ಮೈಸೂರು

ತಲಕಾಡಿನಲ್ಲಿ ಚಿರತೆ ಹೆಜ್ಜೆಗುರುತು ಪತ್ತೆ

ಟಿ.ನರಸಿಪುರ : ಅರುಂಧತಿ ನಗರದ ಊರ ಒತ್ತಿನ ಜಮೀನಿಲ್ಲಿ ಚಿರತೆ ಹೆಜ್ಜೆ ಗುರುತು ಕಾಣಿಸಿ ಕೊಂಡಿದ್ದು ಜನ ಭಯ ಭೀತರಾಗಿದ್ದಾರೆ.

ಇಲ್ಲಿನ ರೈತ ಸಂಪರ್ಕ ಕೇಂದ್ರದ ಬಳಿಯ ಸಣ್ಣಪುರಿ ನಾರಾಯಣಿ ರವರ ತೋಟದಲ್ಲಿ ಚಿರತೆ ಓಡಾಡಿದ ಹೆಜ್ಜೆ ಗುರುತು ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಗೆ ಇವರು ಮಾಹಿತಿ ನೀಡಿದ್ದಾರೆ.

ನಾರಾಯಣಿ ತೋಟದ ಗೇಟ್ ತಂತಿಬೇಲಿ ನೆಗೆದು ಪಕ್ಕದ ಜಮೀನಿನ ಕಡೆಗೆ ಹೋಗಿರುವ ಹೆಜ್ಜೆ ಗುರುತು ಪರಿಶೀಲಿಸಿದ ಅರಣ್ಯ ಸಿಬ್ಬಂದಿ ಇದು ಚಿರತೆ ಹೆಜ್ಜೆ ಗುರುತೆಂದು ಖಚಿತಪಡಿಸಿದ್ದಾರೆ. ಮುನ್ನೆಚ್ಚರಿಕೆ ವಹಿಸಿ ಚಿರತೆ ಸೆರೆಗೆ ಅರಣ್ಯ ಸಿಬ್ಬಂದಿ ಬೋನು ಇರಿಸಿದ್ದಾರೆ.

ಶನಿವಾರ ಇಲ್ಲಿ ಕಾಣಿಸಿಕೊಂಡ ಚಿರತೆ ಹೆಜ್ಜೆಗುರುತು ಭಾನುವಾರ ಕುಕ್ಕೂರಿನ ಬಳಿ ಪತ್ತೆಯಾಗಿದೆ. ದಿನಾ 30ರಿಂದ 35ಕಿಮೀ ಕ್ರಮಿಸುವ ಚಿರತೆ ಈಗಾಗಲೆ ತಲಕಾಡು ಕುಕ್ಕೂರು, ಮುಡುಕುತೊರೆ, ಬಣವೆ ಕಾವೇರಿಪುರ, ಮೂಡಲಹುಂಡಿ ಹಾಗು ಗಡಿಗ್ರಾಮ ಮಡವಾಡಿ ವ್ಯಾಪ್ತಿಯ ಜಮೀನಿನಲ್ಲಿ ಚಿರತೆ ಓಡಾಡಿಕೊಂಡಿರುವ ಮಾಹಿತಿ ಅರಣ್ಯ ಇಲಾಖೆಗೆ ಲಭ್ಯವಾಗಿದೆ.

ಹೀಗಾಗಿ ತಲಕಾಡು, ಮುಡುಕುತೊರೆ, ಕುಕ್ಕೂರು, ಬಣವೆ ನಾಲ್ಕು ಗ್ರಾಮಗಳ ಸಮೀಪದ ಜಮೀನುಗಳಲ್ಲಿ ಅರಣ್ಯ ಇಲಾಖೆ ಚಿರತೆ ಸೆರೆಗೆ ಈಗಾಗಲೆ ನಾಲ್ಕು ಬೋನು ಇರಿಸಲಾಗಿದೆ.

ಇದಲ್ಲದೆ ತಲಕಾಡು ಅರುಂಧತಿ ನಗರದ ಊರೊತ್ತಿನ ಅಕ್ಕಪಕ್ಕದ ಜಮೀನಿನಲ್ಲಿ ಚಿರತೆ ಹೆಜ್ಜೆ ಗುರುತು ಆಗಾಗ್ಗೆ ಕಾಣಿಸಿ ಕೊಂಡಿರುವ ಹಿನ್ನೆಲೆಯಲ್ಲಿ, ಈ ಭಾಗದ ಜನ ಸಂಜೆ ವೇಳೆಯಲ್ಲಿ ಓಡಾಡಲು ಭಯ ಪಡುತ್ತಿದ್ದಾರೆ.

ಹೋಬಳಿ ಭಾಗದ ಅಲ್ಲಲ್ಲಿ ಆಗಾಗ್ಗೆ ಚಿರತೆ ಕಾಣಿಸಿಕೊಂಡು ಜನ ಭಯದಲ್ಲಿದ್ದಾರೆ. ಹೀಗಾಗಿ ಚಿರತೆ ಸೆರೆಗೆ ಅರಣ್ಯ ಇಲಾಖೆ ಕೂಡಲೆ ಅಗತ್ಯ ಕ್ರಮ ಕೈಗೊಂಡು, ಜನತೆಯಲ್ಲಿ ಆವರಿಸಿರುವ ಚಿರತೆ ಭಯ ಹೋಗಲಾಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

lokesh

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

22 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

22 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

22 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

22 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

22 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

22 hours ago