ಮೈಸೂರು: ಬಾಡಿಗೆ ಕೇಳುವ ನೆಪದಲ್ಲಿ ಬಂದು ಮನೆವೊಡತಿಯನ್ನೇ ಕಟ್ಟಿಹಾಕಿ ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ದಂಪತಿಗಳನ್ನು ಬಂಧಿಸುವಲ್ಲಿ ಮೈಸೂರಿನ ಹೆಬ್ಬಾಳ ಪೊಲೀಸರು ಯಶಸ್ವಿಯಾಗಿದ್ದಾರೆ.
ಚಿತ್ರದುರ್ಗ ಮೂಲದ ವನಿತಾ (24 ವರ್ಷ) ಹಾಗೂ ಚೇತನ್ (29 ವರ್ಷ) ಪೊಲೀಸರ ಅತಿಥಿಯಾದ ದಂಪತಿಗಳಾಗಿದ್ದಾರೆ.
ಹೆಬ್ಬಾಳದ ಒಂದನೇ ಹಂತದ ನಿವಾಸಿ ನಿವೃತ್ತ ಶಿಕ್ಷಕಿ ಶಾಂತಮ್ಮ ಅವರ ಮನೆಯ ಮಹಡಿಯ ಮೇಲೆ ಖಾಲಿಯಿದ್ದ ಮನೆಯನ್ನು ಬಾಡಿಗೆ ಕೇಳಲು ಚಿತ್ರದುರ್ಗದ ದಂಪತಿ ಆಗಮಿಸಿದ್ದರು. ಮನೆ ಬಾಡಿಗೆ ಬಗ್ಗೆ ಮಾತನಾಡಿ ಬಳಿಕ ಅಡ್ವಾನ್ಸ್ ತರುವುದಾಗಿ ಚೇತನ್ ಎಟಿಎಂಗೆ ಹೋಗಿದ್ದಾನೆ. ಬಳಿಕ ಬಂದು ಎಟಿಎಂ ನಲ್ಲಿ ಹಣವಿಲ್ಲ. ನಿಮ್ಮ ಬಳಿ ಫೋನ್ ಪೇ, ಗೂಗಲ್ ಪೇ ಇದೇಯಾ ಎಂದು ಕೇಳಿದ್ದಾನೆ. ಇದಕ್ಕೆ ಇಲ್ಲ ಎಂದ ಶಾಂತಮ್ಮ ಜತೆ ತುಂಬಾ ಸುಸ್ತಾಗಿ ದಣಿವಾಗಿದ್ದು ಸ್ವಲ್ಪ ಸಮಯ ವಿಶ್ರಾಂತಿ ಪಡೆಯುವುದಾಗಿ ಹೇಳಿದ್ದಾರೆ.
ಅವರನ್ನು ಮನೆಯಲ್ಲಿ ಬಿಟ್ಟು ಶಾಂತಮ್ಮ ತರಕಾರಿ ಖರೀದಿಸಲು ಮಾರ್ಕೆಟ್ ಹೋಗಿ ಬಂದಿದ್ದಾರೆ. ಆ ವೇಳೆ ಚೇತನ್ ಹಾಗೂ ವನಿತಾ ದಂಪತಿ ಟ್ರೈನ್ಗೆ ತೆರಳುವುದಾಗಿ ತಿಳಿಸಿ ಕುಡಿಯಲು ನೀರು ಕೇಳಿದ್ದಾರೆ.
ನೀರು ನೀಡಲು ಹೋದ ಶಾಂತಮ್ಮರನ್ನು ಹಿಂಬಾಲಿಸಿದ ಚೇತನ್ ಕಟ್ಟಿಹಾಕಿ ಕತ್ತಿನಲ್ಲಿದ್ದ ಐದು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ದೋಚಿ ಶಾಂತಮ್ಮರನ್ನು ಪ್ರಜ್ಞೆ ತಪ್ಪಿಸಿ ಅಲ್ಲಿಂದ ಪರಾರಿಯಾಗಿದ್ದರು.
ಈ ಘಟನೆ ಸಂಬಂಧ ಶಾಂತಮ್ಮ ಸೊಸೆ ಹೆಬ್ಬಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಕಳ್ಳರ ಜಾಡು ಹಿಡಿದ ಪೊಲೀಸರು ಕೇವಲ ಮೂರು ದಿನಗಳಲ್ಲಿ ಬಂಧಿಸಿ ಚಿನ್ನಾಭರಣ ವಶಪಡಿಸಿಕೊಂಡರು. ಬಳಿಕ ಅಪರಾಧಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…