ಮೈಸೂರು : ದಂಪತಿ ಸಂಚರಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು ಗರ್ಭಿಣಿ ಮೃತಪಟ್ಟ ದಾರುಣ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಸಮೀಪ ನಡೆದಿದೆ. ಬಹಳಷ್ಟು ಲಗೇಜ್ ಇದ್ದ ಹಿನ್ನೆಲೆಯಲ್ಲಿ ಹ್ಯಾಂಡಲ್ ತಿರುಗಿಸಲಾಗದೇ ನಿಯಂತ್ರಣ ತಪ್ಪಿದ ಬೈಕ್ ಕೆರೆಗೆ ಬಿದ್ದು ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ದೇವನೂರು ಗ್ರಾಮದ ಯಮುನಾ(22) ಮೃತಪಟ್ಟ ಮಹಿಳೆ. ಅವರ ಪತಿ ದಕ್ಷಿಣಾ ಮೂರ್ತಿ ಅಲಿಯಾಸ್ ನವೀನ್ (28) ಗಂಭೀರ ಗಾಯಗೊಂಡಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ದಕ್ಷಿಣಾಮೂರ್ತಿ ಅವರು ತನ್ನ ಹೆಂಡತಿ ಗರ್ಭಿಣಿಯಾಗಿದ್ದ ಯಮುನಾ ಜೊತೆ ಬೈಕ್ ನಲ್ಲಿ ನಂಜನಗೂಡು ಮಾರ್ಗವಾಗಿ ಸಿದ್ದಯ್ಯನಹುಂಡಿ ಗ್ರಾಮಕ್ಕೆ ತೆರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೈಕ್ ನಲ್ಲಿ ಗಂಡ ಹೆಂಡತಿ ಇಬ್ಬರೂ ಹೋಗುವ ಸಂದರ್ಭ ಬೈಕ್ ನ ಮುಂದೆ ಕೆಲವು ಲಗೇಜ್ ಇಟ್ಟುಕೊಂಡಿದ್ದ ಕಾರಣ ಬೈಕ್ ಹ್ಯಾಂಡಲ್ ತಿರುಗಿಸಲು ಆಗದೇ ಕೂಗಲೂರು ಗ್ರಾಮದ ಕೆರೆಗೆ ಬಿದ್ದಿದ್ದಾರೆ ಎನ್ನಲಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…