ಟಿ.ನರಸಿಪುರ : ಅರುಂಧತಿ ನಗರದ ಊರ ಒತ್ತಿನ ಜಮೀನಿಲ್ಲಿ ಚಿರತೆ ಹೆಜ್ಜೆ ಗುರುತು ಕಾಣಿಸಿ ಕೊಂಡಿದ್ದು ಜನ ಭಯ ಭೀತರಾಗಿದ್ದಾರೆ.
ಇಲ್ಲಿನ ರೈತ ಸಂಪರ್ಕ ಕೇಂದ್ರದ ಬಳಿಯ ಸಣ್ಣಪುರಿ ನಾರಾಯಣಿ ರವರ ತೋಟದಲ್ಲಿ ಚಿರತೆ ಓಡಾಡಿದ ಹೆಜ್ಜೆ ಗುರುತು ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಗೆ ಇವರು ಮಾಹಿತಿ ನೀಡಿದ್ದಾರೆ.
ನಾರಾಯಣಿ ತೋಟದ ಗೇಟ್ ತಂತಿಬೇಲಿ ನೆಗೆದು ಪಕ್ಕದ ಜಮೀನಿನ ಕಡೆಗೆ ಹೋಗಿರುವ ಹೆಜ್ಜೆ ಗುರುತು ಪರಿಶೀಲಿಸಿದ ಅರಣ್ಯ ಸಿಬ್ಬಂದಿ ಇದು ಚಿರತೆ ಹೆಜ್ಜೆ ಗುರುತೆಂದು ಖಚಿತಪಡಿಸಿದ್ದಾರೆ. ಮುನ್ನೆಚ್ಚರಿಕೆ ವಹಿಸಿ ಚಿರತೆ ಸೆರೆಗೆ ಅರಣ್ಯ ಸಿಬ್ಬಂದಿ ಬೋನು ಇರಿಸಿದ್ದಾರೆ.
ಶನಿವಾರ ಇಲ್ಲಿ ಕಾಣಿಸಿಕೊಂಡ ಚಿರತೆ ಹೆಜ್ಜೆಗುರುತು ಭಾನುವಾರ ಕುಕ್ಕೂರಿನ ಬಳಿ ಪತ್ತೆಯಾಗಿದೆ. ದಿನಾ 30ರಿಂದ 35ಕಿಮೀ ಕ್ರಮಿಸುವ ಚಿರತೆ ಈಗಾಗಲೆ ತಲಕಾಡು ಕುಕ್ಕೂರು, ಮುಡುಕುತೊರೆ, ಬಣವೆ ಕಾವೇರಿಪುರ, ಮೂಡಲಹುಂಡಿ ಹಾಗು ಗಡಿಗ್ರಾಮ ಮಡವಾಡಿ ವ್ಯಾಪ್ತಿಯ ಜಮೀನಿನಲ್ಲಿ ಚಿರತೆ ಓಡಾಡಿಕೊಂಡಿರುವ ಮಾಹಿತಿ ಅರಣ್ಯ ಇಲಾಖೆಗೆ ಲಭ್ಯವಾಗಿದೆ.
ಹೀಗಾಗಿ ತಲಕಾಡು, ಮುಡುಕುತೊರೆ, ಕುಕ್ಕೂರು, ಬಣವೆ ನಾಲ್ಕು ಗ್ರಾಮಗಳ ಸಮೀಪದ ಜಮೀನುಗಳಲ್ಲಿ ಅರಣ್ಯ ಇಲಾಖೆ ಚಿರತೆ ಸೆರೆಗೆ ಈಗಾಗಲೆ ನಾಲ್ಕು ಬೋನು ಇರಿಸಲಾಗಿದೆ.
ಇದಲ್ಲದೆ ತಲಕಾಡು ಅರುಂಧತಿ ನಗರದ ಊರೊತ್ತಿನ ಅಕ್ಕಪಕ್ಕದ ಜಮೀನಿನಲ್ಲಿ ಚಿರತೆ ಹೆಜ್ಜೆ ಗುರುತು ಆಗಾಗ್ಗೆ ಕಾಣಿಸಿ ಕೊಂಡಿರುವ ಹಿನ್ನೆಲೆಯಲ್ಲಿ, ಈ ಭಾಗದ ಜನ ಸಂಜೆ ವೇಳೆಯಲ್ಲಿ ಓಡಾಡಲು ಭಯ ಪಡುತ್ತಿದ್ದಾರೆ.
ಹೋಬಳಿ ಭಾಗದ ಅಲ್ಲಲ್ಲಿ ಆಗಾಗ್ಗೆ ಚಿರತೆ ಕಾಣಿಸಿಕೊಂಡು ಜನ ಭಯದಲ್ಲಿದ್ದಾರೆ. ಹೀಗಾಗಿ ಚಿರತೆ ಸೆರೆಗೆ ಅರಣ್ಯ ಇಲಾಖೆ ಕೂಡಲೆ ಅಗತ್ಯ ಕ್ರಮ ಕೈಗೊಂಡು, ಜನತೆಯಲ್ಲಿ ಆವರಿಸಿರುವ ಚಿರತೆ ಭಯ ಹೋಗಲಾಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…