ನಂಜನಗೂಡು: ನಂಜನಗೂಡು ನಗರದಲ್ಲಿರುವ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದರು ಕೂಡ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ನೇಣಿಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.
ತಾಲೂಕಿನ ಕುರಹಟ್ಟಿ ಗ್ರಾಮದ ಮಂಜು@ ಶಿವಕುಮಾರ್ ಮತ್ತು ಸವಿತಾ ದಂಪತಿಗಳ ಪುತ್ರಿ ತ್ರಿಶಾಲ 16 ವರ್ಷದ ಮೃತ ಬಾಲಕಿ ನಂಜನಗೂಡು ನಗರದ ಗುರುಮಲ್ಲೇಶ್ವರ ಖಾಸಗಿ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾಭ್ಯಾಸ ಮಾಡಿ ಫಲಿತಾಂಶಕ್ಕಾಗಿ ಕಾಯುತ್ತಿದ್ದಳು. ಇಂದು ಫಲಿತಾಂಶ ಬಂದ ಬಳಿಕ 440 ಅಂಕಗಳನ್ನು ಗಳಿಸಿಕೊಂಡು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದ ತ್ರಿಶಾಲ, ನಾನು ಪರೀಕ್ಷೆಯನ್ನು ಡಿಸ್ಟಿಂಕ್ಷನ್ ಬರುವ ಮಟ್ಟಕ್ಕೆ ಬರೆದಿದ್ದೇನೆ. ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರುವುದು ಕಡಿಮೆ ಅಂಕ ಎಂದು ಮನನೊಂದು ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ನೇಣಿಗೆ ಶರಣಾಗಿದ್ದಾಳೆ. ಬಾಲಕಿಯ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟುವಂತಿದೆ.
ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…
ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್ ಕಣಿವೆಯಲ್ಲಿ…
ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್ ಆಸ್ಪತ್ರೆಗೆ ದಾಖಲಾಗಿದ್ದ ಶರದ್ ಪವಾರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶರದ್ ಪವಾರ್…
ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…
ಹಾಸನ: ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…