Mysore
23
haze

Social Media

ಸೋಮವಾರ, 22 ಡಿಸೆಂಬರ್ 2025
Light
Dark

ಗರ್ಭಿಣಿ ಸಾವಿಗೆ ಕಾರಣವಾಯ್ತ ಟಿ ವಿ

ಮೈಸೂರು : ದಂಪತಿ ಸಂಚರಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು ಗರ್ಭಿಣಿ ಮೃತಪಟ್ಟ ದಾರುಣ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಸಮೀಪ ನಡೆದಿದೆ. ಬಹಳಷ್ಟು ಲಗೇಜ್ ಇದ್ದ ಹಿನ್ನೆಲೆಯಲ್ಲಿ ಹ್ಯಾಂಡಲ್ ತಿರುಗಿಸಲಾಗದೇ ನಿಯಂತ್ರಣ ತಪ್ಪಿದ ಬೈಕ್ ಕೆರೆಗೆ ಬಿದ್ದು ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ದೇವನೂರು ಗ್ರಾಮದ ಯಮುನಾ(22) ಮೃತಪಟ್ಟ ಮಹಿಳೆ. ಅವರ ಪತಿ ದಕ್ಷಿಣಾ ಮೂರ್ತಿ ಅಲಿಯಾಸ್ ನವೀನ್ (28) ಗಂಭೀರ ಗಾಯಗೊಂಡಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ದಕ್ಷಿಣಾಮೂರ್ತಿ ಅವರು ತನ್ನ ಹೆಂಡತಿ ಗರ್ಭಿಣಿಯಾಗಿದ್ದ ಯಮುನಾ ಜೊತೆ ಬೈಕ್ ನಲ್ಲಿ ನಂಜನಗೂಡು ಮಾರ್ಗವಾಗಿ ಸಿದ್ದಯ್ಯನಹುಂಡಿ ಗ್ರಾಮಕ್ಕೆ ತೆರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೈಕ್ ನಲ್ಲಿ ಗಂಡ ಹೆಂಡತಿ ಇಬ್ಬರೂ ಹೋಗುವ ಸಂದರ್ಭ ಬೈಕ್ ನ ಮುಂದೆ ಕೆಲವು ಲಗೇಜ್ ಇಟ್ಟುಕೊಂಡಿದ್ದ ಕಾರಣ ಬೈಕ್ ಹ್ಯಾಂಡಲ್ ತಿರುಗಿಸಲು ಆಗದೇ ಕೂಗಲೂರು ಗ್ರಾಮದ ಕೆರೆಗೆ ಬಿದ್ದಿದ್ದಾರೆ ಎನ್ನಲಾಗಿದೆ.

 

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!