ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು ಹೊಂದಿದೆ. ಆದರೆ ಇಷ್ಟು ವಿಶೇಷತೆಗಳಿದ್ದರೂ ವಿದ್ಯಾರ್ಥಿಗಳ ದಾಖಲಾತಿ ಕೇವಲ 40ಕ್ಕೆ ಸೀಮಿತವಾಗಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ.
ಜುಬಿಲಿಯಂಟ್ ಜೆನೆರಿಕ್ಸ್ ಲಿಮಿಟೆಡ್ ಕಂಪನಿಯ CSR ನಿಧಿಯಿಂದ ಸುಮಾರು 1.40 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿತವಾದ ಈ ಹೊಸ ಶಾಲಾ ಕಟ್ಟಡವನ್ನು 2022ರಲ್ಲಿ ನಂಜನಗೂಡು ಶಾಸಕ ಬಿ. ಹರ್ಷವರ್ಧನ್ ಅವರು ಉದ್ಘಾಟಿಸಿದ್ದರು. ಹೊರಗಿನಿಂದ ನೋಡಿದರೆ ಐಶಾರಾಮಿ ವಿಲ್ಲಾ ಅಥವಾ ಖಾಸಗಿ ಶಾಲೆಯಂತೆ ಕಾಣುವ ಈ ಕಟ್ಟಡದಲ್ಲಿ 11 ವಿಶಾಲ ಕ್ಲಾಸ್ರೂಮ್ಗಳು, ಸ್ಮಾರ್ಟ್ ಕ್ಲಾಸ್ರೂಮ್ಗಳು ಮತ್ತು ಕಂಪ್ಯೂಟರ್ ಲ್ಯಾಬ್, ಪೂರ್ಣಾವಯವ ಸೈನ್ಸ್ ಲ್ಯಾಬೊರೇಟರಿ, ಡೈನಿಂಗ್ ಹಾಲ್, ವಿಶಾಲ ಆಟದ ಮೈದಾನ, ಸ್ವಚ್ಛ ಮತ್ತು ಆಧುನಿಕ ಶೌಚಾಲಯಗಳು, ಗ್ರಂಥಾಲಯ, ಆಧುನಿಕ ಡಿಸೈನ್ ಡೆಸ್ಕ್ ಮತ್ತು ಚೇರ್ಗಳು, ಪಠ್ಯೇತರ ಚಟುವಟಿಕೆಗಳಿಗೆ ಆಟಿಕೆಗಳು ಹಾಗೂ ಹೈಟೆಕ್ ಶೈಕ್ಷಣಿಕ ಮಾದರಿಗಳಂತಹ ಅತ್ಯಾಧುನಿಕ ಸೌಲಭ್ಯಗಳಿವೆ.
ಆದರೆ ಸ್ಥಳೀಯ ಪೋಷಕರು ಖಾಸಗಿ ಶಾಲೆಗಳ ಕಡೆಗೇ ಮುಖ ಮಾಡುತ್ತಿರುವುದರಿಂದ ಸರ್ಕಾರಿ ಶಾಲೆಗೆ ದಾಖಲಾತಿ ಕಡಿಮೆಯಾಗಿದೆ ಎನ್ನುತ್ತವೆ ವರದಿಗಳು.
ಈ ಕುರಿತು ಮಾತನಾಡಿರುವ ಶಿಕ್ಷಣಾಧಿಕಾರಿ (ಬಿಇಒ) ಮಹೇಶ್ ಎಂ, ಸುಸಜ್ಜಿತ ಹಾಗೂ ಮೌಲ್ಯಯುತವಾದ ಇಂತಹ ಸರ್ಕಾರಿ ಶಾಲೆಗೆ ಮಕ್ಕಳನ್ನು ದಾಖಲು ಮಾಡುವಂತೆ ಮನವಿ ಮಾಡಿದ್ದಾರೆ.
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…
ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…
ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…
ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ…
‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’ ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…
ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…