ಮೈಸೂರು: ಅರಿಶಿನದ ನೀರಿನಲ್ಲಿ ಓಕುಳಿ ಆಡಿ ಸಂಭ್ರಮ. ನಗರಪಾಲಿಕೆಯ ನೀರಿನ ಟ್ಯಾಂಕರ್ ಮೂಲಕ ದೊಡ್ಡ ಪಾತ್ರೆಗಳಲ್ಲಿ ನೀರನ್ನು ತುಂಬಿಸಿ ಅದರೊಳಗೆ ನೈಸರ್ಗಿಕ ಬಣ್ಣಗಳನ್ನು ಅದ್ದಿದ್ದು, ಮಕ್ಕಳು ಪರಸ್ಪರ ನೀರನ್ನು ಎರೆಚುತ್ತ ಕುಣಿದು ಕುಪ್ಪಳಿಸುವ ಮೂಲಕ ಚಿಣ್ಣರ ಮೇಳಕ್ಕೆ ವರ್ಣರಂಜಿತ ತೆರೆಬಿತ್ತು.
ಎತ್ತಿನ ಬಂಡಿ ಮಾದರಿಯಲ್ಲಿ ಮಕ್ಕಳಿಂದ ಮೆರವಣಿಗೆ ನಡೆಯಿತು. ತಮಟೆ ಸದ್ದಿಗೆ ಮಕ್ಕಳು ಹುಚ್ಚೆದ್ದು ಕುಣಿದರು. ಸುಮಾರು ಒಂದು ಗಂಟೆ ಕಾಲ ಈ ಸಂಭ್ರಮ ಮುಂದುವರಿದಿದ್ದು, ಮಕ್ಕಳ ಖುಷಿ ಕಂಡು ಪೋಷಕರೂ ಆನಂದಪಟ್ಟರು. ಈ ಮೂಲಕ ಚಿಣ್ಣರ ಮೇಳಕ್ಕೆ ಸಂಭ್ರಮದ ತೆರೆ ಬಿದ್ದಿತು.
೨೬ನೇ ಚಿಣ್ಣರ ಮೇಳ ಇದಾಗಿದ್ದು, ಕಳೆದ ತಿಂಗಳ ಏ.೧೪ರಂದು ವನ್ಯಜೀವಿ ತಜ್ಞ ಕೃಪಾಕರ್ ಚಾಲನೆ ನೀಡಿದ್ದರು. ಮಕ್ಕಳಿಗಾಗಿ ಮನೋರಂಜನೆಯ ಮೂಲಕ ಕಲಿಕೆಯ ವಿವಿಧ ಚಟುವಟಿಕೆಗಳು ನಡೆದಿದ್ದು, ಅನಿಲ ರೇವೂರ ಶಿಬಿರದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. ಕೋಟಿಗಾನಹಳ್ಳಿ ರಾಮಯ್ಯರ ೧೨ ನಾಟಕಗಳನ್ನು ಮಕ್ಕಳು ಕಲಿತು ಅಭಿನಯಿಸಿದ್ದು ಈ ಬಾರಿಯ ಮೇಳದ ವಿಶೇಷವಾಗಿತ್ತು.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…