ಟಿ.ನರಸಿಪುರ : ಅರುಂಧತಿ ನಗರದ ಊರ ಒತ್ತಿನ ಜಮೀನಿಲ್ಲಿ ಚಿರತೆ ಹೆಜ್ಜೆ ಗುರುತು ಕಾಣಿಸಿ ಕೊಂಡಿದ್ದು ಜನ ಭಯ ಭೀತರಾಗಿದ್ದಾರೆ.
ಇಲ್ಲಿನ ರೈತ ಸಂಪರ್ಕ ಕೇಂದ್ರದ ಬಳಿಯ ಸಣ್ಣಪುರಿ ನಾರಾಯಣಿ ರವರ ತೋಟದಲ್ಲಿ ಚಿರತೆ ಓಡಾಡಿದ ಹೆಜ್ಜೆ ಗುರುತು ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಗೆ ಇವರು ಮಾಹಿತಿ ನೀಡಿದ್ದಾರೆ.
ನಾರಾಯಣಿ ತೋಟದ ಗೇಟ್ ತಂತಿಬೇಲಿ ನೆಗೆದು ಪಕ್ಕದ ಜಮೀನಿನ ಕಡೆಗೆ ಹೋಗಿರುವ ಹೆಜ್ಜೆ ಗುರುತು ಪರಿಶೀಲಿಸಿದ ಅರಣ್ಯ ಸಿಬ್ಬಂದಿ ಇದು ಚಿರತೆ ಹೆಜ್ಜೆ ಗುರುತೆಂದು ಖಚಿತಪಡಿಸಿದ್ದಾರೆ. ಮುನ್ನೆಚ್ಚರಿಕೆ ವಹಿಸಿ ಚಿರತೆ ಸೆರೆಗೆ ಅರಣ್ಯ ಸಿಬ್ಬಂದಿ ಬೋನು ಇರಿಸಿದ್ದಾರೆ.
ಶನಿವಾರ ಇಲ್ಲಿ ಕಾಣಿಸಿಕೊಂಡ ಚಿರತೆ ಹೆಜ್ಜೆಗುರುತು ಭಾನುವಾರ ಕುಕ್ಕೂರಿನ ಬಳಿ ಪತ್ತೆಯಾಗಿದೆ. ದಿನಾ 30ರಿಂದ 35ಕಿಮೀ ಕ್ರಮಿಸುವ ಚಿರತೆ ಈಗಾಗಲೆ ತಲಕಾಡು ಕುಕ್ಕೂರು, ಮುಡುಕುತೊರೆ, ಬಣವೆ ಕಾವೇರಿಪುರ, ಮೂಡಲಹುಂಡಿ ಹಾಗು ಗಡಿಗ್ರಾಮ ಮಡವಾಡಿ ವ್ಯಾಪ್ತಿಯ ಜಮೀನಿನಲ್ಲಿ ಚಿರತೆ ಓಡಾಡಿಕೊಂಡಿರುವ ಮಾಹಿತಿ ಅರಣ್ಯ ಇಲಾಖೆಗೆ ಲಭ್ಯವಾಗಿದೆ.
ಹೀಗಾಗಿ ತಲಕಾಡು, ಮುಡುಕುತೊರೆ, ಕುಕ್ಕೂರು, ಬಣವೆ ನಾಲ್ಕು ಗ್ರಾಮಗಳ ಸಮೀಪದ ಜಮೀನುಗಳಲ್ಲಿ ಅರಣ್ಯ ಇಲಾಖೆ ಚಿರತೆ ಸೆರೆಗೆ ಈಗಾಗಲೆ ನಾಲ್ಕು ಬೋನು ಇರಿಸಲಾಗಿದೆ.
ಇದಲ್ಲದೆ ತಲಕಾಡು ಅರುಂಧತಿ ನಗರದ ಊರೊತ್ತಿನ ಅಕ್ಕಪಕ್ಕದ ಜಮೀನಿನಲ್ಲಿ ಚಿರತೆ ಹೆಜ್ಜೆ ಗುರುತು ಆಗಾಗ್ಗೆ ಕಾಣಿಸಿ ಕೊಂಡಿರುವ ಹಿನ್ನೆಲೆಯಲ್ಲಿ, ಈ ಭಾಗದ ಜನ ಸಂಜೆ ವೇಳೆಯಲ್ಲಿ ಓಡಾಡಲು ಭಯ ಪಡುತ್ತಿದ್ದಾರೆ.
ಹೋಬಳಿ ಭಾಗದ ಅಲ್ಲಲ್ಲಿ ಆಗಾಗ್ಗೆ ಚಿರತೆ ಕಾಣಿಸಿಕೊಂಡು ಜನ ಭಯದಲ್ಲಿದ್ದಾರೆ. ಹೀಗಾಗಿ ಚಿರತೆ ಸೆರೆಗೆ ಅರಣ್ಯ ಇಲಾಖೆ ಕೂಡಲೆ ಅಗತ್ಯ ಕ್ರಮ ಕೈಗೊಂಡು, ಜನತೆಯಲ್ಲಿ ಆವರಿಸಿರುವ ಚಿರತೆ ಭಯ ಹೋಗಲಾಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…
ಬೆಂಗಳೂರು: ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…
ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…
ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…
ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…
ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…