ಮೈಸೂರು ; ನಗರದ ರಾಮನುಜ ರಸ್ತೆಯ 9ನೇ ಕ್ರಾಸ್ ಬಳಿ ಇರುವ ಕೆರೆಯ ದಡದಲ್ಲಿ ಮೊಸಳೆ ಬಾಯಿಗೆ ಹಸು ಬಲಿಯಾಗಿರುವ ಘಟನೆ ನಡೆದಿದೆ.
ನೀರನ್ನು ಕುಡಿಯಲು ಹೋದ ಹಸುವನ್ನು ಎಳೆದೊಯ್ದು ಮೊಸಳೆ ತಿಂದು ಹಾಕಿದೆ ಎನ್ನಲಾಗಿದೆ. ಸ್ಥಳೀಯರಿಗೆ ಸೇರಿದ ಹಸು ಮೊಸಳೆ ಬಾಯಿಗೆ ತುತ್ತಾಗಿದೆ. ಮನೆಯ ಹಿಂಭಾಗದ ಜಾಗದಲ್ಲಿ ಹಸುವನ್ನು ಮೇಯಲು ಬಿಟ್ಟಿದ್ದು ಇಂದು ಬೆಳಿಗ್ಗೆ ಮೊಸಳೆ ಹಸುವನ್ನು ಕೆರೆಯ ಒಳಗೆ ಎಳೆದೊಯ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇಂದು ಬೆಳಗ್ಗೆ ಹಸು ಕೆರೆಯಲ್ಲಿ ಬಿದ್ದಿರುವುದನ್ನು ಗಮನಿಸಿ ಸ್ಥಳೀಯ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ನಂತರ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಮುಂದಿನ ಕಾರ್ಯಚರಣೆ ಕೈಗೊಂಡಿದ್ದಾರೆ.