elephants
ಎಚ್.ಡಿ.ಕೋಟೆ: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ನಾಗರಹೊಳೆಯ ದಮ್ಮನಕಟ್ಟೆ ಸಫಾರಿಯ ವೇಳೆ ಕಬಿನಿ ಹಿನ್ನೀರಿನಲ್ಲಿ ಆನೆಗಳ ಹಿಂಡು ಹಸಿರು ಹುಲ್ಲನ್ನು ತಿನ್ನುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ.
ಎಚ್.ಡಿ.ಕೋಟೆ ಭಾಗದಲ್ಲಿ ಕಳೆದ ಕೆಲ ದಿನಗಳ ಹಿಂದೆ ಧಾರಾಕಾರ ಮಳೆಯಾಗಿರುವ ಹಿನ್ನೆಲೆಯಲ್ಲಿ ಕಾಡಿನಲ್ಲಿ ಹಸಿರು ಮೇವು ಚಿಗುರೊಡೆದಿದೆ. ಈ ಹಿನ್ನೆಲೆಯಲ್ಲಿ ಆನೆ, ಜಿಂಕೆ, ಮೊಲ ಸೇರಿದಂತೆ ಅನೇಕ ಪ್ರಾಣಿಗಳು ಕಬಿನಿ ಹಿನ್ನೀರಿನ ಬಳಿ ಹಸಿರು ಹುಲ್ಲನ್ನು ಮೇಯಲು ಧಾವಿಸುತ್ತವೆ.
ಈ ವೇಳೆ ಸಫಾರಿಗೆ ತೆರಳುವ ಪ್ರವಾಸಿಗರು ವನ್ಯಜೀವಿಗಳ ಚಲನವಲನವನ್ನು ತಮ್ಮ ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದು, ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಾರೆ.
ಆನೆಗಳು ಮರಿಯಾನೆಗಳ ಜೊತೆ ಹಸಿರು ಹುಲ್ಲನ್ನು ತಿನ್ನುತ್ತಿರುವ ದೃಶ್ಯ ಈಗ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ನೆಟ್ಟಿಗರು ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
ಹೆಚ್ಚು ಹೆಚ್ಚು ಪ್ರಾಣಿಗಳು ಪ್ರವಾಸಿಗರ ಕಣ್ಣಿಗೆ ಕಾಣಿಸುತ್ತಿರುವ ಹಿನ್ನೆಲೆಯಲ್ಲಿ ನಾಗರಹೊಳೆ ಅರಣ್ಯ ಸಫಾರಿಗೆ ದಿನದಿಂದ ದಿನಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…
11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…
ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…