ಮೈಸೂರು

ದೇಹದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬ

ಮೈಸೂರು : ಕುವೆಂಪುನಗರದ ನಿವಾಸಿ, ಕೇಂದ್ರ ರಕ್ಷಣಾ ಇಲಾಖೆಯ ನಿವೃತ್ತ ಅಧಿಕಾರಿ ಎ.ಮಹದೇವಪ್ಪ (83) ಬುಧವಾರ ಸಂಜೆ ವಯೋಸಹಜ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ದಾಕ್ಷಾಯಿಣಿ, ಪುತ್ರಿ, ಅಳಿಯ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರು ಮೂಲತಃ ಎಚ್.ಡಿ.ಕೋಟೆ ತಾಲೂಕಿನ ಅಂತರಸಂತೆ ಗ್ರಾಮದ ನಿವಾಸಿ ದಿ.ಅಂದಾನಶೆಟ್ಟರ ಪುತ್ರ.

ಮೃತರು ಮಹಾರಾಷ್ಟ್ರದ ಪಿಂಪ್ರಿಯ ಮದ್ದುಗುಂಡುಗಳ ತಯಾರಿಕೆ ಕಾರ್ಖಾನೆಯಲ್ಲಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದರು. ಆರೋಗ್ಯ ವಿಷಯ ಕುರಿತಂತೆ ಹಲವಾರು ಪುಸ್ತಕಗಳನ್ನು ಪ್ರಕಟಿಸಿದ್ದರು. ಲೇಖಕರು, ದಾನಿಗಳು, ಆಪ್ತ ಸಮಾಲೋಚಕರು, ಸಮಾಜ ಸೇವಕರು ಹೀಗೆ ಬಹುಮುಖ ವ್ಯಕ್ತಿತ್ವವನ್ನು ಹೊಂದಿದ್ದರು. ಅಬ್ದುಲ್ ಕಲಾಂ ರಾಷ್ಟ್ರೀಯ ಪ್ರಶಸ್ತಿ, ಕರ್ನಾಟಕ ಜನತಾ ಸೇನಾದಳ ಟ್ರಸ್ಟ್ ಕೊಡ ಮಾಡುವ ಬುದ್ದ ಭಾರತ ರತ್ನ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಮಹದೇವಪ್ಪ ಅವರು ಬದುಕಿದ್ದಾಗ ಅವರು ಇಚ್ಚೆಪಟ್ಟಿದ್ದಂತೆ ಕುಟುಂಬದವರು ಅವರ ದೇಹವನ್ನು ಗುರುವಾರ ಮೈಸೂರಿನ ಜೆಎಸ್ಎಸ್ ಮೆಡಿಕಲ್ ಕಾಲೇಜಿಗೆ ದಾನ ಮಾಡಿದರು.

lokesh

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

6 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

6 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

6 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

7 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

19 hours ago