ಮೈಸೂರು : ದಂಪತಿ ಸಂಚರಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು ಗರ್ಭಿಣಿ ಮೃತಪಟ್ಟ ದಾರುಣ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಸಮೀಪ ನಡೆದಿದೆ. ಬಹಳಷ್ಟು ಲಗೇಜ್ ಇದ್ದ ಹಿನ್ನೆಲೆಯಲ್ಲಿ ಹ್ಯಾಂಡಲ್ ತಿರುಗಿಸಲಾಗದೇ ನಿಯಂತ್ರಣ ತಪ್ಪಿದ ಬೈಕ್ ಕೆರೆಗೆ ಬಿದ್ದು ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ದೇವನೂರು ಗ್ರಾಮದ ಯಮುನಾ(22) ಮೃತಪಟ್ಟ ಮಹಿಳೆ. ಅವರ ಪತಿ ದಕ್ಷಿಣಾ ಮೂರ್ತಿ ಅಲಿಯಾಸ್ ನವೀನ್ (28) ಗಂಭೀರ ಗಾಯಗೊಂಡಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ದಕ್ಷಿಣಾಮೂರ್ತಿ ಅವರು ತನ್ನ ಹೆಂಡತಿ ಗರ್ಭಿಣಿಯಾಗಿದ್ದ ಯಮುನಾ ಜೊತೆ ಬೈಕ್ ನಲ್ಲಿ ನಂಜನಗೂಡು ಮಾರ್ಗವಾಗಿ ಸಿದ್ದಯ್ಯನಹುಂಡಿ ಗ್ರಾಮಕ್ಕೆ ತೆರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೈಕ್ ನಲ್ಲಿ ಗಂಡ ಹೆಂಡತಿ ಇಬ್ಬರೂ ಹೋಗುವ ಸಂದರ್ಭ ಬೈಕ್ ನ ಮುಂದೆ ಕೆಲವು ಲಗೇಜ್ ಇಟ್ಟುಕೊಂಡಿದ್ದ ಕಾರಣ ಬೈಕ್ ಹ್ಯಾಂಡಲ್ ತಿರುಗಿಸಲು ಆಗದೇ ಕೂಗಲೂರು ಗ್ರಾಮದ ಕೆರೆಗೆ ಬಿದ್ದಿದ್ದಾರೆ ಎನ್ನಲಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…