Categories: ಮೈಸೂರು

ರಂಗಾಯಣ ಚಿಣ್ಣರ ಮೇಳಕ್ಕೆ ಸಂಭ್ರಮದ ತೆರೆ

ಮೈಸೂರು: ಅರಿಶಿನದ ನೀರಿನಲ್ಲಿ ಓಕುಳಿ ಆಡಿ ಸಂಭ್ರಮ. ನಗರಪಾಲಿಕೆಯ ನೀರಿನ ಟ್ಯಾಂಕರ್ ಮೂಲಕ ದೊಡ್ಡ ಪಾತ್ರೆಗಳಲ್ಲಿ ನೀರನ್ನು ತುಂಬಿಸಿ ಅದರೊಳಗೆ ನೈಸರ್ಗಿಕ ಬಣ್ಣಗಳನ್ನು ಅದ್ದಿದ್ದು, ಮಕ್ಕಳು ಪರಸ್ಪರ ನೀರನ್ನು ಎರೆಚುತ್ತ ಕುಣಿದು ಕುಪ್ಪಳಿಸುವ ಮೂಲಕ ಚಿಣ್ಣರ ಮೇಳಕ್ಕೆ ವರ್ಣರಂಜಿತ ತೆರೆಬಿತ್ತು.

ಎತ್ತಿನ ಬಂಡಿ ಮಾದರಿಯಲ್ಲಿ ಮಕ್ಕಳಿಂದ ಮೆರವಣಿಗೆ ನಡೆಯಿತು. ತಮಟೆ ಸದ್ದಿಗೆ ಮಕ್ಕಳು ಹುಚ್ಚೆದ್ದು ಕುಣಿದರು. ಸುಮಾರು ಒಂದು ಗಂಟೆ ಕಾಲ ಈ ಸಂಭ್ರಮ ಮುಂದುವರಿದಿದ್ದು, ಮಕ್ಕಳ ಖುಷಿ ಕಂಡು ಪೋಷಕರೂ ಆನಂದಪಟ್ಟರು. ಈ ಮೂಲಕ ಚಿಣ್ಣರ ಮೇಳಕ್ಕೆ ಸಂಭ್ರಮದ ತೆರೆ ಬಿದ್ದಿತು.

೨೬ನೇ ಚಿಣ್ಣರ ಮೇಳ ಇದಾಗಿದ್ದು, ಕಳೆದ ತಿಂಗಳ ಏ.೧೪ರಂದು ವನ್ಯಜೀವಿ ತಜ್ಞ ಕೃಪಾಕರ್ ಚಾಲನೆ ನೀಡಿದ್ದರು. ಮಕ್ಕಳಿಗಾಗಿ ಮನೋರಂಜನೆಯ ಮೂಲಕ ಕಲಿಕೆಯ ವಿವಿಧ ಚಟುವಟಿಕೆಗಳು ನಡೆದಿದ್ದು, ಅನಿಲ ರೇವೂರ ಶಿಬಿರದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. ಕೋಟಿಗಾನಹಳ್ಳಿ ರಾಮಯ್ಯರ ೧೨ ನಾಟಕಗಳನ್ನು ಮಕ್ಕಳು ಕಲಿತು ಅಭಿನಯಿಸಿದ್ದು ಈ ಬಾರಿಯ ಮೇಳದ ವಿಶೇಷವಾಗಿತ್ತು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

1 hour ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

2 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

3 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

4 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

4 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

6 hours ago