ಮೈಸೂರು

ಸ್ನೇಹಿತರ ನಡುವೆ ಹೊಡೆದಾಟ: ಓರ್ವನ ಕೊಲೆಯಲ್ಲಿ ಅಂತ್ಯ

ಮೈಸೂರು : ಹಣಕಾಸಿನ ವಿಚಾರದಲ್ಲಿ ಸ್ನೇಹಿತರ ನಡುವೆ ಶುರುವಾದ ಹೊಡೆದಾಟ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಬೀಡಿ ಕಾಲೋನಿಯಲ್ಲಿ ನಡೆದಿದೆ.

ಆಸಿಫ್ .ಆ.ಬಿಲ್ಲಾ ಆಸಿಫ್(36) ಮೃತ ದುರ್ದೈವಿ. ಗಲಾಟೆಯಲ್ಲಿ ಗಾಯಗೊಂಡ ಆರೋಪಿ ಸಲೀಂ ಪಾಷಾ ಆಸ್ಪತ್ರೆಗೆ ದಾಖಲಾಗಿದ್ದಾನೆ.

ಬೀಡಿ ಕಾಲೋನಿಯ ಬಳಿ ಇರುವ ಟೀ ಅಂಗಡಿಯಲ್ಲಿ ಕುಳಿತಿದ್ದ ಆಸಿಫ್ ಜೊತೆ ಹಣಕಾಸಿನ ವಿಚಾರದಲ್ಲಿ ಸಲೀಂ ಪಾಷ ಕ್ಯಾತೆ ತೆಗೆದಿದ್ದಾನೆ. ಇಬ್ಬರ ನಡುವೆ ಹೊಡೆದಾಟ ಶುರುವಾಗಿದೆ. ಗಲಾಟೆ ಗಂಭೀರ ಸ್ವರೂಪಕ್ಕೆ ತಿರುಗಿದಾಗ ಆಸಿಫ್ ತಲೆಗೆ ನೀಲಗಿರಿಮರದ ಪಟ್ಟಿಯಿಂದ ಹೊಡೆದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದ ಆಸಿಫ್ ನ ಕೆ.ಆರ್.ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಹೊಡೆದಾಟದಲ್ಲಿ ಗಾಯಗೊಂಡ ಆರೋಪಿ ಸಲೀಂಪಾಷಾ ಗೂ ಸಹ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್, ಡಿಸಿಪಿಗಳಾದ ಮುತ್ತುರಾಜ್ ಹಾಗೂ ಜಾಹ್ನವಿ, ಎಸಿಪಿ ಶಾಂತಮಲ್ಲಪ್ಪ, ಉದಯಗಿರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ ರಾಜು ಭೇಟಿ ನೀಡಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

17 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

17 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

17 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

17 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

17 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

17 hours ago