ಮೈಸೂರು

ದರ್ಬಾರ್ ಹಾಲ್‌ನಲ್ಲಿ ರತ್ನ ಖಚಿತ ಸಿಂಹಾಸನ ಜೋಡಣೆ

ಮೈಸೂರು : ರಾಜ ವಂಶಸ್ಥರ ಶರನ್ನವರಾತ್ರಿಯ ಪೂಜಾ ಕೈಂಕರ್ಯಕ್ಕೆ ಪೂರ್ವಭಾವಿಯಾಗಿ ಅರಮನೆಯ ಅಂಬಾವಿಲಾಸ ದರ್ಬಾರ್ ಹಾಲ್‌ನಲ್ಲಿ ರತ್ನ ಖಚಿತ ಸಿಂಹಾಸನವನ್ನು ಇಂದು ಬೆಳಗ್ಗೆ 10:05 ರಿಂದ 10:35ರ ಶುಭ ಲಗ್ನದಲ್ಲಿ ನುರಿತ ಅರಮನೆಯ ಕೆಲಸಗಾರರಿಂದ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ನೇತೃತ್ವದಲ್ಲಿ ಜೋಡಣೆ ಮಾಡಲಾಯಿತು.

ಅ. 15 ರಿಂದ ಅ. 48 ರ ವರೆಗೆ ಅರಮನೆಯಲ್ಲಿ ರಾಜ ಪರಂಪರೆಯಂತೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶರನ್ನವರಾತ್ರಿಯ ಪೂಜಾ ಕೈಂಕರ್ಯಗಳನ್ನ ರಾಜ ಪರಂಪರೆಯಂತೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಶುಭ ಲಗ್ನದಲ್ಲಿ ಸಿಂಹಾಸನವನ್ನು ಅರಮನೆಯ ಅಂಬಾ ವಿಲಾಸ ದರ್ಬಾರ್ ಹಾಲ್‌ನಲ್ಲಿ ಜೋಡಿಸಲಾಯಿತು.

ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆ ಪೂಜೆ ಸಲ್ಲಿಸಿ ಅ. 15 ರಂದು ಭಾನುವಾರ ಬೆಳಗ್ಗೆ 6 ಗಂಟೆಯಿಂದ 6.25 ರ ಶುಭ ಮುಹೂರ್ತದಲ್ಲಿ ರತ್ನ ಖಚಿತ ಸಿಂಹಾಸನಕ್ಕೆ ಸಿಂಹ ಜೋಡಣೆ ಆಗುತ್ತದೆ. ಆನಂತರ ಅಂದು ಯಧುವೀರ್ ಹಾಗೂ ತ್ರಿಷಿಕಾ ಒಡೆಯರ್‌ಗೆ ಕಂಕಣ ಧಾರಣೆ ನಡೆಯುತ್ತದೆ. ಬಳಿಕ ಶರನ್ನವರಾತ್ರಿಯ ಪೂಜೆಗಳು ಆರಂಭವಾಗಿ ಅರಮನೆಯ ಸವಾರಿ ತೊಟ್ಟಿಗೆ ಪಟ್ಟದ ಆನೆ, ಕುದುರೆ, ಹಸುಗಳು ಆಗಮಿಸುತ್ತವೆ. ಅ. 15ರ 10:25ಕ್ಕೆ ಸಿಂಹಾಸನ ಪೂಜೆ ನೆರವೇರಿಸಿ ಬಳಿಕ ರಾಜ ವಂಶಸ್ಥರ ರಾಜ ಪರಂಪರೆಯಂತೆ ಅಂದು ಖಾಸಗಿ ದರ್ಬಾರ್ ನಡೆಯಲಿದೆ. ಕೊನೆಗೆ, ಅ. 24ರ ವರೆಗೆ ಪ್ರತಿನಿತ್ಯ ಖಾಸಗಿ ದರ್ಬಾರ್ ನಡೆಸುವ ರಾಜ ವಂಶಸ್ಥರಾದ ಯಧುವೀರ್, ವಿಜಯದಶಮಿ ದಿನ ಸಂಜೆ ಕೊನೆಯ ದಿನದ ಖಾಸಗಿ ದರ್ಬಾರ್ ನಡೆಸಿ, ಸಿಂಹಾಸನದಿಂದ ಸಿಂಹ ವಿಸರ್ಜನೆ ಮಾಡಿ, ಶರನ್ನವರಾತ್ರಿಯ ಪೂಜೆಗಳನ್ನು ಕೊನೆಗೊಳಿಸುತ್ತಾರೆ.

lokesh

Recent Posts

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

15 mins ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

1 hour ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

2 hours ago

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

6 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

8 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

9 hours ago