ಮೈಸೂರು : ಕರ್ನಾಟಕದ ಕಲಾ-ಶಿಲ್ಪ ಪರಂಪರೆಯು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಮೈಸೂರಿನ ಖ್ಯಾತ ಕರಕುಶಲ ಶಿಲ್ಪಿ ಕೈಸರ್ ಅಲಿ ಖಾನ್ (ಕೈಜರ್ ಆಲಿ ಖಾನ್) ಅವರು ನಿರ್ಮಿಸಿದ ಸ್ಪೀಕರ್ ಪೀಠವನ್ನು ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಅಧಿಕೃತವಾಗಿ ಸ್ಥಾಪಿಸಲಾಗಿದೆ. ಇದನ್ನು “ಕರ್ನಾಟಕ ಮಾಡೆಲ್” ಎಂದೇ ಯೋಗಿ ಆದಿತ್ಯನಾಥ್ ಸರ್ಕಾರವು ಪ್ರಶಂಸಿಸಿದೆ.
ಕರ್ನಾಟಕ ವಿಧಾನಸಭೆಯ ಸ್ಪೀಕರ್ ಪೀಠದ ಮಾದರಿಯನ್ನು ಅನುಸರಿಸಿ, ಸ್ವಲ್ಪ ಬದಲಾವಣೆಗಳೊಂದಿಗೆ ಈ ಭವ್ಯ ಪೀಠವನ್ನು ರೂಪಿಸಲಾಗಿದೆ. 1956ರಲ್ಲಿ ಕೆಂಗಲ್ ಹನುಮಂತಯ್ಯ ಅವರ ಆಣತಿಯಂತೆ ಹುಣಸೂರು ಬೀಟಿಮರದಿಂದ ಮತ್ತು ಶಿವಮೊಗ್ಗದ ಕುಶಲಕರ್ಮಿಗಳಿಂದ ಕೆತ್ತನೆ ಮಾಡಲ್ಪಟ್ಟ ಕರ್ನಾಟಕದ ಸ್ಪೀಕರ್ ಪೀಠದಂತೆಯೇ, ಇದರಲ್ಲೂ ಸಾಂಪ್ರದಾಯಿಕ ಕೆತ್ತನೆಗಳು, ಅಲಂಕಾರಿಕ ಮೋಟಿಫ್ಗಳು ಮತ್ತು ಘನತೆಯನ್ನು ಪ್ರತಿಬಿಂಬಿಸುವ ವಿನ್ಯಾಸವಿದೆ. ಕರ್ನಾಟಕದ ಪೀಠದಲ್ಲಿ ಗಂಡಬೆರುಂಡ ಮತ್ತು ಸಿಂಹದ ಲಾಂಛನಗಳಿದ್ದರೆ, ಯುಪಿ ಪೀಠದಲ್ಲಿ ರಾಜ್ಯಕ್ಕೆ ಸಂಬಂಧಿಸಿದ ಕೆಲವು ಮಾರ್ಪಾಡುಗಳೊಂದಿಗೆ ತೆರೆದ ರಚನೆಯನ್ನು ಅಳವಡಿಸಲಾಗಿದೆ.
ಉತ್ತರ ಪ್ರದೇಶದ ಸ್ಪೀಕರ್ ಸತೀಶ್ ಮಹಾನ್ ಅವರು ಬೆಂಗಳೂರಿನ ವಿಧಾನಸೌಧಕ್ಕೆ ಭೇಟಿ ನೀಡಿದಾಗ ಕರ್ನಾಟಕದ ಪೀಠವನ್ನು ಮೆಚ್ಚಿಕೊಂಡಿದ್ದರು. ಅದರಿಂದ ಪ್ರೇರಿತರಾಗಿ ಅವರು ಇದೇ ರೀತಿಯ ಪೀಠವನ್ನು ತಯಾರಿಸುವ ಆಸಕ್ತಿ ವ್ಯಕ್ತಪಡಿಸಿದ್ದರು. ಕರ್ನಾಟಕದ ಸ್ಪೀಕರ್ ಯು.ಟಿ. ಖಾದರ್ ಅವರು ಈ ವಿಷಯದಲ್ಲಿ ಸಹಕರಿಸಿ ಮೈಸೂರಿನ ಕೈಸರ್ ಅಲಿ ಖಾನ್ ಅವರನ್ನು ಸಂಪರ್ಕಿಸಿದರು. ರೋಸ್ವುಡ್ ಮರದಿಂದ ತಯಾರಾದ ಈ ಪೀಠವು ಅತ್ಯಂತ ನುಣ್ಣಗೆ ಕೆತ್ತನೆಯಾಗಿದ್ದು, ಕರ್ನಾಟಕದ ಕುಶಲಕರ್ಮಿಗಳ ಕೈಚಳಕಕ್ಕೆ ಸಾಕ್ಷಿಯಾಗಿದೆ.
ಈ ಪೀಠವು ಉತ್ತರ ಪ್ರದೇಶ ವಿಧಾನಸಭೆಯ ಬಜೆಟ್ ಅಧಿವೇಶನಕ್ಕೂ ಮೊದಲು ಲಕ್ನೋ ತಲುಪಿದ್ದು, ಬುಧವಾರ ಅಧಿಕೃತ ಸ್ಥಾಪನೆ ನಡೆಯಿತು. ಇದೀಗ ಯುಪಿ ವಿಧಾನಸಭೆಯ ಸ್ಪೀಕರ್ ಪೀಠದ ಮೂಲಕ ಕರ್ನಾಟಕದ ಕಲಾ ಪರಂಪರೆಯು ಇನ್ನಷ್ಟು ರಾಷ್ಟ್ರವ್ಯಾಪ್ತವಾಗಿ ಮೆರೆಯುತ್ತಿದೆ.
ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ…
ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶರಾಗಿದ್ದಾರೆ. ಹಿರಿಯ ಗಾಯಕಿ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ…
ಬೈರುತ್: ಅಮೇರಿಕಾ-ಇರಾನ್ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಬ್ಜುಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದಾಳಿಯಲ್ಲಿ 11 ಮಂದಿ…
ಬೆಂಗಳೂರು : ಶಕ್ತಿ ಯೋಜನೆಯ ಮಹಿಳಾ ಟಿಕೆಟ್ಗಳನ್ನು ಪುರುಷ ಪ್ರಯಾಣಿಕರಿಗೂ ನೀಡಿ ಹಣ ಸಂಗ್ರಹಿಸಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ…