ಮೈಸೂರು

ಮೈಸೂರಿನಿಂದ ಲಕ್ನೋಗೆ ಭವ್ಯ ಪೀಠ : UP ವಿಧಾನಸಭೆಯಲ್ಲಿ ಕರ್ನಾಟಕದ ಕಲಾ ಛಾಪು

ಮೈಸೂರು : ಕರ್ನಾಟಕದ ಕಲಾ-ಶಿಲ್ಪ ಪರಂಪರೆಯು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಮೈಸೂರಿನ ಖ್ಯಾತ ಕರಕುಶಲ ಶಿಲ್ಪಿ ಕೈಸರ್ ಅಲಿ ಖಾನ್ (ಕೈಜರ್ ಆಲಿ ಖಾನ್) ಅವರು ನಿರ್ಮಿಸಿದ ಸ್ಪೀಕರ್ ಪೀಠವನ್ನು ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಅಧಿಕೃತವಾಗಿ ಸ್ಥಾಪಿಸಲಾಗಿದೆ. ಇದನ್ನು “ಕರ್ನಾಟಕ ಮಾಡೆಲ್” ಎಂದೇ ಯೋಗಿ ಆದಿತ್ಯನಾಥ್ ಸರ್ಕಾರವು ಪ್ರಶಂಸಿಸಿದೆ.

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಪೀಠದ ಮಾದರಿಯನ್ನು ಅನುಸರಿಸಿ, ಸ್ವಲ್ಪ ಬದಲಾವಣೆಗಳೊಂದಿಗೆ ಈ ಭವ್ಯ ಪೀಠವನ್ನು ರೂಪಿಸಲಾಗಿದೆ. 1956ರಲ್ಲಿ ಕೆಂಗಲ್ ಹನುಮಂತಯ್ಯ ಅವರ ಆಣತಿಯಂತೆ ಹುಣಸೂರು ಬೀಟಿಮರದಿಂದ ಮತ್ತು ಶಿವಮೊಗ್ಗದ ಕುಶಲಕರ್ಮಿಗಳಿಂದ ಕೆತ್ತನೆ ಮಾಡಲ್ಪಟ್ಟ ಕರ್ನಾಟಕದ ಸ್ಪೀಕರ್ ಪೀಠದಂತೆಯೇ, ಇದರಲ್ಲೂ ಸಾಂಪ್ರದಾಯಿಕ ಕೆತ್ತನೆಗಳು, ಅಲಂಕಾರಿಕ ಮೋಟಿಫ್‌ಗಳು ಮತ್ತು ಘನತೆಯನ್ನು ಪ್ರತಿಬಿಂಬಿಸುವ ವಿನ್ಯಾಸವಿದೆ. ಕರ್ನಾಟಕದ ಪೀಠದಲ್ಲಿ ಗಂಡಬೆರುಂಡ ಮತ್ತು ಸಿಂಹದ ಲಾಂಛನಗಳಿದ್ದರೆ, ಯುಪಿ ಪೀಠದಲ್ಲಿ ರಾಜ್ಯಕ್ಕೆ ಸಂಬಂಧಿಸಿದ ಕೆಲವು ಮಾರ್ಪಾಡುಗಳೊಂದಿಗೆ ತೆರೆದ ರಚನೆಯನ್ನು ಅಳವಡಿಸಲಾಗಿದೆ.

ಉತ್ತರ ಪ್ರದೇಶದ ಸ್ಪೀಕರ್ ಸತೀಶ್ ಮಹಾನ್ ಅವರು ಬೆಂಗಳೂರಿನ ವಿಧಾನಸೌಧಕ್ಕೆ ಭೇಟಿ ನೀಡಿದಾಗ ಕರ್ನಾಟಕದ ಪೀಠವನ್ನು ಮೆಚ್ಚಿಕೊಂಡಿದ್ದರು. ಅದರಿಂದ ಪ್ರೇರಿತರಾಗಿ ಅವರು ಇದೇ ರೀತಿಯ ಪೀಠವನ್ನು ತಯಾರಿಸುವ ಆಸಕ್ತಿ ವ್ಯಕ್ತಪಡಿಸಿದ್ದರು. ಕರ್ನಾಟಕದ ಸ್ಪೀಕರ್ ಯು.ಟಿ. ಖಾದರ್ ಅವರು ಈ ವಿಷಯದಲ್ಲಿ ಸಹಕರಿಸಿ ಮೈಸೂರಿನ ಕೈಸರ್ ಅಲಿ ಖಾನ್ ಅವರನ್ನು ಸಂಪರ್ಕಿಸಿದರು. ರೋಸ್‌ವುಡ್ ಮರದಿಂದ ತಯಾರಾದ ಈ ಪೀಠವು ಅತ್ಯಂತ ನುಣ್ಣಗೆ ಕೆತ್ತನೆಯಾಗಿದ್ದು, ಕರ್ನಾಟಕದ ಕುಶಲಕರ್ಮಿಗಳ ಕೈಚಳಕಕ್ಕೆ ಸಾಕ್ಷಿಯಾಗಿದೆ.

ಈ ಪೀಠವು ಉತ್ತರ ಪ್ರದೇಶ ವಿಧಾನಸಭೆಯ ಬಜೆಟ್ ಅಧಿವೇಶನಕ್ಕೂ ಮೊದಲು ಲಕ್ನೋ ತಲುಪಿದ್ದು, ಬುಧವಾರ ಅಧಿಕೃತ ಸ್ಥಾಪನೆ ನಡೆಯಿತು. ಇದೀಗ ಯುಪಿ ವಿಧಾನಸಭೆಯ ಸ್ಪೀಕರ್ ಪೀಠದ ಮೂಲಕ ಕರ್ನಾಟಕದ ಕಲಾ ಪರಂಪರೆಯು ಇನ್ನಷ್ಟು ರಾಷ್ಟ್ರವ್ಯಾಪ್ತವಾಗಿ ಮೆರೆಯುತ್ತಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

13 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

14 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

15 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

20 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

20 hours ago