ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು ಹೊಂದಿದೆ. ಆದರೆ ಇಷ್ಟು ವಿಶೇಷತೆಗಳಿದ್ದರೂ ವಿದ್ಯಾರ್ಥಿಗಳ ದಾಖಲಾತಿ ಕೇವಲ 40ಕ್ಕೆ ಸೀಮಿತವಾಗಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ.
ಜುಬಿಲಿಯಂಟ್ ಜೆನೆರಿಕ್ಸ್ ಲಿಮಿಟೆಡ್ ಕಂಪನಿಯ CSR ನಿಧಿಯಿಂದ ಸುಮಾರು 1.40 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿತವಾದ ಈ ಹೊಸ ಶಾಲಾ ಕಟ್ಟಡವನ್ನು 2022ರಲ್ಲಿ ನಂಜನಗೂಡು ಶಾಸಕ ಬಿ. ಹರ್ಷವರ್ಧನ್ ಅವರು ಉದ್ಘಾಟಿಸಿದ್ದರು. ಹೊರಗಿನಿಂದ ನೋಡಿದರೆ ಐಶಾರಾಮಿ ವಿಲ್ಲಾ ಅಥವಾ ಖಾಸಗಿ ಶಾಲೆಯಂತೆ ಕಾಣುವ ಈ ಕಟ್ಟಡದಲ್ಲಿ 11 ವಿಶಾಲ ಕ್ಲಾಸ್ರೂಮ್ಗಳು, ಸ್ಮಾರ್ಟ್ ಕ್ಲಾಸ್ರೂಮ್ಗಳು ಮತ್ತು ಕಂಪ್ಯೂಟರ್ ಲ್ಯಾಬ್, ಪೂರ್ಣಾವಯವ ಸೈನ್ಸ್ ಲ್ಯಾಬೊರೇಟರಿ, ಡೈನಿಂಗ್ ಹಾಲ್, ವಿಶಾಲ ಆಟದ ಮೈದಾನ, ಸ್ವಚ್ಛ ಮತ್ತು ಆಧುನಿಕ ಶೌಚಾಲಯಗಳು, ಗ್ರಂಥಾಲಯ, ಆಧುನಿಕ ಡಿಸೈನ್ ಡೆಸ್ಕ್ ಮತ್ತು ಚೇರ್ಗಳು, ಪಠ್ಯೇತರ ಚಟುವಟಿಕೆಗಳಿಗೆ ಆಟಿಕೆಗಳು ಹಾಗೂ ಹೈಟೆಕ್ ಶೈಕ್ಷಣಿಕ ಮಾದರಿಗಳಂತಹ ಅತ್ಯಾಧುನಿಕ ಸೌಲಭ್ಯಗಳಿವೆ.
ಆದರೆ ಸ್ಥಳೀಯ ಪೋಷಕರು ಖಾಸಗಿ ಶಾಲೆಗಳ ಕಡೆಗೇ ಮುಖ ಮಾಡುತ್ತಿರುವುದರಿಂದ ಸರ್ಕಾರಿ ಶಾಲೆಗೆ ದಾಖಲಾತಿ ಕಡಿಮೆಯಾಗಿದೆ ಎನ್ನುತ್ತವೆ ವರದಿಗಳು.
ಈ ಕುರಿತು ಮಾತನಾಡಿರುವ ಶಿಕ್ಷಣಾಧಿಕಾರಿ (ಬಿಇಒ) ಮಹೇಶ್ ಎಂ, ಸುಸಜ್ಜಿತ ಹಾಗೂ ಮೌಲ್ಯಯುತವಾದ ಇಂತಹ ಸರ್ಕಾರಿ ಶಾಲೆಗೆ ಮಕ್ಕಳನ್ನು ದಾಖಲು ಮಾಡುವಂತೆ ಮನವಿ ಮಾಡಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…