್ಯದೆ ಸ್ಥಳದಿಂದ ಬಿಟ್ಟು ಪಾರಾಗಲು ಯತ್ನಿಸಿದಾಗ ವಿದ್ಯಾರ್ಥಿಗಳು ಅವರನ್ನು ತಡೆಗಟ್ಟಿ ಸಂಚಾರ ಪೊಲೀಸರಿಗೆ ವಿಚಾರವನ್ನು ತಿಳಿಸಿದ್ದಾರೆ.
ಸ್ಥಳಕ್ಕೆ ಬಂದ ಪೊಲೀಸರು ಮಾಹಿತಿ ಪಡೆದು, ಮಧ್ಯಸ್ಥಿಕೆ ವಹಿಸಿ ಪ್ರಕರಣವನ್ನು ತಿಳಿ ಹಾಯಿಸಿದ್ದಾರೆ.
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…
ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…
ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…
ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…
ಎಸ್.ಎ. ಹುಸೇನ್ ಆಯುಧಗಳಿಗೆ ವಿಶೇಷ ಪೂಜೆ; ಜಿಲ್ಲೆಯಾದ್ಯಂತ ಸಂಭ್ರಮದ ಹಬ್ಬದಾಚರಣೆಗೆ ಸಿದ್ಧತೆ ಮಡಿಕೇರಿ: ಕೊಡಗಿನ ವಿಶಿಷ್ಟ ಸಂಸ್ಕೃತಿ ಹಾಗೂ ಪರಂಪರೆಯ…