ಮೈಸೂರು : ಕುವೆಂಪುನಗರದ ನಿವಾಸಿ, ಕೇಂದ್ರ ರಕ್ಷಣಾ ಇಲಾಖೆಯ ನಿವೃತ್ತ ಅಧಿಕಾರಿ ಎ.ಮಹದೇವಪ್ಪ (83) ಬುಧವಾರ ಸಂಜೆ ವಯೋಸಹಜ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ದಾಕ್ಷಾಯಿಣಿ, ಪುತ್ರಿ, ಅಳಿಯ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರು ಮೂಲತಃ ಎಚ್.ಡಿ.ಕೋಟೆ ತಾಲೂಕಿನ ಅಂತರಸಂತೆ ಗ್ರಾಮದ ನಿವಾಸಿ ದಿ.ಅಂದಾನಶೆಟ್ಟರ ಪುತ್ರ.
ಮೃತರು ಮಹಾರಾಷ್ಟ್ರದ ಪಿಂಪ್ರಿಯ ಮದ್ದುಗುಂಡುಗಳ ತಯಾರಿಕೆ ಕಾರ್ಖಾನೆಯಲ್ಲಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದರು. ಆರೋಗ್ಯ ವಿಷಯ ಕುರಿತಂತೆ ಹಲವಾರು ಪುಸ್ತಕಗಳನ್ನು ಪ್ರಕಟಿಸಿದ್ದರು. ಲೇಖಕರು, ದಾನಿಗಳು, ಆಪ್ತ ಸಮಾಲೋಚಕರು, ಸಮಾಜ ಸೇವಕರು ಹೀಗೆ ಬಹುಮುಖ ವ್ಯಕ್ತಿತ್ವವನ್ನು ಹೊಂದಿದ್ದರು. ಅಬ್ದುಲ್ ಕಲಾಂ ರಾಷ್ಟ್ರೀಯ ಪ್ರಶಸ್ತಿ, ಕರ್ನಾಟಕ ಜನತಾ ಸೇನಾದಳ ಟ್ರಸ್ಟ್ ಕೊಡ ಮಾಡುವ ಬುದ್ದ ಭಾರತ ರತ್ನ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.
ಮಹದೇವಪ್ಪ ಅವರು ಬದುಕಿದ್ದಾಗ ಅವರು ಇಚ್ಚೆಪಟ್ಟಿದ್ದಂತೆ ಕುಟುಂಬದವರು ಅವರ ದೇಹವನ್ನು ಗುರುವಾರ ಮೈಸೂರಿನ ಜೆಎಸ್ಎಸ್ ಮೆಡಿಕಲ್ ಕಾಲೇಜಿಗೆ ದಾನ ಮಾಡಿದರು.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…