ಮೈಸೂರು

ದೇಹದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬ

ಮೈಸೂರು : ಕುವೆಂಪುನಗರದ ನಿವಾಸಿ, ಕೇಂದ್ರ ರಕ್ಷಣಾ ಇಲಾಖೆಯ ನಿವೃತ್ತ ಅಧಿಕಾರಿ ಎ.ಮಹದೇವಪ್ಪ (83) ಬುಧವಾರ ಸಂಜೆ ವಯೋಸಹಜ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ದಾಕ್ಷಾಯಿಣಿ, ಪುತ್ರಿ, ಅಳಿಯ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರು ಮೂಲತಃ ಎಚ್.ಡಿ.ಕೋಟೆ ತಾಲೂಕಿನ ಅಂತರಸಂತೆ ಗ್ರಾಮದ ನಿವಾಸಿ ದಿ.ಅಂದಾನಶೆಟ್ಟರ ಪುತ್ರ.

ಮೃತರು ಮಹಾರಾಷ್ಟ್ರದ ಪಿಂಪ್ರಿಯ ಮದ್ದುಗುಂಡುಗಳ ತಯಾರಿಕೆ ಕಾರ್ಖಾನೆಯಲ್ಲಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದರು. ಆರೋಗ್ಯ ವಿಷಯ ಕುರಿತಂತೆ ಹಲವಾರು ಪುಸ್ತಕಗಳನ್ನು ಪ್ರಕಟಿಸಿದ್ದರು. ಲೇಖಕರು, ದಾನಿಗಳು, ಆಪ್ತ ಸಮಾಲೋಚಕರು, ಸಮಾಜ ಸೇವಕರು ಹೀಗೆ ಬಹುಮುಖ ವ್ಯಕ್ತಿತ್ವವನ್ನು ಹೊಂದಿದ್ದರು. ಅಬ್ದುಲ್ ಕಲಾಂ ರಾಷ್ಟ್ರೀಯ ಪ್ರಶಸ್ತಿ, ಕರ್ನಾಟಕ ಜನತಾ ಸೇನಾದಳ ಟ್ರಸ್ಟ್ ಕೊಡ ಮಾಡುವ ಬುದ್ದ ಭಾರತ ರತ್ನ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಮಹದೇವಪ್ಪ ಅವರು ಬದುಕಿದ್ದಾಗ ಅವರು ಇಚ್ಚೆಪಟ್ಟಿದ್ದಂತೆ ಕುಟುಂಬದವರು ಅವರ ದೇಹವನ್ನು ಗುರುವಾರ ಮೈಸೂರಿನ ಜೆಎಸ್ಎಸ್ ಮೆಡಿಕಲ್ ಕಾಲೇಜಿಗೆ ದಾನ ಮಾಡಿದರು.

lokesh

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

13 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

14 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

15 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

15 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

21 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

21 hours ago