ಮೈಸೂರು

ತಲಕಾಡಿನಲ್ಲಿ ಚಿರತೆ ಹೆಜ್ಜೆಗುರುತು ಪತ್ತೆ

ಟಿ.ನರಸಿಪುರ : ಅರುಂಧತಿ ನಗರದ ಊರ ಒತ್ತಿನ ಜಮೀನಿಲ್ಲಿ ಚಿರತೆ ಹೆಜ್ಜೆ ಗುರುತು ಕಾಣಿಸಿ ಕೊಂಡಿದ್ದು ಜನ ಭಯ ಭೀತರಾಗಿದ್ದಾರೆ.

ಇಲ್ಲಿನ ರೈತ ಸಂಪರ್ಕ ಕೇಂದ್ರದ ಬಳಿಯ ಸಣ್ಣಪುರಿ ನಾರಾಯಣಿ ರವರ ತೋಟದಲ್ಲಿ ಚಿರತೆ ಓಡಾಡಿದ ಹೆಜ್ಜೆ ಗುರುತು ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಗೆ ಇವರು ಮಾಹಿತಿ ನೀಡಿದ್ದಾರೆ.

ನಾರಾಯಣಿ ತೋಟದ ಗೇಟ್ ತಂತಿಬೇಲಿ ನೆಗೆದು ಪಕ್ಕದ ಜಮೀನಿನ ಕಡೆಗೆ ಹೋಗಿರುವ ಹೆಜ್ಜೆ ಗುರುತು ಪರಿಶೀಲಿಸಿದ ಅರಣ್ಯ ಸಿಬ್ಬಂದಿ ಇದು ಚಿರತೆ ಹೆಜ್ಜೆ ಗುರುತೆಂದು ಖಚಿತಪಡಿಸಿದ್ದಾರೆ. ಮುನ್ನೆಚ್ಚರಿಕೆ ವಹಿಸಿ ಚಿರತೆ ಸೆರೆಗೆ ಅರಣ್ಯ ಸಿಬ್ಬಂದಿ ಬೋನು ಇರಿಸಿದ್ದಾರೆ.

ಶನಿವಾರ ಇಲ್ಲಿ ಕಾಣಿಸಿಕೊಂಡ ಚಿರತೆ ಹೆಜ್ಜೆಗುರುತು ಭಾನುವಾರ ಕುಕ್ಕೂರಿನ ಬಳಿ ಪತ್ತೆಯಾಗಿದೆ. ದಿನಾ 30ರಿಂದ 35ಕಿಮೀ ಕ್ರಮಿಸುವ ಚಿರತೆ ಈಗಾಗಲೆ ತಲಕಾಡು ಕುಕ್ಕೂರು, ಮುಡುಕುತೊರೆ, ಬಣವೆ ಕಾವೇರಿಪುರ, ಮೂಡಲಹುಂಡಿ ಹಾಗು ಗಡಿಗ್ರಾಮ ಮಡವಾಡಿ ವ್ಯಾಪ್ತಿಯ ಜಮೀನಿನಲ್ಲಿ ಚಿರತೆ ಓಡಾಡಿಕೊಂಡಿರುವ ಮಾಹಿತಿ ಅರಣ್ಯ ಇಲಾಖೆಗೆ ಲಭ್ಯವಾಗಿದೆ.

ಹೀಗಾಗಿ ತಲಕಾಡು, ಮುಡುಕುತೊರೆ, ಕುಕ್ಕೂರು, ಬಣವೆ ನಾಲ್ಕು ಗ್ರಾಮಗಳ ಸಮೀಪದ ಜಮೀನುಗಳಲ್ಲಿ ಅರಣ್ಯ ಇಲಾಖೆ ಚಿರತೆ ಸೆರೆಗೆ ಈಗಾಗಲೆ ನಾಲ್ಕು ಬೋನು ಇರಿಸಲಾಗಿದೆ.

ಇದಲ್ಲದೆ ತಲಕಾಡು ಅರುಂಧತಿ ನಗರದ ಊರೊತ್ತಿನ ಅಕ್ಕಪಕ್ಕದ ಜಮೀನಿನಲ್ಲಿ ಚಿರತೆ ಹೆಜ್ಜೆ ಗುರುತು ಆಗಾಗ್ಗೆ ಕಾಣಿಸಿ ಕೊಂಡಿರುವ ಹಿನ್ನೆಲೆಯಲ್ಲಿ, ಈ ಭಾಗದ ಜನ ಸಂಜೆ ವೇಳೆಯಲ್ಲಿ ಓಡಾಡಲು ಭಯ ಪಡುತ್ತಿದ್ದಾರೆ.

