ಮೈಸೂರು

ಗಾಂಜಾ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ: ಓರ್ವನ ಕೊಲೆಯಲ್ಲಿ ಅಂತ್ಯ

ಎಚ್.ಡಿ.ಕೋಟೆ: ಗಾಂಜಾ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದಲ್ಲಿ ನಡೆದಿದೆ.

ಕಲಾಂ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದು, ತೌಹಿದ್‌ ಎಂಬಾತನೇ ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ.

ಇದನ್ನು ಓದಿ : ಅಕ್ರಮ ಮದ್ಯ, ಗಾಂಜಾ, ಡ್ರಗ್ಸ್ ಮಾರಾಟಕ್ಕೆ ಕಡಿವಾಣ ಹಾಕಿ : ಜಿಲ್ಲಾಧಿಕಾರಿ ನಿರ್ದೇಶನ

ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ವಿಕೋಪಕ್ಕೆ ತಿರುಗಿದ್ದು, ಕಲಾಂನನ್ನು ತೌಹಿದ್‌ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಇಬ್ಬರು ಯುವಕರು ಗಲಾಟೆ ವೇಳೆ ಗಾಂಜಾ ಸೇವಿಸಿದ್ದರು ಎನ್ನಲಾಗಿದೆ.

ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಸ್ಥಳಕ್ಕೆ ಎಚ್.ಡಿ.ಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತ ಕಲಾಂ ಶವವನ್ನು ಮರಣೋತ್ತರ ಪರೀಕ್ಷೆಗೆಂದು ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಎಚ್.ಡಿ.ಕೋಟೆ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾನ್ಫಿಡೆಂಟ್ ಮಾಲೀಕನಿಗೆ ಬದುಕುವ ಕಾನ್ಫಿಡೆಂಟ್ ಇಲ್ಲದಾಯಿತೇ?

ಕೋಟಿ ಕೋಟಿ ಹಣವಿದ್ದರೂ ನೆಮ್ಮದಿಯ ಸಂಬಂಧಗಳು ಇಲ್ಲದಿದ್ದರೆ ಜೀವನ ನಿರರ್ಥಕ. ಐಷಾರಾಮಿ ಬದುಕು ಎಂಬುದು ಸೌಕರ್ಯಗಳನ್ನು ನೀಡಬಲ್ಲದೇ ಹೊರತು, ಶಾಶ್ವತ…

6 mins ago

ಓದುಗರ ಪತ್ರ: ಗಬ್ಬು ನಾರುತ್ತಿರುವ ಚಾ.ನಗರದ ಮೋರಿಗಳು

ಜಾನಪದ ತವರೂರಾದ ಚಾಮರಾಜನಗರದ ನಂದಿ ಭವನ ರಸ್ತೆಯ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಮೋರಿ (ಡ್ರೈನೇಜ್)ಯಲ್ಲಿ ಸ್ವಚ್ಛತೆ ಇಲ್ಲದೆ ತ್ಯಾಜ್ಯ…

11 mins ago

ಓದುಗರ ಪತ್ರ: ಡಾ.ಜಯಮಾಲ ಅವರಿಗೆ ಅಭಿನಂದನೆಗಳು

ಹಿರಿಯ ನಟಿ, ನಿರ್ಮಾಪಕಿ, ಮಾಜಿ ಸಚಿವೆ ಡಾ.ಜಯಮಾಲ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ೨ನೇ ಬಾರಿಗೆ ಆಯ್ಕೆಯಾಗಿರುವುದು…

13 mins ago

ಓದುಗರ ಪತ್ರ: ಕಸಾಪ ಗೌರವಕ್ಕೆ ಚ್ಯುತಿ ತಂದ ಜೋಶಿ

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಕಳೆದ ಮೂರು ವರ್ಷಗಳಿಂದ ನಡೆದಿರುವ ಅಧಿಕಾರ…

16 mins ago

ಫೆ.೫ರಂದು ಶ್ರೀ ಶಂಭುಲಿಂಗೇಶ್ವರ ದೇವಾಲಯ ಲೋಕಾರ್ಪಣೆ

ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ  ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ…

3 hours ago

ಬಿಪಿಎಲ್ ಕಾರ್ಡ್ ಇಲ್ಲದಿದ್ದರೆ ಜಿಲ್ಲಾಸ್ಪತ್ರೆ ದುಬಾರಿ!

ನವೀನ್ ಡಿಸೋಜ ವೈದ್ಯಕೀಯ ಶಿಕ್ಷಣ ಇಲಾಖೆ ಆಡಳಿತಕ್ಕೊಳಪಟ್ಟ ಬಳಿಕ ಸೇವೆಯೊಂದಿಗೆ ಶುಲ್ಕವೂ ಹೆಚ್ಚಳ; ಪ್ರತಿಯೊಂದು ಸೇವೆಗೂ ಪಾವತಿ ಮಾಡಬೇಕಾದ ಅನಿವಾರ್ಯತೆ …

3 hours ago