ಮೈಸೂರು : ದಂಪತಿ ಸಂಚರಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು ಗರ್ಭಿಣಿ ಮೃತಪಟ್ಟ ದಾರುಣ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಸಮೀಪ ನಡೆದಿದೆ. ಬಹಳಷ್ಟು ಲಗೇಜ್ ಇದ್ದ ಹಿನ್ನೆಲೆಯಲ್ಲಿ ಹ್ಯಾಂಡಲ್ ತಿರುಗಿಸಲಾಗದೇ ನಿಯಂತ್ರಣ ತಪ್ಪಿದ ಬೈಕ್ ಕೆರೆಗೆ ಬಿದ್ದು ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ದೇವನೂರು ಗ್ರಾಮದ ಯಮುನಾ(22) ಮೃತಪಟ್ಟ ಮಹಿಳೆ. ಅವರ ಪತಿ ದಕ್ಷಿಣಾ ಮೂರ್ತಿ ಅಲಿಯಾಸ್ ನವೀನ್ (28) ಗಂಭೀರ ಗಾಯಗೊಂಡಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ದಕ್ಷಿಣಾಮೂರ್ತಿ ಅವರು ತನ್ನ ಹೆಂಡತಿ ಗರ್ಭಿಣಿಯಾಗಿದ್ದ ಯಮುನಾ ಜೊತೆ ಬೈಕ್ ನಲ್ಲಿ ನಂಜನಗೂಡು ಮಾರ್ಗವಾಗಿ ಸಿದ್ದಯ್ಯನಹುಂಡಿ ಗ್ರಾಮಕ್ಕೆ ತೆರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೈಕ್ ನಲ್ಲಿ ಗಂಡ ಹೆಂಡತಿ ಇಬ್ಬರೂ ಹೋಗುವ ಸಂದರ್ಭ ಬೈಕ್ ನ ಮುಂದೆ ಕೆಲವು ಲಗೇಜ್ ಇಟ್ಟುಕೊಂಡಿದ್ದ ಕಾರಣ ಬೈಕ್ ಹ್ಯಾಂಡಲ್ ತಿರುಗಿಸಲು ಆಗದೇ ಕೂಗಲೂರು ಗ್ರಾಮದ ಕೆರೆಗೆ ಬಿದ್ದಿದ್ದಾರೆ ಎನ್ನಲಾಗಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…