ಹೋಬಳಿ ಭಾಗದ ಅಲ್ಲಲ್ಲಿ ಆಗಾಗ್ಗೆ ಚಿರತೆ ಕಾಣಿಸಿಕೊಂಡು ಜನ ಭಯದಲ್ಲಿದ್ದಾರೆ. ಹೀಗಾಗಿ ಚಿರತೆ ಸೆರೆಗೆ ಅರಣ್ಯ ಇಲಾಖೆ ಕೂಡಲೆ ಅಗತ್ಯ ಕ್ರಮ ಕೈಗೊಂಡು, ಜನತೆಯಲ್ಲಿ ಆವರಿಸಿರುವ ಚಿರತೆ ಭಯ ಹೋಗಲಾಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

lokesh

Recent Posts

ಭಾರತೀಯ ಸೇನೆಯಿಂದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ಹೊಸ ವಿಡಿಯೋ ಬಿಡುಗಡೆ

ನವದೆಹಲಿ: ಸೇನಾ ದಿನದ ಅಂಗವಾಗಿ ಇಂದು ಭಾರತೀಯ ಸೇನೆಯು ಹೊಸ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕಳೆದ ವರ್ಷ ನಡೆದ…

19 mins ago

ದಳಪತಿ ವಿಜಯ್‌ ಅಭಿನಯದ ಜನನಾಯಗನ್‌ ಚಿತ್ರಕ್ಕೆ ಸುಪ್ರೀಂ ಬಿಗ್‌ಶಾಕ್‌

ಜನನಾಯಗನ್‌ ಚಿತ್ರವನ್ನು ಮುಂದೂಡಿದ್ದಕ್ಕೆ ಸಂಬಂಧಿಸಿದಂತೆ ಸಿಬಿಎಫ್ಸಿ ಅನುಮತಿ ಕೋರಿ ಕೆವಿಎನ್‌ ಪ್ರೊಡಕ್ಷನ್ಸ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ಇಂದು ವಜಾಗೊಳಿಸಿದೆ. ಸೆನ್ಸಾರ್‌…

39 mins ago

ಪ್ರೀತಿ ಹೆಸರಿನಲ್ಲಿ ವಂಚನೆ: ಡೆತ್‌ನೋಟ್‌ ಬರೆದಿಟ್ಟು ಯುವತಿ ಆತ್ಮಹತ್ಯೆಗೆ ಯತ್ನ

ರಾಮನಗರ: ಪ್ರೀತಿ ಹೆಸರಿನಲ್ಲಿ ಯುವತಿಯೊಂದಿಗೆ ದೈಹಿಕ ಸಂಪರ್ಕ ನಡೆಸಿ ಯುವಕನೊಬ್ಬ ಕೈಕೊಟ್ಟಿದ್ದು, ಮನನೊಂದ ಯುವತಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿರುವ…

55 mins ago

ದಲಿತರೊಬ್ಬರು ಸಿಎಂ ಆಗದಿರುವ ಬಗ್ಗೆ ನಮಗೆ ನೋವಿದೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ದಲಿತ ಸಿಎಂ ಆಗದಿರುವುದರ ಬಗ್ಗೆ ನಮಗೆ ನೋವಿದೆ. ಹೈಕಮಾಂಡ್‌ ಮನಸ್ಸು ಮಾಡಿದರೆ ಎಲ್ಲಾ ಆಗುತ್ತದೆ ಎಂದು ಸಚಿವ…

57 mins ago

ವಿಧಾನಸಭೆ ಚುನಾವಣೆಗೆ ಪ್ರತಾಪ್‌ ಸಿಂಹ ಸ್ಪರ್ಧೆ ಫಿಕ್ಸ್‌

ಮೈಸೂರು: ರಾಜ್ಯ ರಾಜಕಾರಣಕ್ಕೆ ಬರುವ ಸುಳಿವು ನೀಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್‌…

58 mins ago

ದಕ್ಷಿಣ ಒಳನಾಡಿನಲ್ಲಿ ತಗ್ಗಿದ ಚಳಿ ಅಬ್ಬರ: ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಎಚ್ಚರಿಕೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಚಳಿಯ ಅಬ್ಬರ ತಗ್ಗಿದೆಯಾದರೂ ಮೋಡ ಕವಿದ ವಾತಾವರಣವಿರಲಿದೆ. ರಾಜ್ಯದಲ್ಲಿ ಒಂದು…

59 mins ago