ನಂಜನಗೂಡು: ನಂಜನಗೂಡು ನಗರದಲ್ಲಿರುವ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದರು ಕೂಡ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ನೇಣಿಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.
ತಾಲೂಕಿನ ಕುರಹಟ್ಟಿ ಗ್ರಾಮದ ಮಂಜು@ ಶಿವಕುಮಾರ್ ಮತ್ತು ಸವಿತಾ ದಂಪತಿಗಳ ಪುತ್ರಿ ತ್ರಿಶಾಲ 16 ವರ್ಷದ ಮೃತ ಬಾಲಕಿ ನಂಜನಗೂಡು ನಗರದ ಗುರುಮಲ್ಲೇಶ್ವರ ಖಾಸಗಿ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾಭ್ಯಾಸ ಮಾಡಿ ಫಲಿತಾಂಶಕ್ಕಾಗಿ ಕಾಯುತ್ತಿದ್ದಳು. ಇಂದು ಫಲಿತಾಂಶ ಬಂದ ಬಳಿಕ 440 ಅಂಕಗಳನ್ನು ಗಳಿಸಿಕೊಂಡು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದ ತ್ರಿಶಾಲ, ನಾನು ಪರೀಕ್ಷೆಯನ್ನು ಡಿಸ್ಟಿಂಕ್ಷನ್ ಬರುವ ಮಟ್ಟಕ್ಕೆ ಬರೆದಿದ್ದೇನೆ. ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರುವುದು ಕಡಿಮೆ ಅಂಕ ಎಂದು ಮನನೊಂದು ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ನೇಣಿಗೆ ಶರಣಾಗಿದ್ದಾಳೆ. ಬಾಲಕಿಯ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟುವಂತಿದೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…