ಟಿ.ನರಸಿಪುರ : ಅರುಂಧತಿ ನಗರದ ಊರ ಒತ್ತಿನ ಜಮೀನಿಲ್ಲಿ ಚಿರತೆ ಹೆಜ್ಜೆ ಗುರುತು ಕಾಣಿಸಿ ಕೊಂಡಿದ್ದು ಜನ ಭಯ ಭೀತರಾಗಿದ್ದಾರೆ.
ಇಲ್ಲಿನ ರೈತ ಸಂಪರ್ಕ ಕೇಂದ್ರದ ಬಳಿಯ ಸಣ್ಣಪುರಿ ನಾರಾಯಣಿ ರವರ ತೋಟದಲ್ಲಿ ಚಿರತೆ ಓಡಾಡಿದ ಹೆಜ್ಜೆ ಗುರುತು ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಗೆ ಇವರು ಮಾಹಿತಿ ನೀಡಿದ್ದಾರೆ.
ನಾರಾಯಣಿ ತೋಟದ ಗೇಟ್ ತಂತಿಬೇಲಿ ನೆಗೆದು ಪಕ್ಕದ ಜಮೀನಿನ ಕಡೆಗೆ ಹೋಗಿರುವ ಹೆಜ್ಜೆ ಗುರುತು ಪರಿಶೀಲಿಸಿದ ಅರಣ್ಯ ಸಿಬ್ಬಂದಿ ಇದು ಚಿರತೆ ಹೆಜ್ಜೆ ಗುರುತೆಂದು ಖಚಿತಪಡಿಸಿದ್ದಾರೆ. ಮುನ್ನೆಚ್ಚರಿಕೆ ವಹಿಸಿ ಚಿರತೆ ಸೆರೆಗೆ ಅರಣ್ಯ ಸಿಬ್ಬಂದಿ ಬೋನು ಇರಿಸಿದ್ದಾರೆ.
ಶನಿವಾರ ಇಲ್ಲಿ ಕಾಣಿಸಿಕೊಂಡ ಚಿರತೆ ಹೆಜ್ಜೆಗುರುತು ಭಾನುವಾರ ಕುಕ್ಕೂರಿನ ಬಳಿ ಪತ್ತೆಯಾಗಿದೆ. ದಿನಾ 30ರಿಂದ 35ಕಿಮೀ ಕ್ರಮಿಸುವ ಚಿರತೆ ಈಗಾಗಲೆ ತಲಕಾಡು ಕುಕ್ಕೂರು, ಮುಡುಕುತೊರೆ, ಬಣವೆ ಕಾವೇರಿಪುರ, ಮೂಡಲಹುಂಡಿ ಹಾಗು ಗಡಿಗ್ರಾಮ ಮಡವಾಡಿ ವ್ಯಾಪ್ತಿಯ ಜಮೀನಿನಲ್ಲಿ ಚಿರತೆ ಓಡಾಡಿಕೊಂಡಿರುವ ಮಾಹಿತಿ ಅರಣ್ಯ ಇಲಾಖೆಗೆ ಲಭ್ಯವಾಗಿದೆ.
ಹೀಗಾಗಿ ತಲಕಾಡು, ಮುಡುಕುತೊರೆ, ಕುಕ್ಕೂರು, ಬಣವೆ ನಾಲ್ಕು ಗ್ರಾಮಗಳ ಸಮೀಪದ ಜಮೀನುಗಳಲ್ಲಿ ಅರಣ್ಯ ಇಲಾಖೆ ಚಿರತೆ ಸೆರೆಗೆ ಈಗಾಗಲೆ ನಾಲ್ಕು ಬೋನು ಇರಿಸಲಾಗಿದೆ.
ಇದಲ್ಲದೆ ತಲಕಾಡು ಅರುಂಧತಿ ನಗರದ ಊರೊತ್ತಿನ ಅಕ್ಕಪಕ್ಕದ ಜಮೀನಿನಲ್ಲಿ ಚಿರತೆ ಹೆಜ್ಜೆ ಗುರುತು ಆಗಾಗ್ಗೆ ಕಾಣಿಸಿ ಕೊಂಡಿರುವ ಹಿನ್ನೆಲೆಯಲ್ಲಿ, ಈ ಭಾಗದ ಜನ ಸಂಜೆ ವೇಳೆಯಲ್ಲಿ ಓಡಾಡಲು ಭಯ ಪಡುತ್ತಿದ್ದಾರೆ.
ಹೋಬಳಿ ಭಾಗದ ಅಲ್ಲಲ್ಲಿ ಆಗಾಗ್ಗೆ ಚಿರತೆ ಕಾಣಿಸಿಕೊಂಡು ಜನ ಭಯದಲ್ಲಿದ್ದಾರೆ. ಹೀಗಾಗಿ ಚಿರತೆ ಸೆರೆಗೆ ಅರಣ್ಯ ಇಲಾಖೆ ಕೂಡಲೆ ಅಗತ್ಯ ಕ್ರಮ ಕೈಗೊಂಡು, ಜನತೆಯಲ್ಲಿ ಆವರಿಸಿರುವ ಚಿರತೆ ಭಯ ಹೋಗಲಾಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…