ಮೈಸೂರು

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು ಹೊಂದಿದೆ. ಆದರೆ ಇಷ್ಟು ವಿಶೇಷತೆಗಳಿದ್ದರೂ ವಿದ್ಯಾರ್ಥಿಗಳ ದಾಖಲಾತಿ ಕೇವಲ 40ಕ್ಕೆ ಸೀಮಿತವಾಗಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ.

ಜುಬಿಲಿಯಂಟ್ ಜೆನೆರಿಕ್ಸ್ ಲಿಮಿಟೆಡ್ ಕಂಪನಿಯ CSR ನಿಧಿಯಿಂದ ಸುಮಾರು 1.40 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿತವಾದ ಈ ಹೊಸ ಶಾಲಾ ಕಟ್ಟಡವನ್ನು 2022ರಲ್ಲಿ ನಂಜನಗೂಡು ಶಾಸಕ ಬಿ. ಹರ್ಷವರ್ಧನ್ ಅವರು ಉದ್ಘಾಟಿಸಿದ್ದರು. ಹೊರಗಿನಿಂದ ನೋಡಿದರೆ ಐಶಾರಾಮಿ ವಿಲ್ಲಾ ಅಥವಾ ಖಾಸಗಿ ಶಾಲೆಯಂತೆ ಕಾಣುವ ಈ ಕಟ್ಟಡದಲ್ಲಿ 11 ವಿಶಾಲ ಕ್ಲಾಸ್‌ರೂಮ್‌ಗಳು, ಸ್ಮಾರ್ಟ್ ಕ್ಲಾಸ್‌ರೂಮ್‌ಗಳು ಮತ್ತು ಕಂಪ್ಯೂಟರ್ ಲ್ಯಾಬ್, ಪೂರ್ಣಾವಯವ ಸೈನ್ಸ್ ಲ್ಯಾಬೊರೇಟರಿ, ಡೈನಿಂಗ್ ಹಾಲ್, ವಿಶಾಲ ಆಟದ ಮೈದಾನ, ಸ್ವಚ್ಛ ಮತ್ತು ಆಧುನಿಕ ಶೌಚಾಲಯಗಳು, ಗ್ರಂಥಾಲಯ, ಆಧುನಿಕ ಡಿಸೈನ್ ಡೆಸ್ಕ್ ಮತ್ತು ಚೇರ್‌ಗಳು, ಪಠ್ಯೇತರ ಚಟುವಟಿಕೆಗಳಿಗೆ ಆಟಿಕೆಗಳು ಹಾಗೂ ಹೈಟೆಕ್ ಶೈಕ್ಷಣಿಕ ಮಾದರಿಗಳಂತಹ ಅತ್ಯಾಧುನಿಕ ಸೌಲಭ್ಯಗಳಿವೆ.

ಆದರೆ ಸ್ಥಳೀಯ ಪೋಷಕರು ಖಾಸಗಿ ಶಾಲೆಗಳ ಕಡೆಗೇ ಮುಖ ಮಾಡುತ್ತಿರುವುದರಿಂದ ಸರ್ಕಾರಿ ಶಾಲೆಗೆ ದಾಖಲಾತಿ ಕಡಿಮೆಯಾಗಿದೆ ಎನ್ನುತ್ತವೆ ವರದಿಗಳು.

ಈ ಕುರಿತು ಮಾತನಾಡಿರುವ ಶಿಕ್ಷಣಾಧಿಕಾರಿ (ಬಿಇಒ) ಮಹೇಶ್ ಎಂ, ಸುಸಜ್ಜಿತ ಹಾಗೂ ಮೌಲ್ಯಯುತವಾದ ಇಂತಹ ಸರ್ಕಾರಿ ಶಾಲೆಗೆ ಮಕ್ಕಳನ್ನು ದಾಖಲು ಮಾಡುವಂತೆ ಮನವಿ ಮಾಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

9 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

10 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

12 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

12 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

14 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

14 hours ago