ಟಿ.ನರಸಿಪುರ : ಅರುಂಧತಿ ನಗರದ ಊರ ಒತ್ತಿನ ಜಮೀನಿಲ್ಲಿ ಚಿರತೆ ಹೆಜ್ಜೆ ಗುರುತು ಕಾಣಿಸಿ ಕೊಂಡಿದ್ದು ಜನ ಭಯ ಭೀತರಾಗಿದ್ದಾರೆ.
ಇಲ್ಲಿನ ರೈತ ಸಂಪರ್ಕ ಕೇಂದ್ರದ ಬಳಿಯ ಸಣ್ಣಪುರಿ ನಾರಾಯಣಿ ರವರ ತೋಟದಲ್ಲಿ ಚಿರತೆ ಓಡಾಡಿದ ಹೆಜ್ಜೆ ಗುರುತು ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಗೆ ಇವರು ಮಾಹಿತಿ ನೀಡಿದ್ದಾರೆ.
ನಾರಾಯಣಿ ತೋಟದ ಗೇಟ್ ತಂತಿಬೇಲಿ ನೆಗೆದು ಪಕ್ಕದ ಜಮೀನಿನ ಕಡೆಗೆ ಹೋಗಿರುವ ಹೆಜ್ಜೆ ಗುರುತು ಪರಿಶೀಲಿಸಿದ ಅರಣ್ಯ ಸಿಬ್ಬಂದಿ ಇದು ಚಿರತೆ ಹೆಜ್ಜೆ ಗುರುತೆಂದು ಖಚಿತಪಡಿಸಿದ್ದಾರೆ. ಮುನ್ನೆಚ್ಚರಿಕೆ ವಹಿಸಿ ಚಿರತೆ ಸೆರೆಗೆ ಅರಣ್ಯ ಸಿಬ್ಬಂದಿ ಬೋನು ಇರಿಸಿದ್ದಾರೆ.
ಶನಿವಾರ ಇಲ್ಲಿ ಕಾಣಿಸಿಕೊಂಡ ಚಿರತೆ ಹೆಜ್ಜೆಗುರುತು ಭಾನುವಾರ ಕುಕ್ಕೂರಿನ ಬಳಿ ಪತ್ತೆಯಾಗಿದೆ. ದಿನಾ 30ರಿಂದ 35ಕಿಮೀ ಕ್ರಮಿಸುವ ಚಿರತೆ ಈಗಾಗಲೆ ತಲಕಾಡು ಕುಕ್ಕೂರು, ಮುಡುಕುತೊರೆ, ಬಣವೆ ಕಾವೇರಿಪುರ, ಮೂಡಲಹುಂಡಿ ಹಾಗು ಗಡಿಗ್ರಾಮ ಮಡವಾಡಿ ವ್ಯಾಪ್ತಿಯ ಜಮೀನಿನಲ್ಲಿ ಚಿರತೆ ಓಡಾಡಿಕೊಂಡಿರುವ ಮಾಹಿತಿ ಅರಣ್ಯ ಇಲಾಖೆಗೆ ಲಭ್ಯವಾಗಿದೆ.
ಹೀಗಾಗಿ ತಲಕಾಡು, ಮುಡುಕುತೊರೆ, ಕುಕ್ಕೂರು, ಬಣವೆ ನಾಲ್ಕು ಗ್ರಾಮಗಳ ಸಮೀಪದ ಜಮೀನುಗಳಲ್ಲಿ ಅರಣ್ಯ ಇಲಾಖೆ ಚಿರತೆ ಸೆರೆಗೆ ಈಗಾಗಲೆ ನಾಲ್ಕು ಬೋನು ಇರಿಸಲಾಗಿದೆ.
ಇದಲ್ಲದೆ ತಲಕಾಡು ಅರುಂಧತಿ ನಗರದ ಊರೊತ್ತಿನ ಅಕ್ಕಪಕ್ಕದ ಜಮೀನಿನಲ್ಲಿ ಚಿರತೆ ಹೆಜ್ಜೆ ಗುರುತು ಆಗಾಗ್ಗೆ ಕಾಣಿಸಿ ಕೊಂಡಿರುವ ಹಿನ್ನೆಲೆಯಲ್ಲಿ, ಈ ಭಾಗದ ಜನ ಸಂಜೆ ವೇಳೆಯಲ್ಲಿ ಓಡಾಡಲು ಭಯ ಪಡುತ್ತಿದ್ದಾರೆ.
ಹೋಬಳಿ ಭಾಗದ ಅಲ್ಲಲ್ಲಿ ಆಗಾಗ್ಗೆ ಚಿರತೆ ಕಾಣಿಸಿಕೊಂಡು ಜನ ಭಯದಲ್ಲಿದ್ದಾರೆ. ಹೀಗಾಗಿ ಚಿರತೆ ಸೆರೆಗೆ ಅರಣ್ಯ ಇಲಾಖೆ ಕೂಡಲೆ ಅಗತ್ಯ ಕ್ರಮ ಕೈಗೊಂಡು, ಜನತೆಯಲ್ಲಿ ಆವರಿಸಿರುವ ಚಿರತೆ ಭಯ ಹೋಗಲಾಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…